2 ದಶಕದಿಂದಲೂ ನಡೆಯದ ನೇಮಕಾತಿ ಕಾಯಂ ಉಪನ್ಯಾಸಕರಗಿಂತ ಅತಿಥಿ’ಉಪನ್ಯಾಸಕರಗಳೇ ಜಾಸ್ತಿ!

ಮೈಸೂರು.06.ಫೆ.25.:- ರಾಜ್ಯದ ಪ್ರತೆಕ್ ವಿಶ್ವವಿದ್ಯಾಲಯದಲ್ಲಿ ದಶಕದಿಂದಲೂ ಕಾಯಂ ಉಪನ್ಯಕ್ಕರಿಗಿಂತ ‘ಅತಿಥಿ ಉಪನ್ಯಾಸಕಗಳೇ ಜಾಸ್ತಿ. ರಾಜ್ಯ ಸರಕಾರಕ್ಕೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಸ್ಥಾಪಿತವಾದ ‘ಮೈಸೂರು ವಿಶ್ವವಿದ್ಯಾಲಯ’ದಲ್ಲಿ ಕಾಯಂ ಬೋಧಕರಿಗಿಂತ ಅತಿಥಿ ಉಪನ್ಯಾಸಕರ ಮೇಲಿನ ‘ಅವಲಂಬನೆ’ಯೇ ಜಾಸ್ತಿಯಾಗುತ್ತಿದೆ.ಬೋಧಕ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯು ಕಾಲಕಾಲಕ್ಕೆ ನಡೆಯದೇ ಇರುವುದು ಇದಕ್ಕೆ ಕಾರಣವಾಗಿದೆ.

ರಾಜ್ಯದಲ್ಲೇ ಮೊದಲನೆಯದು ಎಂಬ ಹೆಗ್ಗಳಿಕೆ ಜತೆಗೆ ಶತಮಾನದ ಇತಿಹಾಸವನ್ನೂ ಹೊಂದಿರುವ ಈ ವಿಶ್ವವಿದ್ಯಾಲಯದಲ್ಲಿ ನಿವೃತ್ತಿ ಅಥವಾ ವಿವಿಧ ಕಾರಣದಿಂದ ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸವೂ ನಡೆಯುತ್ತಿಲ್ಲ.

ಇಲ್ಲಿಗೆ 664 ಬೋಧಕರ ಕಾಯಂ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 238 ಮಂದಿ ಮಾತ್ರ ಇದ್ದಾರೆ. ಬರೋಬ್ಬರಿ 426 ಹುದ್ದೆಗಳು ಖಾಲಿ ಇವೆ. ಇದನ್ನು ಸರಿದೂಗಿಸಲು ತುಸು ಹೆಚ್ಚಿನ ಪ್ರಮಾಣದಲ್ಲೇ ಅಂದರೆ ಸ್ನಾತಕ ವಿಭಾಗದಲ್ಲಿ 375 ಹಾಗೂ ಸ್ನಾತಕೋತ್ತರದಲ್ಲಿ 425 ಸೇರಿದಂತೆ ಒಟ್ಟು 800 ಮಂದಿ ಅತಿಥಿ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತಿದೆ.

ಇದೇ ವರ್ಷದ ಏಪ್ರಿಲ್‌-ಮೇ ವೇಳೆಗೆ ಇನ್ನಷ್ಟು ಮಂದಿ ಅನುಭವಿಗಳು ನಿವೃತ್ತರಾಗಲಿದ್ದು, ಆಗ ಖಾಲಿ ಹುದ್ದೆಗಳ ಸಂಖ್ಯೆ ಮತ್ತಷ್ಟು ಜಾಸ್ತಿಯಾಗಲಿದೆ! ಇದು ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ.

ದಶಕದಿಂದಲೂ ಕಾಯಂ ಸಿಬ್ಬಂದಿ ನೇಮಕಾತಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ. ಈ ಕಾರಣದಿಂದ ಅತಿಥಿ ಉಪನ್ಯಾಸಕರ ಮೇಲೆ ‘ಅವಲಂಬನೆ’ ಜಾಸ್ತಿಯಾಗಿದೆ. ಮುಂದಿನ ವರ್ಷಗಳಲ್ಲಿ ಎಲ್ಲಾ ವಿಭಾಗಗಳಲ್ಲೂ ಕಾಯಂ ಬೋಧಕರಿಗಿಂತ ಅತಿಥಿ ಉಪನ್ಯಾಸಕರೇ ಹೆಚ್ಚಿರುವ ಸನ್ನಿವೇಶ ನಿರ್ಮಾಣವಾಗುವ ಸಾಧ್ಯತೆ ಇದೆ. ಇದು ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆಯ ಮೇಲೆ ‘ಪರಿಣಾಮ’ ಬೀರುವ ಆತಂಕ ಶೈಕ್ಷಣಿಕ ವಲಯದವರದ್ದಾಗಿದೆ.

‘ನಮ್ಮ ವಿಶ್ವವಿದ್ಯಾಲಯದಲ್ಲಿ ಮಂಜೂರಾದ ಕಾಯಂ ಬೋಧಕರ ಹುದ್ದೆಗಳಿಗಿಂತಲೂ ಖಾಲಿ ಇರುವ ಹುದ್ದೆಗಳ ಪ್ರಮಾಣವೇ ಜಾಸ್ತಿ ಇರುವುದು ನಿಜ. ಸರಾಸರಿ ಶೇ 70ಕ್ಕೂ ಜಾಸ್ತಿ ಖಾಲಿ ಇವೆ. ಭರ್ತಿ ಮಾಡುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅದೀಗ, ಆರ್ಥಿಕ ಇಲಾಖೆಯ ಹಂತದಲ್ಲಿದೆ. ತುರ್ತಾಗಿ ಮೊದಲನೇ ಹಂತದಲ್ಲಿ 70 ಬ್ಯಾಕ್‌ಲಾಗ್ ಹುದ್ದೆಗಳನ್ನಾದರೂ ತುಂಬುವಂತೆ ಕೋರಲಾಗಿದೆ’ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್‌ ತಿಳಿಸಿದರು.

ಮುಚ್ಚದಂತೆ ನೋಡಿಕೊಳ್ಳಲಾಗಿದೆ: ‘ನೆರೆಯ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವಿ.ವಿಯು ಆರಂಭವಾಗಿರುವುದರಿಂದಾಗಿ ಪ್ರಸ್ತುತ ನಮ್ಮ ವಿ.ವಿಯು ಮೈಸೂರಿಗೆ ಮಾತ್ರವೇ ಸೀಮಿತವಾಗಿದೆ. ಆದರೂ ಇಲ್ಲಿಗೆ ವ್ಯಾಸಂಗಕ್ಕೆ ವಿದ್ಯಾರ್ಥಿಗಳು ಬರುವುದು ಸಂಪೂರ್ಣ ನಿಂತು ಹೋಗುತ್ತದೆ ಎನ್ನಲಾಗದು. ಆದರೆ, ಇನ್ನೆರಡು ವರ್ಷ ನೆರೆಯ ಜಿಲ್ಲೆಗಳ ವಿದ್ಯಾರ್ಥಿಗಳು ನಮ್ಮ ಘಟಿಕೋತ್ಸವದಲ್ಲೇ ಪದವಿ ಪಡೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಯಾವ ವಿಭಾಗವೂ ಮುಚ್ಚದಂತೆ ನೋಡಿಕೊಳ್ಳಲಾಗಿದೆ’ ಎನ್ನುತ್ತಾರೆ ಅವರು.

‘ವಿ.ವಿಯಲ್ಲಿ ಸಂಶೋಧನೆಗಳ ಪ್ರಮಾಣ ಹೆಚ್ಚಾಗಬೇಕಾದರೆ ಕಾಯಂ ಬೋಧಕ ವರ್ಗದ ಬಲದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಹಕರಿಸಿದರೆ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.

ಪ್ರೊ.ಎನ್‌.ಕೆ. ಲೋಕನಾಥ್ ಪ್ರೊ.ಎನ್.ಕೆ. ಲೋಕನಾಥ್ ಕುಲಪತಿ ಮೈಸೂರು ವಿಶ್ವವಿದ್ಯಾಲಯತರಗತಿಗಳನ್ನು ಅತಿಥಿ ಉಪನ್ಯಾಸಕರ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಕಾಯಂ ಬೋಧಕರ ಹುದ್ದೆ ಭರ್ತಿ ಮಾಡಿಕೊಡುವ ಮೂಲಕ ಉನ್ನತ ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಪ್ರೋತ್ಸಾಹ ಕೊಡಬೇಕು

prajaprabhat

Recent Posts

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

5 hours ago

ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…

6 hours ago

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

11 hours ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

19 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

20 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

20 hours ago