ಜನತಾ ದರ್ಶನದಲ್ಲಿ ಬಂದ ಅರ್ಜಿಗಳನ್ನು ಕೂಡಲೇ ಇತ್ಯರ್ಥಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ-ಸಚಿವ ಈಶ್ವರ ಬಿ.ಖಂಡ್ರೆ.
ಬೀದರ.10.ಜನವರಿ.25:- ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ 2021-22ನೇ ಸಾಲಿನ ಎಸ್.ಡಿ.ಪಿ. ಯೋಜನೆಯಡಿಯಲ್ಲಿ 1 ಕೋಟಿ 80 ಲಕ್ಷ ರೂ.ವೆಚ್ಚದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಹಾಗೂ 2022-23ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಯೋಜನೆಯಡಿಲ್ಲಿ 4 ಕೋಟಿ 70 ಲಕ್ಷ ಅನುದಾನದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕಟ್ಟಡ, ತಾಲ್ಲೂಕ ಆಡಳಿತ ಭಾಲ್ಕಿ ವತಿಯಿಂದ ಏರ್ಪಡಿಸಿದ ಜನತಾ ದರ್ಶನ ಕಾರ್ಯಕ್ರಮವನ್ನು ಇಂದು ಅರಣ್ಯ ಪರಿಸರ, ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ…