2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಕೋರ್ಸಿಗೆ ಅರ್ಜಿ ಆಹ್ವಾನ.

ಬೆಂಗಳೂರು.26.ಜೂನ್.25:- ರಾಜ್ಯದಲ್ಲಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2025-26 ಶೈಕ್ಷಣಿಕ ಸಾಲಿನ ಈ ಕೆಳಕಂಡ ಅರೆ ವೈದ್ಯಕೀಯ ಡಿಪ್ಲೋಮ ಕೋರ್ಸ್ಗಿಳಿಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇತರೆ ವಿವಿಧ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಲ್ಲಿರುವ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು 1 ರಿಂದ 10ನೇ ತರಗತಿ ಅಥವಾ ಪಿಯುಸಿಯವರೆಗೆ ಕನಿಷ್ಠ 07 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಇದಕ್ಕೆ ಸಂಬಂಧಿಸಿದ ದೃಢೀಕರಣ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
ಕೋರ್ಸಿನ ಅವಧಿ: ಪಿಯುಸಿ ಅಭ್ಯರ್ಥಿಗಳಿಗೆ 2 ವರ್ಷಗಳು + 3 ತಿಂಗಳು ಇಂಟರ್ನ್ಶಿಪ್ ಮತ್ತು ಎಸ್.ಎಸ್.ಎಲ್.ಸಿ ಅಭ್ಯರ್ಥಿಗಳಿಗೆ 3 ವರ್ಷಗಳು + 3 ತಿಂಗಳ ಇಂಟರ್ನ್ಶಿಪ್.

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು, ಪ.ಜಾ/ಪ.ಪಂ ಹಾಗೂ ಸೇವಾನಿರತ ಅಭ್ಯರ್ಥಿಗಳಿಗೆ 40 ವರ್ಷಗಳು ಮೀರಿರಬಾರದು.

ಅರ್ಜಿ ನಮೂನೆಗಳು: ಮಂಡಳಿಯ ಜಾಲತಾಣದಲ್ಲಿ ಲಭ್ಯವಿದ್ದು ಎಲ್ಲಾ ವಿದ್ಯಾರ್ಥಿಗಳು ಆನ್-ಲೈನ್ ಮೂಲಕ ಅರ್ಜಿಯನ್ನು ತುಂಬಬೇಕಾಗಿರುತ್ತದೆ. ಅರ್ಜಿಯ ಜೊತೆ ವ್ಯಾಸಂಗ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳ ದೃಡೀಕೃತ ಪ್ರತಿಗಳನ್ನು ಕಡ್ಡಾಯವಾಗಿ ಅಪ್ ಲೋಡ್ ಮಾಡಬೇಕು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.400/- ಪರಿಶಿಷ್ಟ ಜಾತಿ/ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ ಮುಖಾಂತರವೇ ಡೆಬಿಟ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್ ಮೂಲಕ ಮಾತ್ರ ಪಾವತಿಸುವುದು. 26.06.2025 0 25.07.2025 ಜಾಲತಾಣದಲ್ಲಿ ಲಭ್ಯವಿರುತ್ತದೆ.

25.07.2025 ರ ನಂತರ ಯೂವುದೇ ಕಾರಣಕ್ಕೂ ಆಫ್-ಲೈನ್ ಮೂಲಕ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳ ಆಯ್ಕೆ: ಅಭ್ಯರ್ಥಿಗಳನ್ನು ಅವರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮತ್ತು ಪ್ರವರ್ಗಗಳ
ಆಧಾರದ ಮೇರೆಗೆ ಆಯ್ಕೆ ಮಾಡಲಾಗುವುದು, ಕೌನ್ಸಿಲಿಂಗ್ ನಡೆಯುವ ದಿನಾಂಕದ ಬಗ್ಗೆ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿ ನಮೂದಿಸಿದ ಮೊಬೈಲ್ ಸಂಖ್ಯೆಗೆ ಸೂಚನಾ ಸಂದೇಶವನ್ನು ಕಳುಹಿಸಲಾಗುವುದು. ಕೌನ್ಸಿಲಿಂಗ್ಗೆ ಹಾಜರಾಗುವ ಸಮಯದಲ್ಲಿ ಎಲ್ಲಾ ದಾಖಲೆಗಳ ಮೂಲ ಪ್ರಮಾಣಪತ್ರಗಳನ್ನು ಸಲ್ಲಿಸುವುದು. ತಪ್ಪಿದಲ್ಲಿ ಕೌನ್ಸಿಲಿಂಗ್ಗೆ ಅವಕಾಶ ನೀಡಲಾಗುವುದಿಲ್ಲ. ಆನ್ಲೈನ್ ಮೂಲಕ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಲಾಗುವುದು. ವಿದ್ಯಾರ್ಥಿಗಳ ಮೂಲ ದಾಖಲಾತಿಗಳನ್ನು ಆನ್ಲೈನ್ ಮೂಲಕ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳು ಇಚ್ಚಿಸುವ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆಯನ್ನು ಆನ್ಲೈನ್ನಲ್ಲಿ ನಮೂದಿಸಲು ಅವಕಾಶ ನೀಡಲಾಗುವುದು.

prajaprabhat

Recent Posts

ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು.26.ಜೂನ್.25:-ಸರಕಾರ ಕಲಾವಿದರ ಮಾಸಾಶನ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ. ಈ ಹಿಂದೆ ಕಲಾವಿದರ ಮಾಸಾಶನ 2000 ರೂಪಾಯಿಗಳಿದ್ದು, ಅದನ್ನು ಹೆಚ್ಚಿಸಿ…

9 hours ago

ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

ಬೆಂಗಳೂರು.26.ಜೂನ್.25:- ರಾಜ್ಯದ ಹಲವು ತಾಲೂಕಾ ಹಾಗೂ ಜಿಲ್ಲೆಗಳಲ್ಲಿ ಭಾರಿ ಮಳೆ ಬರುವ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ ಇದಕ್ಕೆ ರಾಜ್ಯಾದ …

10 hours ago

ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ಬೆಂಗಳೂರು :ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು…

10 hours ago

ಕೃಷಿ ಪರಿಕರಗಳ ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳು: ರೈತರಿಗೆ ಸಲಹೆ

ಕೊಪ್ಪಳ.25.ಜೂನ್.25: ಕೃಷಿ ಪರಿಕರಗಳನ್ನು ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ರೈತರಿಗೆ ಕೃಷಿ ಇಲಾಖೆಯಿಂದ ಸಲಹೆಗಳನ್ನು ನೀಡಲಾಗಿದೆ. ಈ ವರ್ಷದ…

18 hours ago

ಕೃಷಿಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಗೆ ಒತ್ತು ನೀಡಿ- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

ಕೊಪ್ಪಳ.25.ಜೂನ್.25:- ರೈತರು ಕೃಷಿಯಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಗೆ ಒತ್ತು ನೀಡುವ ಮೂಲಕ ಕಡಿಮೆ ರಾಸಾಯನಿಕ ಗೊಬ್ಬರಗಳ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ…

18 hours ago

ಗ್ರಾಮ ಆಡಳಿತಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‌ಸೈಟ್…

18 hours ago