ಹೊಸ PU ಕಾಲೇಜು’ ತೆರೆಯಲು ಅರ್ಜಿ ಆಹ್ವಾನ. ಪದವಿ ಪೂರ್ವ ಕಾಲೇಜು.!

ಕರ್ನಾಟಕ ರಾಜ್ಯದಲ್ಲಿ ಹೊಸ ಪದವಿ ಪೂರ್ವ ಕಾಲೇಜು ತೆರೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆಯ್ ಸಂಘಸಂಸ್ಥೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸದಾಗಿ ಪಿಯು ಕಾಲೇಜು ತೆರೆಯಲು ಇಚ್ಚೆ ಇದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಪದವಿ ಪೂರ್ವದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿಯಮಗಳು 2024ರ ನಿಯಮ 5 ರನ್ವಯ 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ರವರುಗಳು ಅರ್ಜಿಗಳನ್ನು ಆನ್-ಲೈನ್ (online)ಮೂಲಕ “ಅರ್ಜಿ ನಮೂನೆ” (Form-1 ಮತ್ತು Form-lll) ರಲ್ಲಿ ದಿನಾಂಕ:30-12-2024 ಸಂಜೆ 05:00 ರಿಂದ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‌ಸೈಟ್ https://pue.karnataka.gov.in/ ಇಲ್ಲಿಗೆ ಭೇಟಿ ನೀಡಿ ಪಡೆಯಬಹುದಾಗಿದೆ.

2023-24 ಮತ್ತು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಆನ್‌-ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂಬುದಾಗಿ ತಿಳಿಸಿದೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

5 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

5 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

5 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

5 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

5 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

8 hours ago