ಹೊರ ಗುತ್ತಿಗೆ ಆಧಾರ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಬೆಂಗಳೂರು.16.ಏಪ್ರಿಲ್ .25:- ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಲು ಹೊರ ಗುತ್ತಿಗೆ ಆಧಾರ ಮೇಲೆ ಘಟಕ ಆಡಳಿತಾಧಿಕಾರಿಗಳು 02 ಹುದ್ದೆ, ಆಪ್ತ ಸಮಾಲೋಚಕರು 01 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರು / ಕೇಸ್ ವರ್ಕರ್ 06 ಹುದ್ದೆ, ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) 08 ಹುದ್ದೆ ಮತ್ತು ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ 08 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ :

ಘಟಕ ಆಡಳಿತಾಧಿಕಾರಿಗಳು ಹುದ್ದೆಗೆ ಎಂ.ಎಸ್ ಡಬ್ಲೂ., ಸ್ನಾತಕೋತ್ತರ ಕಾನೂನು ಪದವಿ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಹೊಂದಿರಬೇಕು. ಆಪ್ತ ಸಮಾಲೋಚಕರ ಹುದ್ದೆಗೆ ಎಂ.ಎಸ್ ಡಬ್ಲೂ., ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ & ಫ್ಯಾಮಿಲಿರಿಲೇಷನ್) ಎಂ.ಎಸ್.ಸಿ. ಸೈಕಾಲಜಿ., ಎಂ.ಎಸ್.ಸಿ ಸೈಕಿಯಾಟ್ರಿ ಪದವಿ ಹೊಂದಿರಬೇಕು. ಸಮಾಜ ಸೇವಾ ಕಾರ್ಯಕರ್ತರ / ಕೇಸ್ ವರ್ಕರ್ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ, ಮಹಿಳಾ ಅಧ್ಯಯನ) ಪದವಿ ಹೊಂದಿರಬೇಕು. ಕಾನೂನು ಸಲಹೆಗಾರರು, ವಕೀಲರು (ಪ್ಯಾರಾ ಲೀಗಲ್ ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು.

ವಿವಿದೋದ್ದೇಶ ಸ್ವಚ್ಛತಗಾರರು / ಸೆಕ್ಯೂರಿಟಿ (ರಾತ್ರಿ ಕಾವಲು) ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು.

ಆಸಕ್ತ ಮಹಿಳಾ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರವನ್ನು ಎಲ್ಲಾ ದಾಖಲೆಗಳೊಂದಿಗೆ ಮೇ 02 ರ ಸಂಜೆ 5.30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080- 29578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

7 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

7 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

7 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

7 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

10 hours ago