ಸರ್ಕಾರ ಅತಿಥಿ ಉಪನ್ಯಾಸಕರ, ಆರೋಗ್ಯ ವಿಮೆ ಮತ್ತು ನಿವೃತ್ತಿ ಪ್ರಯೋಜನ ?

ಸರ್ಕಾರ ಅತಿಥಿ ಉಪನ್ಯಾಸಕರ, ಆರೋಗ್ಯ ವಿಮೆ ಮತ್ತು ನಿವೃತ್ತಿ ಪ್ರಯೋಜನ ?

ಸಂಪಾದಕೀಯ….. ಕರ್ನಾಟಕ ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮಾ ಸೌಲಭ್ಯ ನೀಡುವ ನಿಟ್ಟಿನಲ್ಲಿ “ಅತಿಥಿ ಉಪನ್ಯಾಸಕರ ವಂತಿಗೆ ಮಾಸಿಕ 400 ರು. ಹಾಗೂ ಸರ್ಕಾರದಿಂದ 400 ರು. ಸೇರಿದಂತೆ ಒಟ್ಟು 800 ರು.” ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನಗೊಳಿಸಲು ಈಗಾಗಲೇ ಮಂಜೂರಾತಿ ನೀಡಲಾಗಿದ್ದು, ಜಾರಿಯಲ್ಲಿರುತ್ತದೆ. ರಾಜ್ಯಾದ್ಯಂತ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಅಧ್ಯಾಪಕರ ಸಂಭಾವನೆಯನ್ನು ತಿಂಗಳಿಗೆ ₹ 5,000…

ಇಂದು ವಿಶ್ವ ಏಡ್ಸ್ ದಿನ ಪ್ರಯುಕ್ತ ಡಿ.3 ರಂದುಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜನೆ

ಇಂದು ವಿಶ್ವ ಏಡ್ಸ್ ದಿನ ಪ್ರಯುಕ್ತ ಡಿ.3 ರಂದು
ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜನೆ

ಬೀದರ, ನವೆಂಬರ್.30:- ಡಿಸೆಂಬರ್.1 ರ ವಿಶ್ವ ಏಡ್ಸ್ ದಿನ ಇರುವುದರಿಂದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಡಿಸೆಂಬರ್.3 ರಂದು ಬೆಳಿಗ್ಗೆ 10.30ಕ್ಕೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಹಾಗೂ ವೇದಿಕೆ ಕಾರ್ಯಕ್ರಮ ಬೆಳಿಗ್ಗೆ 11.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್‌ಐವಿ/ಏಡ್ಸ್ ನಿಯಂತ್ರಿಸುವಲ್ಲಿ ಜನಜಾಗೃತಿಗಾಗಿ ಹಮ್ಮಿಕೊಳ್ಳುತ್ತಿರುವ ಐಇಸಿ ಕಾರ್ಯಕ್ರಮಗಳು: 2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಚ್‌ಐವಿ/ಏಡ್ಸ್ ನಿಯಂತ್ರಿಸುವ ನಿಟ್ಟಿನಲ್ಲಿ…

ಡಿ.2 ರಂದು ಪ್ರಗತಿ ಪರಿಶೀಲನಾ ಸಭೆ

ಡಿ.2 ರಂದು ಪ್ರಗತಿ ಪರಿಶೀಲನಾ ಸಭೆ

ಬೀದರ, ನವೆಂಬರ್.30:- ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್.2 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ 12 ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ ಆಯೋಜನೆ: ಹೆಸರು ನೋಂದಾಯಿಸಿಕೊಳ್ಳಲು ಮನವಿ

ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ 12 ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ ಆಯೋಜನೆ: ಹೆಸರು ನೋಂದಾಯಿಸಿಕೊಳ್ಳಲು ಮನವಿ

ಕನ್ನಡ ಬಾಬೀದರ, ನವೆಂಬರ್.30 :- ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಕೇಂದ್ರ ಸಂಖ್ಯೆ ಈ ಎರಡು ಸಂಸ್ಥೆಗಳು ಒಟ್ಟಾಗಿ ನವೆಂಬರ್.1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೇರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕರ್ನಾಟಕ ವಿದ್ಯುತ್ ಪ್ರಸಾರ ನಿಗಮ ನಿಯಮಿತ, ಕೆ.ಎಸ್.ಆರ್.ಟಿ.ಸಿ. ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ…