ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ರಾಷ್ಟ್ರೀಯ ಸಾಹಿತ್ಯೋತ್ಸವ.
ಕಲಬುರಗಿ.13.ಫೆ.25:- ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಫೆ.17 ಮತ್ತು 18 ರಂದು ಎರಡು ದಿನಗಳ ಕಾಲ ಕಲ್ಯಾಣ ಕರ್ನಾಟಕ ರಾಷ್ಟ್ರೀಯ ಸಾಹಿತ್ಯೋತ್ಸವ ಹಮ್ಮಿಕೊಂಡಿದ್ದು, ರಾಜ್ಯ ಮತ್ತು ಹೊರ ರಾಜ್ಯದ ಸುಮಾರು 150 ವಿದ್ವಾಂಸರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದು ಗುಲ್ಬರ್ಗಾ ವಿ.ವಿ. ಹಂಗಾಮಿ ಕುಲಪತಿ ಪ್ರೊ.ಜಿ.ಶ್ರೀರಾಮುಲು ಹೇಳಿದರು. ಗುರುವಾರ ವಿಶ್ವವಿದ್ಯಾಲಯದ ಕೈಲಾಶ ಭವನ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷಾಭಿವೃದ್ಧಿ ಯೋಜನೆಯಡಿ ಸಮಕಾಲೀನ ಕನ್ನಡ ಸಾಹಿತ್ಯದ ನೆಲೆ-ನಿಲುವು ಎಂಬ ಶೀರ್ಷಕೆಯೊಂದಿಗೆ ಆಯೋಜಿಸುತ್ತಿರುವ ಈ ಸಾಹಿತ್ಯೋತ್ಸವಕ್ಕೆ ಕನ್ನಡ ಅಧ್ಯಯನ ಸಂಸ್ಥೆ…