ಬೆಂಗಳೂರು.09.ಏಪ್ರಿಲ್.25:- ರಾಜ್ಯದಲ್ಲಿ ಜಲ ಸಂರಕ್ಷಣೆಗಾಗಿ ಸರ್ಕಾರ ಜಲ ಸಂರಕ್ಷಣೆ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ 10 ಮಾದರಿ ಹಳ್ಳಿಗಳನ್ನು ರೂಪಿಸಲು ಇಂದು ಕಲಬುರಗಿ ಜಿಲ್ಲಾ ಪಂಚಾಯತಿಯು ಕನ್ಸೋರ್ಟಿಯಂ ಫಾರ್ ಡಿಯಾಟ್ಸ್ ಡಿಸೆಮಿನೇಷನ್ (ಸಿಡಿಡಿ) ಸಂಸ್ಥೆ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ಹಳ್ಳಿಗಳಲ್ಲಿ ನೀರಿನ ಸಂಪತ್ತು ಸಂರಕ್ಷಣೆ, ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪನೆ, ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣೆ, ಮಳೆ ನೀರು ಸಂಗ್ರಹಣೆ ಸೇರಿದಂತೆ ಗ್ರಾಮಸ್ಥರ ಭಾಗವಹಿಸುವಿಕೆಯಿಂದ ವಿವಿಧ ಚಟುವಟಿಕೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.
ವಿಶೇಷವಾಗಿ ಕೆರೆ-ಕಟ್ಟೆಗಳಲ್ಲಿ ಕೊಳಚೆ ತೆಗೆಯುವ ಮೂಲಕ ಮತ್ತು ಬೌದ್ಧಿಕ ಸುಧಾರಣೆಗಳಿಂದ ಹಳ್ಳಿಗಳಲ್ಲಿ ಸಾಂಪ್ರದಾಯಿಕ ಜಲಾಶಯಗಳಾದ ಕೆರೆ, ಚೆಕ್ ಡ್ಯಾಂಗಳನ್ನು ಸಂರಕ್ಷಿಸಿ ಅವುಗಳ ಸಾಮರ್ಥ್ಯ ಹೆಚ್ಚಿಸುವುದು. ಜೀವ ವೈವಿಧ್ಯತೆ ಸಂರಕ್ಷಣೆ ಜೊತೆಗೆ ಪರಿಸರ ಸೇವೆಗಳ ಸುಧಾರಣೆ, ನೀರಿನ ಮೂಲಗಳ ಸುತ್ತಮುತ್ತ ನವೋತ್ಪಾದನೆ ಮತ್ತು ವೃಕ್ಷ ಸಂಗೋಪನೆ ಮೂಲಕ ಮಣ್ಣಿನ ಸವಕಳಿ ನಿಯಂತ್ರಿಸುವುದು ಸೇರಿದಂತೆ ಜಲ ಸಂರಕ್ಷಣೆಯು ಸಮುದಾಯದ ಜವಾಬ್ದಾರಿ ಎಂಬ ತಿಳಿವಳಿಕೆ ಮೂಡಿಸುವ ಉದ್ದೇಶ ಹೊಂದಿದೆ.
ವೈಜ್ಞಾನಿಕವಾಗಿ ತ್ಯಾಜ್ಯ ನೀರು ಸಂಸ್ಕರಣೆಗೊಳಿಸುವುದು, ಶಾಲಾ ನೈರ್ಮಲ್ಯ, ಸಾರ್ವಜನಿಕ ತ್ಯಾಜ್ಯದ ಕೊಳಚೆ ಪ್ರದೇಶಗಳು, ಬ್ಲ್ಯಾಕ್ ಸ್ಪಾಟ್ಗಳನ್ನು ಕಂಡುಹಿಡಿದು ಸಾಂಸ್ಥಿಕ ಸಾಮರ್ಥ್ಯಗಳನ್ನು ವಿಶ್ಲೇಷಿಸುವುದು, ಇದಲ್ಲದೆ ಗ್ರಾಮದಲ್ಲಿನ ಮೂಲಸೌಕರ್ಯ ಬಲವರ್ಧನೆಗೆ ಇರುವ ಕೊರತೆಗಳನ್ನು ಪತ್ತೆ ಹಚ್ಚಿ ಸರ್ಕಾರದ ವಿವಿಧ ಇಲಾಖೆಯ ಅನುದಾನದಿಂದ ಅವುಗಳನ್ನು ಸರಿಪಡಿಸುವ ಕೆಲಸ ನಡೆಯಲಿದೆ.
10 ಹಳ್ಳಿಗಳಲ್ಲಿ ಗ್ರೇವಾಟರ್ ಶುದ್ಧಿಕರಣ ಘಟಕ ತಾಂತ್ರಿಕ ಯೋಜನೆ ಮತ್ತು ಡಿ.ಪಿ.ಆರ್. ಸಿದ್ದಪಡಿಸಿ, ಇದರಲ್ಲಿ 3 ಹಳ್ಳಿಗಳಲ್ಲಿ ಪ್ರಾಯೋಗಿಕವಾಗಿ ಘಟಕ ಸ್ಥಾಪಿಸುವುದು. 5 ಹಳ್ಳಿಗಳಲ್ಲಿ ಶಾಲಾ ನೈರ್ಮಲ್ಯಗಳ ವ್ಯವಸ್ಥೆಯನ್ನು ಮರುಸ್ಥಾಪಿಸುವುದು ಹಾಗೂ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಯೋಜನೆಯನ್ನು ಅನುಷ್ಠಾನಗೊಳಿಸುವ ಅಂಶಗಳು ಒಪ್ಪಂದದಲ್ಲಿವೆ.
ಮಾದರಿ ಹಳ್ಳಿ ನಿರ್ಮಿಸುವ ನಿಟ್ಟಿನಲ್ಲಿ ಜಲ, ಪರಿಸರ ಸಂರಕ್ಷಣೆಯೊಂದಿಗೆ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು, ಕಾಲ-ಕಾಲಕ್ಕೆ ಪಂಚಾಯತಿ ಸಿಬ್ಬಂದಿಗೆ ತರಬೇತಿ ಮತ್ತು ಗ್ರಾಮಸ್ಥರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಸ್ಥಳೀಯ ಅಗತ್ಯಗಳನ್ನು ಪೂರೈಸಲು ತಂತ್ರಜ್ಞಾನದ ಸದ್ಬಳಕೆ ಮಾಡುವುದು ಗುರಿಯಾಗಿದೆ.
ರಾಜ್ಯದ ಗ್ರಾಮೀಣ ಪ್ರದೇಶವು 3,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಹೊಂದಿದೆ. ಸೌರ ಶಕ್ತಿ ಮೂಲಕ ವಿದ್ಯುತ್ ಉತ್ಪಾದಿಸಿ, ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಹಳ್ಳಿಗಳಲ್ಲಿ ಮೈಕ್ರೋ ಗ್ರಿಡ್ ಪ್ಲ್ಯಾಂಟ್ ಸ್ಥಾಪಿಸಲಾಗುತ್ತಿದೆ. ಇದಕ್ಕಾಗಿ ₹20 ಕೋಟಿ ಹಣ ಮೀಸಲಿಟ್ಟಿದ್ದು, ಒಂದು ತಿಂಗಳಲ್ಲಿ ಟೆಂಡರ್ ಕರೆದು ಕೆಲಸ ಪ್ರಾರಂಭಿಸಲಾಗುವುದು. ಮುಂದಿನ ಒಂದೂವರೆ ವರ್ಷದಲ್ಲಿ, ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಮೈಕ್ರೋ ಗ್ರಿಡ್ ಹೊಂದಿದ ಹಳ್ಳಿಗಳು ನಮ್ಮ ಕಲಬುರಗಿ ಜಿಲ್ಲೆಯ ಗ್ರಾಮಗಳಾಗಿರಲಿವೆ.
ಬೆಂಗಳೂರು.ಯುಜಿಸಿ ಅತಿಥಿ ಅಧ್ಯಾಪಕರ ಕುರಿತಾದ ಇತ್ತೀಚಿನ ಸುತ್ತೋಲೆಗಳು ಸಾಮಾನ್ಯವಾಗಿ ಅವರ ನೇಮಕಾತಿ, ಅರ್ಹತೆಗಳು ಮತ್ತು ಗೌರವ ಧನಕ್ಕೆ ಸಂಬಂಧಿಸಿದ ವಿಷಯಗಳನ್ನು…
ಅತಿಥಿ ಉಪನ್ಯಾಸಕರ ವೇತನವನ್ನು UGC Eligibility ಯುಜಿಸಿ ಅರ್ಹತೆ ಹೊಂದಿರುವವರಿಗೆ ದಿನಕ್ಕೆ ರೂ. 1750/- ದರದಲ್ಲಿ ತಿಂಗಳಿಗೆ ಗರಿಷ್ಠ ರೂ.…
ಹೊಸ UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ - 2025 ಶೈಕ್ಷಣಿಕ ವರ್ಷಕ್ಕೆ ಪೂರ್ಣ ಮಾರ್ಗಸೂಚಿಗಳು…
ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…
ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…
ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಕೆಡೆಟ್ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…