ಬೆಂಗಳೂರು : 10.ಜನವರಿ.25:- ರಾಜ್ಯದಲ್ಲಿ ಆಶಾ ಕಾರ್ಯಕರ್ತರು ಗುರುವಾರ ಇಲ್ಲಿನ ಫ್ರೀಡಂ ಪಾರ್ಕಿನ ಹೋರಾಟದ ವೇದಿಕೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಸರಕಾರಕ್ಕೆ ಸಂಭಾವನೆ ಹೆಚ್ಚಳ ಮತ್ತು ಇತರ ಬೇಡಿಕೆಗಳನ್ನು ಈಟಿದರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ. ಹೀಗಾಗಿ ಮಾಸಿಕ 15 ಸಾವಿರ ರೂ. ಗೌರವಧನದ ನೀಡುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.
ಗುರುವಾರ ಇಲ್ಲಿನ ಫ್ರೀಡಂ ಪಾರ್ಕಿನ ಹೋರಾಟದ ವೇದಿಕೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾತನಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದು, ಆಶಾಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಲ್ಲ. ಬದಲಾಗಿ, ಹೀಗಿರುವ ಗೌರವಧನ ಮುಂಗಡವಾಗಿ ನೀಡಲಾಗುವುದು ಎಂದಿದ್ದಾರೆ. ಹೀಗಾಗಿ ಮುಷ್ಕರ ಹಿಂಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ನಿಶ್ಚಿತ ಗೌರವಧನದ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸೇರಿ ವಾರ್ಷಿಕವಾಗಿ ಬೇಕಾಗುವ ಹೆಚ್ಚುವರಿ ಮೊತ್ತ ಕೇವಲ 170 ಕೋಟಿ ರೂ.ಗಳು ಮಾತ್ರ ಅವಶ್ಯಕತೆ ಇದೆ. ಆದರೆ ಸರಕಾರಗಳು ಈ ಮೊತ್ತವನ್ನು ಆಶಾ ಕಾರ್ಯಕರ್ತೆಯರಿಗೆ ಮೀಸಲಿಡಲು ಹಿಂಜರಿಯುತ್ತಿವೆ ಎಂದು ಅವರು ತಿಳಿಸಿದರು.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…