ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ,
ಬೌದ್ಧಿಕ ಬೆಳವಣಿಗೆಯಾಗುತ್ತದೆ – ರಾಜಶೇಖರ ಜವಳೆ
ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಗುವುದರೊಂದಿಗೆ ಮಾನಸಿಕ ಒತ್ತಡಗಳು ಕಡಿಮೆಯಾಗಿ ಏಕಾಗ್ರತೆ ಚಿತ್ತತೆಗೆ ಸಹಕಾರಿಯಾಗುತ್ತದೆ. ಪ್ರತಿಯೋರ್ವ ಕ್ರೀಡಾಪಟುಗಳು ಓದಿನೊಂದಿಗೆ ನಿತ್ಯ ಒಂದು ತಾಸು ಆಟಗಳನ್ನು ಆಡಬೇಕು ಎಂದು ಬೀದರ ಜಿಲ್ಲಾ ಟೇಬಲ್ ಟೆನ್ನಿಸ್ ಸಂಘದ ಅಧ್ಯಕ್ಷ ರಾಜಶೇಖರ ಬಸವಣಪ್ಪ ಜವಳೆ ಅವರು ತರಬೇತಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಬೀದರ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೀದರ ಜಿಲ್ಲಾ ಟೇಬಲ್ ಟೆನ್ನಿಸ್ ಸಂಘದ ಸಂಯುಕ್ತಾಶ್ರಯದಲ್ಲಿ ೨೦೨೫-೨೬ನೇ ಸಾಲಿನ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಸಮಾರೋಪ ಸಮಾರಂಬದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡುತಿದ್ದರು. ಮುಂದುವರೆದು ಮಾತನಾಡಿದ ಅವರು ಈ ತರಬೇತಿಯಲ್ಲಿ ೧೬ ಜನ ವಿದ್ಯಾರ್ಥಿ-ವಿದ್ಯಾರ್ಥಿನಿಯರುಗಳಿಗೆ ಅಥ್ಲೆಟಿಕ್, ವಾಲಿಬಾಲ್, ಬಾಸ್ಕೇಟ್ ಬಾಲ್, ಹಾಕಿ, ಬ್ಯಾಡ್ಮಿಂಟಿನ್, ಫುಟಬಾಲ್, ಟೇಬಲ್ ಟೆನ್ನಿಸ್ ಕ್ರೀಡೆಗಳ ತರಬೇತಿ ನೀಡಲಾಯಿತು. ಎಂ. ಎ. ಖಾನ್, ವಿಶಾಲ ಪವಾರ, ಮತ್ತು ಸುನೀಲ ಮೊಟ್ಟಿರವರುಗಳು ೨೧ ದಿನಗಳ ಕಾಲ ತರಬೇತಿ ಉತ್ತಮವಾಗಿ ನೀಡಿರುವರು ಜಿಲ್ಲೆಯಲ್ಲಿ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಾಗಬೇಕೆಂದು ಜವಳೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸುರೇಶ ಹಳೆಂಬರ, ವೀರೇಶ ವಡ್ಡಿ, ನರೇಶ, ಚಂದ್ರಕಾAತ ಅಪ್ಪಾಜಿ, ವಿದ್ಯಾವತಿ ಕೊಪ್ಪರದ, ಶ್ರೀನಿವಾಸ, ಆನಮದ ಪಾಟೀಲ ಸೇರಿದಂತೆ ಇತರೆ ಗಣ್ಯರು ವೇದಿಕೆಯ ಮೇಲಿದ್ದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…