ಸಂಪೂರ್ಣ್ ಬೀದರ ನಗರ ಬಂದ.!
|

ಸಂಪೂರ್ಣ್ ಬೀದರ ನಗರ ಬಂದ.!

ಬೀದರ್: 09.ಜನವರಿ.25. ಬೀದರ ನಗರದಲ್ಲಿ ಡಾ. ಭೀಮರಾವ ಅಂಬೇಡ್ಕರ ಅವರ ರಾಜ್ಯಸಭಾ ಸದನದಲ್ಲಿ ಅವಮಾನಿಸಿದ  ಕಾರಣಕ್ಕೆ ದಲಿತ ಪ್ರಗತಿಪರ ಸಂಘಟನೆಗಳು ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಸ್ವಾಭಿಮಾನಿ ಡಾ. ಬಿ.ಆರ್ ಅಂಬೇಡ್ಕರ್ ಹೋರಾಟ ಸಮಿತಿ ಕರೆ ನೀಡಿರುವ ಬೀದರ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಟೋ ಸೇರಿದಂತೆ ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಆಸ್ಪತ್ರೆ, ಔಷಧಿ ಮಳಿಗೆಗಳು ಮಾತ್ರ ಎಂದಿನಂತೆ ತೆರೆದಿವೆ. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಸೇರಿ ಪ್ರಮುಖ ವೃತ್ತ, ರಸ್ತೆಗಳಲ್ಲಿ ಪೊಲೀಸ್ ಬಿಗಿ…

ಬೀದರ ಬಂಧ ಚಿತ್ರ.! ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ.!
|

ಬೀದರ ಬಂಧ ಚಿತ್ರ.! ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ.!

ಬೀದರ್: 09.ಜನೆವರಿ.25 :- ಇಂದು ಬೀದರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಸಂಸತ್ ನಲ್ಲಿ ಅವಮಾನಕರ ಹೇಳಿಕೆ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿ ನೀಡಿದ್ದ ಬೀದರ್ ಬಂದ್ ಕರೆಗೆ ಪೂರಕ ಸ್ಪಂದನ ವ್ಯಕ್ತವಾಗಿದೆ. ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದರಿಂದ ಇಂದು ಬೀದರ್ ಭಾಗಶಃ ಸ್ತಬ್ಧವಾಗಿದೆ. ನಗರದ ಮೆಡಿಕಲ್, ಆಸ್ಪತ್ರೆ ಹಾಗೂ ಸರಕಾರಿ ಕಚೇರಿಗಳು ಬಿಟ್ಟರೆ ಉಳಿದೆಲ್ಲ ಅಂಗಡಿಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ. ಸರಕಾರಿ…

ಜ.10 ರಂದು ಸಚಿವ ಈಶ್ವರ ಖಂಡ್ರೆ ಅವರ ಜನತಾ ದರ್ಶನ ಕಾರ್ಯಕ್ರಮ
|

ಜ.10 ರಂದು ಸಚಿವ ಈಶ್ವರ ಖಂಡ್ರೆ ಅವರ ಜನತಾ ದರ್ಶನ ಕಾರ್ಯಕ್ರಮ

ಬೀದರ:10.ಜನವರಿ.25:- ಬೀದರ ಜಿಲ್ಲಾ ಉತ್ಸುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಜನತಾ ದರ್ಶನ ಕಾರ್ಯಕ್ರಮ ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ನಡೆಯಲಿದೆ. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜನವರಿ.10 ರಂದು ಬೆಳಿಗ್ಗೆ 10.30 ಗಂಟೆಗೆ ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾತ್ಮರ ಜಯಂತಿಗಳನ್ನು ಅದ್ದೂರಿಯಾಗಿ ಆಚರಿಸಿ-ಶಿವಕುಮಾರ ಶೀಲವಂತ.!
|

ಮಹಾತ್ಮರ ಜಯಂತಿಗಳನ್ನು ಅದ್ದೂರಿಯಾಗಿ ಆಚರಿಸಿ-ಶಿವಕುಮಾರ ಶೀಲವಂತ.!

09ಜನವರಿ.25:- ಬರುವ ಜನವರಿ.14 ರಂದು ಶಿವಯೋಗಿ ಸಿದ್ದಾರಾಮೇಶ್ವರ ಜಯಂತಿ, ಜನವರಿ.19 ರಂದು ವೇಮನ ಜಯಂತಿ ಮತ್ತು ಜನವರಿ.21 ರಂದು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಹಾಗೂ ಫೆಬ್ರವರಿ.1 ರಂದು ಮಡಿವಾಳ ಮಾಚಿದೇವ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರುವ ವಿವಿಧ ಮಹಾನೀಯರ ಜಯಂತಿಗಳ ಆಚರಣೆ ಕುರಿತು ಕರೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದರಿ ದಿನಾಂಕಗಳಂದು ಸರ್ಕಾರಿ,…

25 ಲಕ್ಷ ರೂ. ಆರೋಗ್ಯ ವಿಮೆ. ಕಾಂಗ್ರೇಸ  ಘೋಷಣೆ.!
|

25 ಲಕ್ಷ ರೂ. ಆರೋಗ್ಯ ವಿಮೆ. ಕಾಂಗ್ರೇಸ  ಘೋಷಣೆ.!

ಹೊಸ ದೆಹಲಿ: 09.ಜನೆವರಿ.25: ದೆಹಲಿ ವಿಧಾನಸಭಾ ಚುನಾವಣೆಯ ಜನ್ಮ – ಮನ್ ಒಲಿಸುವ್ಕಾಗಿ ಕಾಂಗ್ರೇಸ್ ಪಕ್ಷ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಕೈ ಹಿಡಿದ ಖುಷಿಯಲ್ಲಿ ಕಾಂಗ್ರೆಸ್ ಈಗ ದೆಹಲಿ ವಿಧಾನಸಭೆ ಚುನಾವಣೆಯಲ್ಲೂ ಗ್ಯಾರಂಟಿ ಮೊರೆ ಹೋಗಿದೆ. ನಾಗರಿಕರಿಗೆ 25 ಲಕ್ಷ ರೂ. ಆರೋಗ್ಯ ವಿಮೆ ಘೋಷಣೆ ಮಾಡಿದೆ. ಅಧಿಕಾರಕ್ಕೆ ಬರುವ ವರೆಗೆ ಕಾಂಗ್ರೇಸ  ಚುನಾವಣೆಗೆ ಈಗ ಎರಡನೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆ.ಇದಕ್ಕೆ ಮೊದಲು ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕ ಮಾದರಿಯಲ್ಲಿ ಮಹಿಳೆಯರಿಗೆ ಮಾಸಿಕ…

ಭೀಮಾ ಕೋರೆಗಾಂವ್’ ಕುರಿತು ವಿಚಾರ ಸಂಕಿರಣ ಜಾಗೃತ ಜನ ವೇದಿಕೆ ರಾಜ್ಯ ಸಮಿತಿ ವತಿಯಿಂದ ಇದೇ ಜ.11ರಂದು: ಮಹೇಶ್ ಕುಲಕರ್ಣಿ
|

ಭೀಮಾ ಕೋರೆಗಾಂವ್’ ಕುರಿತು ವಿಚಾರ ಸಂಕಿರಣ ಜಾಗೃತ ಜನ ವೇದಿಕೆ ರಾಜ್ಯ ಸಮಿತಿ ವತಿಯಿಂದ ಇದೇ ಜ.11ರಂದು: ಮಹೇಶ್ ಕುಲಕರ್ಣಿ

ಕಲಬುರಗಿ : 08.ಜನೆವರಿ.25:- ಕಲಬುರ್ಗಿ ನಗರದಲ್ಲಿ ಜಾಗೃತ ಜನ ವೇದಿಕೆ ರಾಜ್ಯ ಸಮಿತಿ ವತಿಯಿಂದ ಇದೇ ಜ.11ರಂದು ಬೆಳಗ್ಗೆ 11ಗಂಟೆಗೆ ನಗರದ ಪತ್ರಿಕಾ ಭವನದ ಸಾಂಸ್ಕೃತಿಕ ಸಭಾಂಗಣದಲ್ಲಿ ‘ಭೀಮಾ ಕೋರೆಗಾಂವ್: ಹುತಾತ್ಮರ ಸ್ಮರಣೆ, ನಮ್ಮ ಹೊಣೆ’ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಮಹೇಶ್ ಕುಲಕರ್ಣಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್ ಅವರು ವಿಚಾರ ಸಂಕಿರಣ ಉದ್ಘಾಟಿಸಿ, ವಿಶೇಷ ಉಪನ್ಯಾಸ ನೀಡಲಿದ್ದಾರೆ…

ದಲಿತ ಯುವಕನ ಮೇಲ್ಜಾತಿಯ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ,ಯುವಕ ಮೃತ್ಯು.!
|

ದಲಿತ ಯುವಕನ ಮೇಲ್ಜಾತಿಯ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ,ಯುವಕ ಮೃತ್ಯು.!

ಬೀದರ.08.ಜನೆವರಿ.25 ಜಿಲ್ಲೆಯ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ನಿವಾಸಿಯಾದ ಸುಮಿತ ಮತ್ತು ಔರಾದ ತಾಲೂಕಿನ ರಕ್ಷಾಳ ಗ್ರಾಮದ ಮೇಲ್ಜಾತಿ ಬಾಲಕಿಯನ್ನು ಪ್ರೀತಿ ಮಾಡಿದ್ದಕ್ಕಾಗಿ ದಲಿತ ಯುವಕನಿಗೆ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನಪ್ಪಿದ ಘಟನೆ ಕಮಲನಗರ ತಾಲ್ಲೂಕಿನ ಠಾಣಾ ಕುಶನೂರ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೇಡಕುಂದಾ ಗ್ರಾಮದ ನಿವಾಸಿ ಸುಮಿತ್ (19) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ ರಕ್ಷಾಳ್ ಗ್ರಾಮದ ಬಾಲಕಿಯನ್ನು ಸುಮಿತ್ ಪ್ರೀತಿಸುತಿದ್ದ. ರವಿವಾರದಂದು ನಮ್ಮ ಮನೆ ಕಡೆಗೆ ಬಾ ಎಂದು ಸುಮಿತ್ ನನ್ನು ಹುಡುಗಿ…