ಹೆಚ್ಐವಿ ಸೋಂಕಿತರಲ್ಲಿ ಕಾನೂನಿನ ಅರಿವು, ಮಾಹಿತಿ
ನೀಡುವುದು ಬಹಳ ಮುಖ್ಯವಾಗಿದೆ-ನ್ಯಾಪ್ರಕಾಶ ಬನಸೂಡೆ
ಬೀದರ, ಡಿಸೆಂಬರ್.3 :- ಹೆಚ್.ಐ.ವಿ ಸೋಂಕಿತರಲ್ಲಿ ಕಾನೂನಿನ ಅರಿವು, ಮಾಹಿತಿಯನ್ನು ನೀಡುವುದು ಬಹಳ ಮಹತ್ವದಾಗಿದೆ. ಆದ್ದರಿಂದ ಪ್ರತಿಯೊಬ್ಬರು ಹೆಚ್.ಐ.ವಿ ಸೋಂಕಿತರಿಗೆ ತಾರತಮ್ಯ ಮಾಡದೇ, ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಮತ್ತು ಆರೋಗ್ಯ ಸಿಬ್ಬಂದಿಯವರು ಗ್ರಾಮೀಣ ಪ್ರದೇಶದಲ್ಲಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು, ಜನರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕೆಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೂಡೆ ಹೇಳಿದರು. ಅವರು ಇಂದು ವಿಶ್ವ ಏಡ್ಸ್…