2025-26 ನೇ ಸಾಲಿನ ರಾಜ್ಯದ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.03.ಜುಲೈ.25:- ರಾಜ್ಯದಲ್ಲಿ ಪ್ರತಿ ವರ್ಷದಂತೆ, 2025-26 ನೇ ಸಾಲಿನ 5ನೇ ಸೆಪ್ಟೆಂಬರ್ 2025 ರ ‘ಶಿಕ್ಷಕರ ದಿನಾಚರಣೆ’ ಅಂಗವಾಗಿ ನೀಡಲಾಗುವ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗಳಿಗೆ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರನ್ನು ಅಯ್ಕೆ ಮಾಡುವ ಸಂಬಂಧ ಹೊರಡಿಸಲಾಗುತ್ತಿರುವ ಈ ಸುತ್ತೋಲೆಯೊಂದಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಯ್ಕೆ ಸಮಿತಿ ಸದಸ್ಯರ ವಿವರ ಹಾಗೂ ಸಮಿತಿಯ ಕರ್ತವ್ಯಗಳ ಮಾರ್ಗಸೂಚಿಯನ್ನು ಲಗತ್ತಿಸಿ ಆದೇಶ ಹೊರಡಿಸಲಾಗಿದೆ.

ಪ್ರತಿ ಜಿಲ್ಲೆಗೆ ನಿಗದಿ ಪಡಿಸಿರುವ ಪ್ರಶಸ್ತಿಗಳ ಸಂಖ್ಯಾ ವಿವರವನ್ನು (ವಲಯವಾರು ವಿಂಗಡಿಸಿರುವ ಸಂಖ್ಯೆಯನ್ನು) ಹಾಗೂ ಜಿಲ್ಲಾ ಪ್ರಶಸ್ತಿಗೆ ತಲಾ ರೂ.5000/- ರಂತೆ ನೀಡಲಾಗುವ ನಗದು ಪುರಸ್ಕಾರವನ್ನು ಮತ್ತು ಆಯ್ಕೆ ಸಮಿತಿಯ ಖರ್ಚು/ವೆಚ್ಚಗಳೆಗಾಗಿ ಪ್ರತಿ ಜಿಲ್ಲೆಗೆ ರೂ.2000/- ರಂತೆ ನೀಡಲಾಗುವ ಸಾದಿಲ್ವಾರು ವೆಚ್ಚವನ್ನು ‘ಅನುಬಂಧ-ಅ’ ರಲ್ಲಿ ವಿವರಿಸಿರುವಂತೆ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರಿಗೆ ಬಿಡುಗಡೆ ಮಾಡಲಾಗುತ್ತಿದೆ.

ರಾಜ್ಯದ ಎಲ್ಲಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಾಲ್ಲೂಕು ಮಟ್ಟದ “ಶಿಕ್ಷಕರ ದಿನಾಚರಣೆ” ಕಾರ್ಯಕ್ರಮ ಆಯೋಜನೆಗಾಗಿ ರೂ.20,000/- ಗಳನ್ನು ಮತ್ತು ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರಿಗೆ ಜಿಲ್ಲಾ ಮಟ್ಟದ “ಶಿಕ್ಷಕರ ದಿನಾಚರಣೆ” ಕಾರ್ಯಕ್ರಮ ಆಯೋಜನೆಗಾಗಿ ರೂ. 30,000/-ಗಳ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಅದರ ವಿವರಗಳನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಿರುವ “ಅನುಬಂಧ-ಆ” ರಲ್ಲಿ ನೀಡಲಾಗಿದೆ.

ದಿನಾಂಕ: 05.09.2025 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡು, ಕಾರ್ಯಕ್ರಮದ ಖರ್ಚುವೆಚ್ಚದ ವಿವರಗಳ ದೃಢೀಕೃತ ಪ್ರತಿಯೊಂದಿಗೆ ವೋಚರ್ಗಳ ಸಹಿತ ಉಪಯೋಗಿತ ಪ್ರಮಾಣ ಪತ್ರವನ್ನು, ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಭಾವ ಚಿತ್ರಗಳು, ಸಿ. ಡಿ. ಪ್ರತಿಗಳೊಂದಿಗೆ ದಿನಾಂಕ: 30.09.2025 ರ ಒಳಗಾಗಿ ನಿಧಿಗಳ ಕಛೇರಿಗೆ ಕಳುಹಿಸಿಕೊಡುವಂತೆ ಸೂಚಿಸಿದೆ.

prajaprabhat

Recent Posts

ಕ್ಷೇತ್ರ ಶಿಕ್ಷಣಾಧಿಕಾರಿಗಳು ಕರವೇ ವತಿಯಿಂದ ಮನವಿ.

ಔರಾದ.04.ಜುಲೈ.25:- ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿ ಶಾಲಾವಧಿಯಲ್ಲಿ ಅಕ್ರಮವಾಗಿ ವಿದ್ಯಾರ್ಥಿಗಳ ಪೋಷಕರಿಂದ ಹಣ ಪೀಕುತ್ತಿರುವ 'ಕೋಚಿಂಗ್' ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ…

1 hour ago

ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಬಡ್ತಿ : ರಾಜ್ಯ ಸರ್ಕಾರ’ದಿಂದ ಆದೇಶ

ಬೆಂಗಳೂರು.04.ಜುಲೈ.25:- ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ…

1 hour ago

ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೇ’ಯಲ್ಲಿ ಅರ್ಜಿ ಆಹ್ವಾನ

DWCD Yadgiri Recruitment 2025 : ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ…

1 hour ago

ಉದ್ಯೋಗಗಳಲ್ಲಿ ಕನಿಷ್ಠ ವೇತನ ಹೈಕೋರ್ಟ್‌ಗೆ ಸರ್ಕಾರದ ಮುಚ್ಚಳಿಕೆ

ಬೆಂಗಳೂರು.04.ಜುಲೈ.25:-<ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದ ಹೊರತು ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಹೊರಡಿಸಲಾಗಿರುವ ಉದ್ದೇಶಿತ ಕರಡು ಅಧಿಸೂಚನೆ ಅನ್ವಯ ಭವಿಷ್ಯದಲ್ಲಿ…

3 hours ago

ಪಾಕಿಸ್ತಾನಿ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳ ಮೇಲಿನ ನಿಷೇಧವನ್ನು ಸರ್ಕಾರ ಮತ್ತೆ ಜಾರಿಗೆ ತಂದಿದೆ.

ದೇಶದಲ್ಲಿ ಹಲವಾರು ಪಾಕಿಸ್ತಾನಿ ನಟರು ಮತ್ತು ಕ್ರಿಕೆಟಿಗರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸರ್ಕಾರ ಮತ್ತೆ ನಿಷೇಧಿಸಿದೆ. ತಾಂತ್ರಿಕ ಕಾರಣಗಳಿಂದಾಗಿ ಈ…

4 hours ago

ಮುಂದಿನ ತಿಂಗಳು ಶ್ರೀನಗರದ ದಾಲ್ ಸರೋವರದಲ್ಲಿ ನಡೆಯಲಿರುವ ಮೊದಲ ಖೇಲೋ ಇಂಡಿಯಾ ಜಲ ಕ್ರೀಡೆಗಳು

ಮೊದಲ ಖೇಲೋ ಇಂಡಿಯಾ ಜಲ ಕ್ರೀಡಾ ಉತ್ಸವವು ಆಗಸ್ಟ್ 21 ರಿಂದ ಶ್ರೀನಗರದ ಐತಿಹಾಸಿಕ ದಾಲ್ ಸರೋವರದಲ್ಲಿ ನಡೆಯಲಿದೆ. ಇದನ್ನು…

4 hours ago