ನ.23 ರಂದು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರೈಸಿಂಗ್ ದಿನ ಆಚರಣೆ ನಿಮಿತ್ಯ
ರಕ್ತದಾನ ಜಾಗೃತಿ ರ್ಯಾಲಿ ಮತ್ತು ರಕ್ತದಾನ ಶಿಬಿರ ಆಯೋಜನೆ
ಬೀದರ, ನವೆಂಬರ್.21:- ಬೀದರ ಪೊಲೀಸ್ ಮತ್ತು ಬ್ರಿಮ್ಸ್ ಆಸ್ಪತ್ರೆಯ ಸಮನ್ವಯದಲ್ಲಿ 3 ಕರ್ನಾಟಕ ಏರ್ ಎನ್ಸಿಸಿ ಬೀದರ ವತಿಯಿಂದ ನವೆಂಬರ್.23 ರಂದು ರಾಷ್ಟಿçÃಯ ಕೆಡೆಟ್ ಕಾರ್ಪ್ಸ್ ರೈಸಿಂಗ್ ದಿನವನ್ನು ಆಚರಿಸುವ ನಿಮಿತ್ಯ ರಕ್ತದಾನದ ಮಹತ್ವದ ಬಗ್ಗೆ ಅರಿವು ಹೆಚ್ಚಿಸಲು ಮತ್ತು ಸಾಮಾನ್ಯವಾಗಿ ಸಾರ್ವಜನಿಕರಲ್ಲಿ ಮತ್ತು ವಿಶೇಷವಾಗಿ ಎನ್ಸಿಸಿ ಕೆಡೆಟ್ಗಳಲ್ಲಿ ನಿರ್ದಿಷ್ಟವಾಗಿ ಸಾಮಾಜಿಕ ಜವಾಬ್ದಾರಿಯನ್ನು ಮೂಡಿಸಲು ರಕ್ತದಾನ ಜಾಗೃತಿ ರ್ಯಾಲಿ ಮತ್ತು ಬ್ರಿಮ್ಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಗ್ರೂಪ್ ಕ್ಯಾಪ್ಟನ್ ವಿಎನ್ಎಲ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ….