ಸರ್ವ ರೋಗಗಳಿಗೂ ಆಯುರ್ವೇದವೇ ಮದ್ದು-ಪೂಜ್ಯ ಡಾ. ಶಿವಕುಮಾರ ಸ್ವಾಮಿಗಳು
ಬೀದರ.01.ಮಾರ್ಚ.25:- ಮಾನವನ ದೇಹದಲ್ಲಿ ಅಡಗಿರುವ ಸರ್ವರೋಗಗಳಿಗೂ ಆಯುರ್ವೇದವೇ ಸಂಜೀವಿನಿಯಾಗಿ ಕಾಪಾಡುತ್ತದೆ. ಅದು ಶಾರಿರಿಕ ಸಧೃಢತೆಯ ಜೊತೆಗೆ ಮಾನಸಿಕ ಆರೋಗ್ಯ ಕಾಪಾಡುತ್ತದೆ ಎಂದು ಶ್ರೀ ಸಿದ್ಧಾರೂಢ ಚಿದಂಬರ ಆಶ್ರಮದ ಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ನುಡಿದರು.
ಅವರು ಇಂದು ಕರ್ನಾಟಕ ಜೀವವೈವಿದ್ಯ ಮಂಡಳಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವೈದ್ಯ ಪರಿಷತ್ತು ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ 15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಜಾಗೃತಿ ಜಾಥಾಗೆ ಎನ್.ಕೆ.ಜಾಬಶೆಟ್ಟಿ ಆಯುರ್ವೇದ ಕಾಲೇಜಿನಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಗ್ರಾಮದಲ್ಲಿ ಆಯುರ್ವೇದ ವೈದ್ಯ, ಒಬ್ಬ ಜ್ಯೋತಿಷಿ ಇದ್ದರೆ ಗ್ರಾಮಕ್ಕೆ ಕಳೆ, ಹೀಗಾಗಿ ಪಾರಂಪರಿಕವಾಗಿ ನಡೆದುಕೊಂಡು ಬಂದ ಆಯುರ್ವೇದಕ್ಕೆ ಜನರು ಹೆಚ್ಚು ಮಹತ್ವ ನೀಡಬೇಕು. ಇಂದಿನ ಕಾಲದಲ್ಲಿ ಈವತ್ತು ರೋಗ ಬಂದರೆ ನಾಳೆ ಕಡಿಮೆಯಾಗಿ ಓಡಾಡುವ ಸ್ಥಿತಿ ಬಂದಿದೆ. ಇದರಿಂದ ಅಡ್ಡ ಪರಿಣಾಮ ಹೆಚ್ಚಾಗಿ ಮನುಷ್ಯನ ಶರೀರ ರೋಗಗಳ ತಾಣವಾಗುತ್ತಿದೆ. ಜನರು ಆಯುರ್ವೇದಕ್ಕೆ ಮೊರೆ ಹೋಗಬೇಕೆಂದು ಸಲಹೆ ನೀಡಿದರು.
15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಸಂಯೋಜಕರಾದ ಡಾ. ಜಗನ್ನಾಥ ಹೆಬ್ಬಾಳೆ ಮಾತನಾಡಿ, ಈ ವೈದ್ಯ ಸಮ್ಮೇಳನದ ಆಯೋಜನೆಗೆ ಬಹಳಷ್ಟು ಜನರು ಸಹಕಾರ ನೀಡಿದ್ದು, ಗುರುನಾನಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಬಲಬೀರಸಿಂಗ್ ಅವರು ತಮ್ಮ ಗುರುನಾನಕನಲ್ಲಿ ಸುಮಾರು 700 ಜನರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ ನೀಡಿದ್ದು, ಡಾ. ಅಬ್ದುಲ್ ಖದೀರ್ ಅವರು ತಮ್ಮ ಕಾಲೇಜಿನಲ್ಲಿ ಸುಮಾರು 500ಕ್ಕೂ ಹೆಚ್ಚು ವೈದ್ಯರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ.
ಎಲ್ಲರೂ ಕೂಡಿ ವೈದ್ಯ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಪ್ರತಿಪಾದಿಸಿದರು.
ಇದೇ ವೇಳೆ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ ಪಾಟೀಲ ಡೊಳ್ಳು ಬಾರಿಸುವ ಮೂಲಕ ಜಾಥಾಗೆ ಚಾಲನೆ ನೀಡಿದರು.
ಈ ಜಾಥಾದಲ್ಲಿ ಬೀದರ ಆಯುರ್ವೇದಿಕ್ ಕಾಲೇಜು, ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪಾರಂಪರಿಕ ವೈದ್ಯ ಪರಿಷತ್ತು, ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಜರಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೈ.ಕ.ಶಿ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ ವಾಲಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎನ್.ಕೆ. ಜಾಬಶೆಟ್ಟಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಚಂದ್ರಕಾಂತ ಹಳ್ಳಿ, ಕರ್ನಾಟಕ ಫಾರ್ಮಸಿ ಕಾಲೇಜಿನ ಪ್ರಾಚಾರ್ಯರಾದ ಪೆÇ್ರ. ಕಾಶಿನಾಥ ನೌಬಾದೆ, ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ, ಗುರುನಾನಕ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಶಾಮಲಾ ವಿ.ದತ್ತಾ, ದೇವಿದಾಸ ತುಮಕುಂಟೆ, ಪ್ರತಿಭಾ ಚಾಮಾ, ಪ್ರಭುಶೆಟ್ಟಿ ಮೂಲಗೆ, ಡಾ.ವಿದ್ಯಾ ಪಾಟೀಲ, ಡಾ. ಸಂಜೀವಕುಮಾರ ಜುಮ್ಮಾ, ಕಲ್ಯಾಣರಾವ ಚಳಕಾಪುರೆ, ಡಾ. ರಾಜಕುಮಾರ ಹೆಬ್ಬಾಳೆ, ಡಾ. ಸಂಜೀವಕುಮಾರ ತಾಂದಳೆ, ನಿಜಲಿಂಗಪ್ಪ ತಗಾರೆ, ಎಸ್.ಬಿ.ಕುಚಬಾಳ, ಡಾ.ಸುನಿತಾ ಕೂಡ್ಲಿಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…