2011 ಹಳೇ ಜಾತಿಗಣತಿ ಬಿಟ್ಟು”ಹೊಸದಾಗಿ ಜನಗಣತಿ ನಡೆಸಿ”

ಬೆಂಗಳೂರು.01ಫೆ ದೇಶದಲ್ಲಿ 2011ರ ಜನಗಣತಿ ಹದಿಮೂರು ವರ್ಷದಷ್ಟು ಹಳೆಯದಾಗಿದೆ. ಆ ಗಣತಿಯ ವರದಿಯಲ್ಲಿ ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಜಾತಿಗಳನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ಕೈ ಬಿಡುವಂತೆ ದಲಿತ ಸಂಘರ್ಷ ಸಮಿತಿ ಮನವಿ ಮಾಡಿದೆ. ⁸

ದೇಶದಲ್ಲಿ 2011 ಜಾತಿಗಣತಿ ಹಳೆ ಆಗಿದೆ 13 ವರ್ಷಾ ಮುಗಿದಿದೆ ಸದ್ಯ ಜಾತಿಗಣತಿ ನಡೆಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿಗಳ ಜನಸಂಖ್ಯೆ 1,04,74,992. ಆದರೆ, ರಾಜ್ಯ ಸರ್ಕಾರದ 2023ರ ಅಧಿಕೃತ ಅಂದಾಜಿನ ಪ್ರಕಾರ, ಈ ಸಮುದಾಯಗಳ ಜನಸಂಖ್ಯೆ ಸುಮಾರು 1.41 ಕೋಟಿ. ಹಾಗಾಗಿ ಹೊಸದಾಗಿ ಜನಗಣತಿ ನಡೆಸುವುದು ಸೂಕ್ತ ಎಂದು ತಿಳಿಸಿದೆ.

2025ರಲ್ಲಿ ಕೇಂದ್ರ ಸರ್ಕಾರ ನಡೆಸಲಿರುವ ಜನಗಣತಿಯಲ್ಲಿ ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಜಾತಿಗಳನ್ನು ಕೈ ಬಿಟ್ಟು ಕಲೆ ಹಾಕುವ ದತ್ತಾಂಶದ ಪ್ರಕಾರ ಒಳ ಮೀಸಲಾತಿ ಜಾರಿಗೊಳಿಸುವುದು ಸೂಕ್ತ.

ಆದ್ದರಿಂದ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಎಂಬ ದಾಖಲೆಗಳನ್ನು ರದ್ದು ಮಾಡಿ, ಆಯಾ ಉಪ ಜಾತಿಗಳ ಹೆಸರು ಬಳಸಿ ಜಾತಿ ಜನಗಣತಿ ನಡೆಸಬೇಕು. 2011ರ ಜನಗಣತಿ ಪ್ರಕಾರ ಒಳ ಮೀಸಲಾತಿಯ ವರ್ಗೀಕರಣ ನಿಗದಿ ಮಾಡಿದರೆ, ಗೊಂದಲ ಉಂಟಾಗಿ, ಸಮಸ್ಯೆ ಮತ್ತಷ್ಟು ಕಗ್ಗಂಟಾಗಲಿದೆ ಎಂದು ಹೇಳಿದೆ.

ನಿಯೋಗದಲ್ಲಿ ಸಮಿತಿಯ ಖಜಾಂಚಿ ಬಿ.ಗಂಗನಂಜಯ್ಯ, ವಿಭಾಗೀಯ ಸಂಚಾಲಕ ಶಿವಲಿಂಗಯ್ಯ, ಸಂಘಟನಾ ಸಂಚಾಲಕರಾದ ಎಂ.ಎಸ್. ಕೃಷ್ಣಮೂರ್ತಿ, ಎ.ಸರವಣ, ಜಿಲ್ಲಾ ಸಂಚಾಲಕ ಸಿ ಶ್ರೀನಿವಾಸ್, ಸಂಘಟನಾ ಸಂಚಾಲಕ ಬಿ.ಸಿ. ರಾಮಣ್ಣ ಇದ್ದರು.0

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago