12-15 ವರ್ಷಗಳಲ್ಲಿ ಉಪನ್ಯಾಸ್ಕರ ಜಾಗದಲ್ಲಿ AI ಬೋಧನೆ ಸಾಧ್ಯತೆ : ಡಿಕೆಶಿ

ಬೆಂಗಳೂರು.28.ಫೆ.25- ಇಂದು ಇಡೀ ಜಗತ್ತಿನನಲ್ಲಿ ವಿಜ್ಞಾನ-ತಂತ್ರಜ್ಞಾನ ಬಹಳಷ್ಟು ಮುಂದುವರೆದಿದ್ದು, ಮುಂದಿನ 12-15 ವರ್ಷಗಳಲ್ಲಿ ತರಗತಿಗಳಿಗೆ ಶಿಕ್ಷಕರ ಅಗತ್ಯವೇ ಇಲ್ಲದಂತೆ (A.I)ಕೃತಕ ಬುದ್ಧಿಮತ್ತೆಯ ಬೋಧನೆ ಜಾರಿಯಾಗುವ ಸಾಧ್ಯತೆಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವ್ಯಕ್ತಪಡಿಸಿದರು.

ಇಂದು ನಗರದ ನೆಹರೂ ತಾರಾಲಯ ನೂತನವಾಗಿ ನಿರ್ಮಿಸಿರುವ ಪ್ರೊಫೆಸರ್ ಯು.ಆರ್.ರಾವ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ತಾವು ಸೌದಿ ಅರೇಬಿಯಾಕ್ಕೆ ತೆರಳಿದ್ದು ಅಲ್ಲಿ ಉಪನ್ಯಾಸಕರೊಬ್ಬರ ಜೊತೆ ಮಾತನಾಡುವಾಗ ಮುಂದಿನ 12-15 ವರ್ಷಗಳಲ್ಲಿ ಮಾನವ ಶಿಕ್ಷಕರ ಅಗತ್ಯವೇ ಇರುವುದಿಲ್ಲ. ಎಲ್ಲವೂ ತಂತ್ರಜ್ಞಾನ ಆಧರಿತ ಎಐAI ಅನುಸಾರ ನಡೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಮಾಹಿತಿ ನೀಡುವಂತೆ ನಾನು ಅಧಿಕಾರಿಗಳನ್ನು ಕೇಳಿದ್ದೆ. ನನ್ನ ಮಕ್ಕಳು ನಿಮಗೆ ಆಪ್ತ ಸಹಾಯಕರು, ಅಧಿಕಾರಿಗಳಲ್ಲ, ಏಕೆ ಬೇಕು. ಚಾರ್ಟ್ ಜಿಬಿಟಿ ಬಳಸಿ ಎಂದು ಸಲಹೆ ನೀಡಿದರು. ಅದರಲ್ಲಿ ಮಾಹಿತಿ ಕೇಳುತ್ತಿದ್ದಂತೆ ನಿಮಷದ ಒಳಗೆ ಎಲ್ಲವೂ ದೊರೆತುಹೋಯಿತು. ಇಂದಿನ ತಂತ್ರಜ್ಞಾನ ಇಷ್ಟರ ಮಟ್ಟಿಗಿದೆ ಎಂದು ಅಚ್ಚರಿ ಹೇಳಿದರು.

ನಮ್ಮ ಕಾಲದಲ್ಲಿ ಪೋನ್ ಇರಲಿಲ್ಲ. ಲೆಕ್ಕ ಮಾಡಲು ಕ್ಯಾಲ್ಕುಲೇಟರ್ ಪಡೆಯಲು ಸ್ಪರ್ಧೆ ಮಾಡಬೇಕಿತ್ತು. ಈಗ ಕಂಪ್ಯೂಟರ್, ಮೊಬೈಲ್‌ ನಂತಹ ಹಲವಾರು ಸಲಕರಣೆಗಳು ವಿದ್ಯಾರ್ಥಿಗಳ ಕೈಯಲ್ಲಿದೆ.

ನಮ್ಮ ತಲೆಮಾರಿಗೆ ವಯಸ್ಸಾಗಿದೆ. ಈಗಿನ ತಲೆಮಾರಿಗೆ ಸಾಕಷ್ಟು ಸಮಯವಿದೆ. ಗ್ರಾಮೀಣ ಪ್ರದೇಶದವರು ಎಂಬ ಕೀಳರಿಮೆ ಬೆಳೆಸಿಕೊಳ್ಳದೆ ಆತ್ಮವಿಶ್ವಾಸದಿಂದ ಗುರಿಯತ್ತ ಸಾಗಿ ಎಂದು ಸಲಹೆ ಮಾಡಿದರು.

ಪ್ರೊಫೆಸರ್ ಯು.ಆರ್.ರಾವ್, ಸಿ.ವಿ.ರಾಮನ್, ಕಿರಣ್ ಕುಮಾ‌ರ್ ರಂತಹ ವಿಜ್ಞಾನಿಗಳು ಈ ನಾಡಿನವರು. ಕರ್ನಾಟಕ ಪ್ರತಿಭೆಗಳ ತವರೂರು. ಅದಕ್ಕಾಗಿಯೇ ಪ್ರಧಾನಿ ಜವಾಹರಲಾಲ್ ನೆಹರೂ ಬೆಂಗಳೂರಿನಲ್ಲಿ ಎಚ್ ಎಎಲ್, ಬಿಎಚ್‌ ಇಎಲ್, ಐಟಿಐ, ಎಚ್.ಎಂಟಿ ಸೇರಿದಂತೆ ಹಲವಾರು ಉದ್ಯಮಗಳನ್ನು ಸ್ಥಾಪಿಸಿದ್ದರು ಎಂದು ಹೇಳಿದರು.

ರಾಜ್ಯದಲ್ಲಿ ಅತಿ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳು, ಮೆಡಿಕಲ್ ಕಾಲೇಜುಗಳಿವೆ. ಇಲ್ಲಿ ಪ್ರತಿಭೆಗಳು ಹೆಚ್ಚಿವೆ. ತಾವು ಚಿಕ್ಕ ವಯಸ್ಸಿನಲ್ಲೇ ರಾಜಕಾರಣಕ್ಕೆ ಬಂದು ಮಕ್ಕಳ ಭಯಕ್ಕಾಗಿ 47ನೇ ಪದವಿ ಪಡೆದುಕೊಂಡೆ. ಎಂಜಿನಿಯರಿಂಗ್ ಓದಲಿಲ್ಲ ಎಂಬ ಕಾರಣಕ್ಕಾಗಿ ಎಂಜಿನಿಯರ್ ತಯಾರಿಸುವ ಕಾಲೇಜುಗಳನ್ನು ಸ್ಥಾಪಿಸಿದೆ ಎಂದರು.

ಹೆಣ್ಣುಮಕ್ಕಳು ಆತ್ಮವಿಶ್ವಾಸದಿಂದಿರಬೇಕು. ಈಗ ರಾಜಕಾರಣದಲ್ಲೂ ಶೇ.33 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ನಮ್ಮಂಥವರು ಬೇರೆ ಕ್ಷೇತ್ರಗಳನ್ನು ಹುಡುಕಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತಿದೆ ಎಂದು ತಿಳಿಸಿದರು. ಬಾಹ್ಯಾಕಾಶದ 7 ಗ್ರಹಗಳು ಇಂದು ಒಂದೇ ಜಾಗದಲ್ಲಿ ಕಾಣಸಿಗುತ್ತವೆ.

ನಾನು ಅದನ್ನು ಟೆಲಿಸ್ಕೋಪ್ನಿಂದ ನೋಡಿದ್ದೇನೆ. ಈ ಕೌತುಕ ಮತ್ತೆ ಘಟಿಸಲು 15 ವರ್ಷ ಕಾಯಬೇಕಿತ್ತು. 2040ಕ್ಕೆ ಇಂತಹ ಸುಸಂದರ್ಭಒದಗಿಬರಲಿದೆ ಎಂದರು.

ಇಸ್ರೋದ ಮಾಜಿ ಅಧ್ಯಕ್ಷ ಪದ್ಮಶ್ರೀ ಕಿರಣ್ ಕುಮಾರ್ ಮಾತನಾಡಿ, ಆರ್ಯಭಟ ಉಪಗ್ರಹ ಉಡಾವಣೆಯಾಗಿ ಇಂದಿಗೆ 50 ವರ್ಷ ಕಳೆದಿವೆ. ಉಡುಪಿ ರಾಮಚಂದ್ರರಾವ್ ಅವರು ವಿಜ್ಞಾನದಲ್ಲಿ ಸಾಕಷ್ಟು ಕೆಲಸ ಮಾಡಿದ್ದರು.

ಜಗತ್ತಿನ ಆಲೋಚನೆಗಳೇ ಒಂದು ರೀತಿಯಾದರೆ ಭಾರತೀಯರ ಆಲೋಚನೆಗಳು ವಿಭಿನ್ನ ಹಾಗೂ ಉತ್ಕೃಷ್ಟವಾಗಿರುತ್ತವೆ. ನಮ್ಮ ತಂತ್ರಜ್ಞಾನ ಹಾಗೂ ಅನ್ವೇಷಣೆಗಳು ಜನರ ಜೀವನಕ್ಕೆ ಸಮೀಪವಾಗಿರುತ್ತವೆ. |ಎಂದು ವಿವರಿಸಿದರು.

ಮುಂದಿನ ಪೀಳಿಗೆಯಲ್ಲಿ ಕೃತಕ ಬುದ್ದಿಮತ್ತೆ, ರೋಬಾಟಿಕ್ ಸೈನ್ಸ್, ಮಿಷನ್ ಲರ್ನಿಂಗ್‌ನಂತಹ ಕ್ವಾಂಟಮ್ ತಂತ್ರಜ್ಞಾನಗಳ ಬಗ್ಗೆ ತಿಳಿವಳಿಕೆ ನೀಡಬೇಕು. ವೈಜ್ಞಾನಿಕ ಪರೀಕ್ಷೆಗಳನ್ನು ಖುದ್ದು ಅನುಭವಿಸಲು ಅವಕಾಶ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಶಾಸಕ ರಿಜ್ವಾನ್ ಹರ್ಷದ್ ದೇವರನ್ನು ನಂಬಬೇಕು. ಮೂಢನಂಬಿಕೆಯಿಂದ ದೂರ ಇರಬೇಕು. ಹಿಂದಿಗಿಂತಲೂ ಪ್ರಸ್ತುತ ದಿನಗಳಲ್ಲಿ ಸಂಪರ್ಕ ಅತ್ಯಂತ ಸುಲಭವಾಗಿದೆ. ಪ್ರಗತಿಗೆ ಸಾಕಷ್ಟು ಅವಕಾಶಗಳಿವೆ ಎಂದು ಹೇಳಿದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಎನ್.ಎಸ್.ಬೋಸರಾಜ್, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್, ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್, ಶಾಸಕರಾದ ರಿಜ್ವಾನ್ ಹರ್ಷದ್, ಸಲೀಂ ಅಹಮ್ಮದ್, ಹಿರಿಯ ಅಧಿಕಾರಿಗಳಾದ ಉಮಾಶಂಕರ್, ಏಕರೂಪ್ ಕೌರ್, ತುಷಾರ್ ಗಿರಿನಾಥ್ ಮತ್ತಿತರರು ಉಪಸ್ಥಿತರಿದ್ದರು.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

9 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

18 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

23 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

23 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago