Home » ಲೈವ್ ನ್ಯೂಸ್ » 10 ವರ್ಷ ಕೂಲಿ ಮಾಡಿದರೆ ಸೇವೆ ಕಾಯಂಗೆ ಅರ್ಹ: ಹೈಕೋರ್ಟ್

10 ವರ್ಷ ಕೂಲಿ ಮಾಡಿದರೆ ಸೇವೆ ಕಾಯಂಗೆ ಅರ್ಹ: ಹೈಕೋರ್ಟ್

Facebook
X
WhatsApp
Telegram

ಮಂಜೂರಾತಿ ಹುದ್ದೆಯಲ್ಲಿ ದಿನಗೂಲಿ ಪರಿಗಣಿಸಲು ಕೋರ್ಟ್ ಸೂಚನೆ

ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಆದೇಶ ಮಾಡಿರುವ ಹೈಕೋರ್ಟ್, ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹನಾಗುತ್ತಾನೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹ ಮತ್ತು ಹಿಂಬರಹ ಪುರಸ್ಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ(ಕೆಎಟಿ)ಆದೇಶರದ್ದುಪಡಿಸುವಂತೆ ಕೋರಿ ಆನೇಕಲ್ ವಲಯದಲ್ಲಿ ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಪಿ.ಜುಂಜಪ್ಪ (53) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರ ಪೀಠ ಈ ಆದೇಶ ಮಾಡಿದೆ.

ದಿನಗೂಲಿ ನೌಕರನಾಗಿರುವ ಜುಂಜಪ್ಪ ಅವರು ಕಾಯಂ ಉದ್ಯೋಗಿಗೆ ಸರಿಸಮಾನವಾಗಿ 30 ವರ್ಷ ನಿರಂತರವಾಗಿ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಅರಣ್ಯ ಇಲಾಖೆ ಇವರ ಸೇವೆ ಕಾಯಂಗೊಳಿಸಲು ನಿರಾಕರಿಸಿರುವ ಜೊತೆಗೆ 30 ವರ್ಷ ಆತ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿಲ್ಲ. ಜುಂಜಪ್ಪ ಅವರ ವೇತನ, ಸೇವಾ ದಾಖಲೆಗಳು ಮತ್ತು ಅರಣ್ಯ ಇಲಾಖೆಯ ಅಧಿಕೃತ ಪತ್ರ ವ್ಯವಹಾರಗಳನ್ನು ಮೌಲ್ಯಮಾಪನ ಮಾಡುವಲ್ಲಿ ಕೆಎಟಿ ವಿಫಲವಾಗಿದೆ.

ಔಪಚಾರಿಕ ನೇಮಕ ಪತ್ರವನ್ನು ಹಾಜರುಪಡಿಸಿಲ್ಲ ಎಂಬ ಏಕೈಕ ಅಂಶ ಸೇವೆ ಸಲ್ಲಿಸಿರುವ ಉದ್ಯೋಗಿಯ ಸೇವಾ ಕಾಯಮಾತಿಯ ಕಾನೂನುಬದ್ದ ಹಕ್ಕನ್ನು ನಿರಾಕರಿಸುವುದಕ್ಕೆ ಆಧಾರವಾಗುವುದಿಲ್ಲ ಎಂದು ಪೀಠ ಆದೇಶಿಸಿದೆ.

ಅಂತಿಮವಾಗಿ ಕೆಎಟಿ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಜುಂಜಪ್ಪ ಅವರನ್ನು ಸೇವೆಗೆ ಕಾಯಂಗೊಳಿಸುವಂತೆ ರಾಜ್ಯ ಸರ್ಕಾರ ಹಾಗೂ ಅರಣ್ಯ

ಇಲಾಖೆಗೆ ನಿರ್ದೇಶಿಸಿದೆ. ಪ್ರಕರಣದ ಹಿನ್ನೆಲೆ: ಜುಂಜಪ್ಪ ದಿನಗೂಲಿ ಆಧಾರದ

ಮೇಲೆ 30 ವರ್ಷ ನಿರಂತರವಾಗಿ ಅರಣ್ಯ ವೀಕ್ಷಕ ಹಾಗೂ ಚಾಲಕನಾಗಿ ಕೆಲಸ ಮಾಡಿದ್ದರು. ಅಡೆತಡೆಯಿ ಲ್ಲದೆ ಕಾರ್ಯ ನಿರ್ವಹಿಸಿದ್ದರೂ ಅವರ ಸೇವೆ ಕಾಯಂಗೊಳಿಸಲು ನಿರಾಕರಿಸಿ 2016ರ ಆ.29ರಂದು ಅರಣ್ಯ ಇಲಾಖೆ ಹಿಂಬರಹ ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೆಎಟಿ ವಜಾಗೊಳಿಸಿ 2019ರ ಜು.31ರಂದು ಆದೇಶಿಸಿತ್ತು. ಇದರಿಂದ ಜುಂಜಪ್ಪ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ನೌಕರರಂತೆ 30 ವರ್ಷ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ಸೇವೆ ಕಾಯಮಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹಲವು ಆದೇಶದಲ್ಲಿ ನಿಗದಿಪಡಿಸಿದ ಮಾನದಂಡಗಳನ್ನು ಜುಂಜಪ್ಪ ಪೂರೈಸುತ್ತಾರೆ. ಅವರ ಸೇವೆ ಕಾಯಂಗೊಳಿಸಲು ನಿರಾಕರಿಸುವುದು ಸಂವಿಧಾನದ ಪರಿಚ್ಛೇದ 14 ಮತ್ತು 16ರ ಉಲ್ಲಂಘನೆಯಾಗಿದೆ. ಮಂಜೂರಾದಹುದ್ದೆಗಳಲ್ಲಿ 10 ವರ್ಷ ನಿರಂತರವಾಗಿ ಸೇವೆ ಸಲ್ಲಿಸಿದವರ ಸೇವೆ ಕಾಯಂಗೊಳಿಸಬೇಕು ಎಂದು ಈಗಾಗಲೇಹೈಕೋರ್ಟ್ ಧಾರವಾಡ ನ್ಯಾಯಾಲಯವು ಆದೇಶಿಸಿದೆ ಎಂದು ವಿವರಿಸಿದ್ದರು.

ಈ ಮನವಿಗೆ ಆಕ್ಷೇಪಿಸಿದ್ದಸರ್ಕಾರದ ಪರವಕೀಲರು, ಮಂಜೂರಾತಿ ಹುದ್ದೆಯಲ್ಲಿ ಅರ್ಜಿದಾರರು ಸೇವೆ ಸಲ್ಲಿಸಿಲ್ಲ. ದಿನಗೂಲಿ ನೌಕರರುಸೇವೆಕಾಯಂಗೊಳಿ ಕ್ಷೇಮು ಮಾಡುವ ಹಕ್ಕು ಹೊಂದಿರುವುದಿಲ್ಲ. ಮಂಜೂರಾತಿ ಹುದ್ದೆಯ ಸೇವೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿರುವುದನ್ನು ದೃಢಪಡಿಸಲು ಅರ್ಜಿದಾರರು ಯಾವುದೇ ಔಪಚಾರಿಕ ನೇಮಕಾತಿ ಪತ್ರವನ್ನು ಹಾಜರುಪಡಿಸಿಲ್ಲ. ಅರಣ್ಯ ಇಲಾಖೆ ನೇಮಕಾತಿಗಳನ್ನು ನಿಗದಿತ ಆಯ್ಕೆ ಪ್ರಕ್ರಿಯೆ ಮೂಲಕವೇ ನಡೆಯಬೇಕಿದೆ. ಅರ್ಜಿದಾರರ ಸೇವೆ ಕಾಯಂಗೊಳಿಸಬೇಕು ಎಂಬ ವಾದ ನೇಮಕಾತಿ ನಿಯಮಗಳನ್ನು ಬದಿಗೆ ಸರಿಸುವುದಾಗಿದೆ ಮತ್ತು ವ್ಯತಿರಿಕ್ತ ಪರಿಣಾಮ ಉಂಟಾಗಲು ಕಾರಣವಾಗುತ್ತದೆ ಎಂದು ವಾದಿಸಿದ್ದರು. ಸರ್ಕಾರಿ ವಕೀಲರ ವಾದ ಒಪ್ಪದ ಹೈಕೋರ್ಟ್, ಜುಂಜಪ್ಪ ಅವರ ಸೇವೆ ಕಾಯಂಗೊಳಿಸಲು

ಅರ್ಜಿದಾರರ ಪರ ವಕೀಲರು, ಜುಂಜಪ್ಪ ಕಾಯಂ ಆದೇಶಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology