ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ.03.ಫೆಬ್ರುವರಿ.25: -ನಗರದ ನೌಬಾದ ಯಲ್ಲಾಲಿಂಗ್ ಕಾಲೋನಿಯ ನಿವಾಸಿಯಾದ ಮಹಾದೇವಿ ತಂದೆ ಪೀರಪ್ಪ ಮೇತ್ರೆ (ವ:69 ವರ್ಷ) ಇವರು ದಿನಾಂಕ: 19-01-2025 ರಂದು ಮಹಾಡೋಣಗಾಂವಕ್ಕೆ ಹೋಗುತ್ತೇನೆಂದು ಹೇಳಿ ಹೋಗಿ ಕಾಣೆಯಾಗಿರುತ್ತಾಳೆ. ಕಾಣೆಯಾದ ಮಹಿಳೆಯು 5 ಅಡಿ 4 ಇಂಚ್ ಎತ್ತರ ಇದ್ದು, ಕೋಲು ಮುಖ, ತೆಳ್ಳನೆ ಮೈಕಟ್ಟು, ಗೂನು ಬೆನ್ನು, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ಮೈಮೇಲೆ ಮೆಹಂದಿ ಬಣ್ಣದ ಸೀರೆ ಧರಿಸಿರುವ ಇವರು ಕನ್ನಡ, ಮರಾಠಿ ಭಾಷೆಯಲ್ಲಿ ಮಾತನಾಡುತ್ತಾಳೆ. ಈ ಚಹರೆಯುಳ್ಳ ಮಹಿಳೆ ಎಲ್ಲಿಯಾದರೂ ಪತ್ತೆಯಾದಲ್ಲಿ…

ಚಿಟಗುಪ್ಪಾ: ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ.!
|

ಚಿಟಗುಪ್ಪಾ: ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ.!

ಬೀದರ.03.ಫೆಬ್ರುವರಿ.25: ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಆಸ್ತಿ ಹಾಗೂ ನೀರಿನ ತೆರಿಗೆಯನ್ನು ಸಂಗ್ರಹಿಸಲು ಪುರಸಭೆÉ ವ್ಯಾಪ್ತಿಯ ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಲ್ಪಟ್ಟ ಅರ್ಹ ಹಾಗೂ ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿಟಗುಪ್ಪಾ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಿಟಗುಪ್ಪಾ ಪುರಸಭೆ ವ್ಯಾಪ್ತಿಯಲ್ಲಿನ ನೀರಿನ ಬಳಕೆಯ ಶುಲ್ಕದ ಹಿಂದಿನ ಬಾಕಿ ಮೊತ್ತ ಬಡ್ಡಿ ಸಹಿತವಾಗಿ ಮತ್ತು ಪ್ರಸಕ್ತ ವಾರ್ಷಿಕ ಸಹಿತ ವಸೂಲಿ ಮಾಡುವುದು ಹಾಗು ಬಹುದಿನಗಳಿಂದ ಬಾಕಿ…

ನಾವೇಲ್ಲರೂ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ-ಸಚಿವ ರಹೀಂ ಖಾನ್
|

ನಾವೇಲ್ಲರೂ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ-ಸಚಿವ ರಹೀಂ ಖಾನ್

ಬೀದರ.03ಫೆಬ್ರುವರಿ.25:- ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ವಚನಗಳನ್ನು ಸಂರಕ್ಷಿಸಿದ ವೀರಗಣಚಾರಿ ಗುರು ಆಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೇಲ್ಲರೂ ನಡೆಯೋಣ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವರಾದ ರಹೀಂ ಖಾನ್ ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಅವರ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲಿಂಗಾಯತ ಧರ್ಮದಲ್ಲಿ ನಿμo್ಠವಂತ ಕಾಯಕನಿವಾಸಿಗಳಾಗಿದ್ದ ಮಡಿವಾಳ ಮಾಚಿದೇವರು ಸಮಾಜ ಸೇವೆಯಲ್ಲಿ…

ಚನ್ನಬಸವೇಶ್ವರ ಗುರುಕುಲ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ.!
|

ಚನ್ನಬಸವೇಶ್ವರ ಗುರುಕುಲ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ.!

ಬೀದರ್‌ನ ಚನ್ನಬಸವೇಶ್ವರ ಗುರುಕುಲದಲ್ಲಿ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ ಪರೀಕ್ಷೆ ಬರೆದ ೨೦೦೦ ವಿದ್ಯಾರ್ಥಿಗಳು ಬೀದರ್, ನಗರದ ರಾಂಪೂರೆ ಬ್ಯಾಂಕ್ ಕಾಲೋನಿಯಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ನಡಿ ನೂತನವಾಗಿ ಆರಂಭಿಸಿರುವ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ೨ ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಗೆ ಎಸ್ಸೆಸ್ಸೆಲ್ಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ೧೫೦೦ ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದರು. ಆದರೆ ಕಾಲೇಜು ಆರಂಭದ ವರ್ಷದಲ್ಲೇ ನಿರೀಕ್ಷೆಗೂ ಮೀರಿ…

ಪಿ.ಎಲ್.ಡಿ. ಬ್ಯಾಂಕ್ ನೂತನ ಅಧ್ಯಕ್ಷರಿಗೆ ಸನ್ಮಾನ
|


ಪಿ.ಎಲ್.ಡಿ. ಬ್ಯಾಂಕ್ ನೂತನ ಅಧ್ಯಕ್ಷರಿಗೆ ಸನ್ಮಾನ

ಬೀದರ್:-೦೩, ಬೀದರ ನಗರದ ವೈ. ಬಿ. ಹೋಟೆಲನಲ್ಲಿ ಪಿ.ಎಲ್.ಡಿ. ಬ್ಯಾಂಕಿನ ನೂತನ ಅಧ್ಯಕ್ಷರಾದ ಶ್ರೀ ರಾಜಕುಮಾರ ಮಾಳಗೆ ಅವರಿಗೆ ಚಂದ್ರ ಸಾಂಸ್ಕೃತಿಕ ಸಾಹಿತಿಕ ಹಾಗೂ ಶೈಕ್ಷಣಿಕ ಚಾರಿಟೇಬಲ ಟ್ರಸ್ಟ್ ವತಿಯಿಂದ ದಿನಾಂಕ ೨-೨-೨೦೨೫ ರಂದು ಸನ್ಮಾನಿಸಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷರಾದ ಪ್ರವೀಣಚಂದ್ರ ಮೀರಾಗಂಜಕರ್ ಅವರು ಪಿ.ಎಲ್.ಡಿ. ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀ ರಾಜಕುಮಾರ ಮಾಳಗೆ ಅವರಿಗೆ ಶಾಲು ಹೊದಿಸಿ ಹೂಮಾಲೆ ಹಾಕಿ ಸನ್ಮಾನಿಸಿ  ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ನ ಕಾರ್ಯದರ್ಶಿ ಪ್ರದೀಪಚಂದ್ರ, ಸಜ್ಞಾನಿ,…

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ.!
|

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ.!

ಬೆoಗಳೂರು.03.ಫೆ.25:- ಬೆಂಗಳೂರು ವಿಶ್ವವಿದ್ಯಾಲಯ.ಬೆಂಗಳೂರು ನೇಣು ಬಿಗಿದುಕೊಂಡು ದ್ವಿತೀಯ ವರ್ಷದ ಸ್ನಾತಕೋತರ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಹೆಬ್ಲಗುಪ್ಪೆ ಗ್ರಾಮದ ನಿವಾಸಿ ಎಂದು ತಿಳಿದಿದೆ. ಹೌದು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪಾವನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಿಗ್ಗೆ 10:30 ಸುಮಾರಿಗೆ ಹೆಬ್ಲಗುಪ್ಪೆಯ ಪಾವನ ಎಂಬ…

ದಾವಣಗೆರೆ ವವಿಶ್ವವಿದ್ಯಾಲಯ  ಪ್ರಾಧ್ಯಾಪಕಿ ಬಂಧನ!
|

ದಾವಣಗೆರೆ ವವಿಶ್ವವಿದ್ಯಾಲಯ  ಪ್ರಾಧ್ಯಾಪಕಿ ಬಂಧನ!

ದಾವಣಗೆರೆ:- ದಾವಣಗೆರೆ ವಿವಿಯ ಮೈಕ್ರೋ ಬಯಾಲಜಿ ಪ್ರಾಧ್ಯಾಪಕಿಯಾಗಿರುವ ಪ್ರೊ.ಗಾಯತ್ರಿ ದೇವರಾಜ್ ಅವರಿಗೂ,37 ಲಕ್ಷ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ ವಿವಿ ಪ್ರಾಧ್ಯಾಪಕಿಯನ್ನು CBI ಟೀಂ ಬಂಧಿಸಿದೆ. ಪ್ರೊ.ಗಾಯತ್ರಿ ದೇವರಾಜ್ ಬಂಧಿತರು. ಡ್ರಂಕ್ ಆಯಂಡ್ ಡ್ರೈವ್, ಅತಿವೇಗವಾಗಿ ಚಲಾಯಿಸಿದವರಿಗೆ ದಂಡದ ರುಚಿ ತೋರಿದ ಸಂಚಾರಿ ಪೊಲೀಸ್! ನ್ಯಾಕ್ ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ದಾಳಿ ವೇಳೆ 37 ಲಕ್ಷ ರೂ. ನಗದು, 6 ಲ್ಯಾಪ್ಟಾಪ್, ಐಫೋನ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಭ್ರಷ್ಟಾಚಾರ, ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ…

ವಿದ್ಯಾರ್ಥಿಗಳಿಗೆ : ಕೇಂದ್ರ ಸರ್ಕಾರದಿಂದ ವಿಶೇಷ ವಿದ್ಯಾರ್ಥಿವೇತನಕೆ ಅರ್ಜಿ ಅಹ್ವಾನ.!

ವಿದ್ಯಾರ್ಥಿಗಳಿಗೆ : ಕೇಂದ್ರ ಸರ್ಕಾರದಿಂದ ವಿಶೇಷ ವಿದ್ಯಾರ್ಥಿವೇತನಕೆ ಅರ್ಜಿ ಅಹ್ವಾನ.!

ಹೊಸ ದೆಹಲಿ.03.ಫೆ.25.:- ಭಾರತ್ ಸರ್ಕಾರ ವತಿಯಿಂದ sc ವಿಧ್ಯಾರ್ಥಿಗಳಿಗೆ ವಿಷೇಶ ವಿದ್ಯಾರ್ಥಿವೇತನಕೆ ಅರ್ಜಿ ಆಹ್ವಾನ ಮಾಡ್ಳಾಗಿದೆ. ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು 2024-25ನೇ ಸಾಲಿಗೆ SC ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿವೇತನಗಳು ಈಗಾಗಲೇ ಈ ಶಿಕ್ಷಣವನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಅರ್ಹತೆ:ಈ ವಿದ್ಯಾರ್ಥಿವೇತನಗಳನ್ನು ಪಡೆಯಲು, ನೀವು 2 ಅರ್ಹತೆಗಳನ್ನು ಪೂರೈಸಬೇಕು.1. ಪೋಷಕರು ಅಥವಾ ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಬಾರದು.2….

ಸಂವಿಧಾನ V/S ಸನಾತನವಾದ’: ಹಿಂದೂ ಧರ್ಮ.

ಸಂವಿಧಾನ V/S ಸನಾತನವಾದ’: ಹಿಂದೂ ಧರ್ಮ.

ಗದಗ:03.ಫೆ.25:- ಇವತ ಭಾರತ ದೇಶದಲ್ಲಿ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಹಿಂದೂ ಧರ್ಮದ ವಿರೋಧಿ ಎಂದು ಬಹಳಷ್ಟು ಜನರು ಚಿತ್ರಣ ಮಾಡುತ್ತಾರೆ. ಆದರೆ, ಅವರು ಹಿಂದೂ ಧರ್ಮದ ವಿರೋಧಿ ಆಗಿರಲಿಲ್ಲ. ಹಿಂದೂ ಕೋಡ್‌ ಬಿಲ್‌ ರಚನೆವರೆಗೂ ಅವರು ಹಿಂದೂ ಧರ್ಮದ ಸುಧಾರಣೆ ಶ್ರಮಿಸಿದರು ಎಂಬುದು ಅವರ ಬದುಕನ್ನು ಸರಿಯಾಗಿ ಅಧ್ಯಯನ ಮಾಡಿದರೆ ತಿಳಿಯುತ್ತದೆ’ ಎಂದು ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ಮಟ್ಟು ಹೇಳಿದರು. ಶಿವಸುಂದರ್‌- ಆರ್‌ಎಸ್‌ಎಸ್‌’, ‘ನರೇಂದ್ರ ಮೋದಿ- ಸತ್ಯ’ ಎಲ್ಲರಿಗೂ ಗೊತ್ತಿರುವಂತೆ ಪರಸ್ಪರ ವಿರುದ್ಧ ಶಬ್ದಗಳು. ಅದೇರೀತಿ, ಸಂವಿಧಾನ-…

ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ : ಆರ್.ಅಶೋಕ್
|

ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ : ಆರ್.ಅಶೋಕ್

ಬೆಂಗಳೂರು: 03.ಫೆ.25: ಬೆಂಗಳೂರು ಗಾಂಧಿ ಭವನದಲ್ಲಿ ಕರ್ನಾಟಕ ರಕ್ಷಣಾ ಸಮೀತಿ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧಪಕ್ಷ ನೇತಾ ಆರ್ ಅಶೋಕ್ ಮುಖ್ಯ ಅತಿಥಿ ಆಗಿ ಭಾಗ್ವಹಿಸಿದ್ರು.ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಭಗವದ್ಗೀತೆ ಇದ್ದಂತೆ. ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕಆರ್.ಅಶೋಕ್ ಹೇಳಿದ್ದಾರೆ. ರವಿವಾರ ನಗರದ ಗಾಂಧಿಭವನದಲ್ಲಿ ಕರ್ನಾಟಕ ರಕ್ಷಣಾ ಸಮಿತಿಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಕನ್ನಡ ಪರ ಹೋರಾಟಗಾರ ಡಾ.ಚಿ.ನಾ.ರಾಮು ಅಭಿನಂದನೆ ಮತ್ತು ವಿವಿಧ ಕ್ಷೇತ್ರದಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,…