10 ವರ್ಷ ಕೆಲಸ ಮಾಡಿರುವ ನೌಕರರನ್ನು ಖಾಯಂ ಮಾಡಲೇಬೇಕು: ಎಚ್ಚರಿಕೆ ನೀಡಿದ ಹೈಕೋರ್ಟ್‌

ಬೆಂಗಳೂರು.04.ಮಾರ್ಚ.25:- ರಾಜ್ಯ ಸರ್ಕಾರದ ಯಾವುದೇ ಎಲಾಖೆಯೆಲ್ಲಿ 10 ವರ್ಷ ಕೆಲಸ ಮಾಡಿರುವ ನೌಕರರನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ದೇಹದಲ್ಲಿ ಶಕ್ತಿ ಇದ್ದಾಗ ದುಡಿಸಿ ಇಳಿ ವಯಸ್ಸಿನಲ್ಲಿ ಕೈಬಿಟ್ಟರೆ ದಂಡ ವಿಧಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಆನಂದು ಮತ್ತು ಈಶ್ವರ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಈ ಎಚ್ಚರಿಕೆ ನೀಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರಿಂಗ್‌ ವಿಭಾಗದಲ್ಲಿ ಸಾಕ್ಷರತಾ ಸಹಾಯಕರಾಗಿ ಅರ್ಜಿದಾರರು ಮುರು ದಶಕಗಳಿಂದ ದುಡಿಯುತ್ತಿದ್ದರು. ಆದರೆ, ಮೂರು ದಶಕಗಳಿಂದಲೂ ದಿನಗೂಲಿ ನೌಕರರಾಗಿಯೇ ಸೇವೆ ಸಲ್ಲಿಸುತ್ತಿದ್ದ ಅವರ ನೇಮಕಾತಿಯನ್ನು ಖಾಯಂಗೊಳಿಸಬೇಕು ಎಂದು ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ತಾವು ಯುವಕರಾಗಿದ್ದ ಕಾಲದಿಂದ ದಿನಗೂಲಿ ನೌಕರರಾಗಿಯೇ ಸೇವೆ ಸಲ್ಲಿಸುತ್ತಿದ್ದೇವೆ. ಇದೀಗ ನಾವು ನಿವೃತ್ತ ಅಂಚಿನಲ್ಲಿ ಇದ್ದೇವೆ ಎಂದು ಅರ್ಜಿದಾರರು ನ್ಯಾಯಪೀಠದ ಮುಂದೆ ವಾದಿಸಿದ್ದರು. ಒಬ್ಬ ಅರ್ಜಿದಾರ 58 ವರ್ಷ ತಲುಪಿದ್ದು, 39 ವರ್ಷಗಳ ಸೇಎ ಸಲ್ಲಿಸಿದ್ದಾರೆ. ಇನ್ನೊಬ್ಬರು 32 ವರ್ಷ ಸೇವೆ ಸಲ್ಲಿಸಿದ್ದು ಇದೀಗ ಅವರ ಪ್ರಾಯ 54 ವರ್ಷಗಳಾಗಿವೆ.

ಯುವಕರಾಗಿದ್ದಾಗ ಭವಿಷ್ಯದ ಬಗ್ಗೆ ಚಿಂತಿಸದೆ ದುಡಿದಿರುವ ಈ ಇಬ್ಬರು ಅರ್ಜಿದಾರರು, ದಿನಗೂಲಿ ನೌಕರರಾಗಿಯೇ ಮೂರು ದಶಕಗಳನ್ನು ಕಳೆದಿದ್ದಾರೆ. ಇವರನ್ನು ಖಾಯಂ ಆಗಿ ನೇಮಕ ಮಾಡದಿದ್ದರೆ ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗಲಿ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸರ್ಕಾರಕ್ಕಾಗಿ ಸುದೀರ್ಘ ಅವಧಿಯಲ್ಲಿ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ತಮ್ಮ ಕೊನೆಯ ದಿನಗಳಲ್ಲಿ ಜೀವನೋಪಾಯಕ್ಕೆ ಅಲೆಯುವಂತೆ ಮಾಡಬಾರದು ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.

prajaprabhat

View Comments

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

5 minutes ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

8 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

9 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

9 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

9 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

9 hours ago