ಡಿಜಿಟಲ್ ವಂಚನೆಯಿಂದ ಜಾಗೃತಗೊಳ್ಳಬೇಕಾಗಿದೆ-ಪ್ರೊ.ಬಿ.ಎಸ್.ಬಿರಾದಾರ.!
|

ಡಿಜಿಟಲ್ ವಂಚನೆಯಿಂದ ಜಾಗೃತಗೊಳ್ಳಬೇಕಾಗಿದೆ-ಪ್ರೊ.ಬಿ.ಎಸ್.ಬಿರಾದಾರ.!

ಬೀದರ.14ಫೆಬ್ರುವರಿ.25:-ಇಂದಿನ ಡಿಜಿಟಲ್ ಯುಗದ ವ್ಯವಹಾರದಲ್ಲಿ ಆನ್ಲೈನ್ ವಂಚನೆ ಹಾಗೂ ಮೋಸಗಳು ನಿರಂತರವಾಗಿ ನಡೆಯುತ್ತಿವೆ. ಇಂತಹ ವಂಚನೆಯಿಂದ ಎಲ್ಲರೂ ಎಚ್ಚರವಹಿಸಿ, ಜನಸಾಮಾನ್ಯರು ಜಾಗೃತಗೊಳ್ಳಬೇಕಾದ ಅವಶ್ಯಕತೆಯಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ನುಡಿದರು.       ಅವರು ಇಂದು ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಡಿಜಿಟಲ್ ತಂತ್ತಜ್ಞಾನ ಹಾಗೂ ಸೈಬರ್ ಸೆಕ್ಯೂರಿಟಿ ಅರಿವು’ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.      ಪ್ರತಿದಿನ ಎಲ್ಲೋ ಒಂದು ಕಡೆ ಸೈಬರ್ ಅಪರಾಧಗಳು ಜರುಗುತ್ತಲೇ ಇವೆ. ವಂಚಕರು…

250 ಅಡಿ ಎತ್ತರದ ಅಂಬೇಡ್ಕರ್‌ ಪ್ರತಿಮೆಗೆ ಆಗ್ರಹ.!
|

250 ಅಡಿ ಎತ್ತರದ ಅಂಬೇಡ್ಕರ್‌ ಪ್ರತಿಮೆಗೆ ಆಗ್ರಹ.!

ಬೀದರ್‌.14.ಫೆ.25:- ಬೀದರ ಜಿಲ್ಲೆಯ ಲಾಲ್‌ ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರ 250 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಬೇಕು’ ಎಂದು ಕರ್ನಾಟಕ ಭೀಮ ಸೇನೆ ರಾಜ್ಯ ಕಾರ್ಯದರ್ಶಿ ವಿಷ್ಣುವರ್ಧನ್ ವಾಲ್ದೊಡ್ಡಿ ಆಗ್ರಹಿಸಿದರು. ನೆರೆಯ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಂಬೇಡ್ಕರ್ ಅವರ ಭವ್ಯ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ. ನಮ್ಮ ರಾಜ್ಯದಲ್ಲೂ ಸ್ಥಾಪಿಸಿ, ಯುವ ಜನಾಂಗಕ್ಕೆ ಪ್ರೇರಣೆ ಆಗುವಂತಹ ಕೆಲಸ ರಾಜ್ಯ ಸರ್ಕಾರ ಮಾಡಬೇಕು ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. 2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಹಾಗೂ…

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಡಿ ಕೆ ಸುರೇಶ್‌
|

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಡಿ ಕೆ ಸುರೇಶ್‌

ಬೆಂಗಳೂರು, ಫೆಬ್ರವರಿ 14: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವಕ್ಕಾಗಿ ಜಟಾಪಟಿ ನಡೆಯುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ದೀರ್ಘಾವದಿ ಮುಖ್ಯಮಂತ್ರಿ ದಾಖಲೆ ಬರೆಯುವ ಉತ್ಸಾಹದಲ್ಲಿದ್ದಾರೆ. ಸದ್ಯಕ್ಕೆ ಚುನಾವಣೆ ರಾಜಕೀಯಕ್ಕೆ ನಿವೃತ್ತಿಯ ನಿರ್ಧಾರ ಮಾಡಿಲ್ಲ ಎಂದು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಈ ಕುರಿತು ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಶಾಸಕಾಂಗದ ನಾಯಕರು. ಸದ್ಯಕ್ಕೆ ಮುಖ್ಯಮಂತ್ರಿ…

ಪತಿ-ಪತ್ನಿ ವಿವಾದದಲ್ಲಿ ಮೊಬೈಲ್ ರೆಕಾರ್ಡಿಂಗ್’ ಸಾಕ್ಷಿಗಾಗಿ. ಸಾಧ್ಯವಿಲ್ಲ. ಹೈಕೋರ್ಟ್ ಮಹತ್ವದ ತೀರ್ಪು.!
|

ಪತಿ-ಪತ್ನಿ ವಿವಾದದಲ್ಲಿ ಮೊಬೈಲ್ ರೆಕಾರ್ಡಿಂಗ್’ ಸಾಕ್ಷಿಗಾಗಿ. ಸಾಧ್ಯವಿಲ್ಲ. ಹೈಕೋರ್ಟ್ ಮಹತ್ವದ ತೀರ್ಪು.!

ಬೆಂಗಳೂರು.14.ಫೆ.25:- ಇಂದು ಕರ್ನಾಟಕ ಉಚ್ಚ ನ್ಯಾಯಾಲಯ. ಪತಿ-ಪತ್ನಿ ವಿವಾದದಲ್ಲಿ ಮೊಬೈಲ್ ರೆಕಾರ್ಡಿಂಗ್ ಅನ್ನು ಸಾಕ್ಷಿಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ. ಒಪ್ಪಿಗೆಯಿಲ್ಲದೆ ಕರೆಗಳನ್ನು ರೆಕಾರ್ಡ್ ಮಾಡುವುದು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಯಾವುದೇ ಸಂದರ್ಭದಲ್ಲೂ ಅಂತಹ ರೆಕಾರ್ಡಿಂಗ್ ಅನ್ನು ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ನಿರ್ಧಾರವು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಗೌಪ್ಯತೆಯ ರಕ್ಷಣೆಯನ್ನು ಖಾತ್ರಿಗೊಳಿಸುತ್ತದೆ. ಛತ್ತೀಸ್‌ಗಢ ಹೈಕೋರ್ಟ್…

ರಾಜ್ಯದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿ. ಕೆ.ಶಿವಕುಮಾರ.!
|

ರಾಜ್ಯದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: ಡಿ. ಕೆ.ಶಿವಕುಮಾರ.!

ಬೆಂಗಳೂರು.14.ಫೆ.25:- ಇಂದು ರಾಜ್ಯದ ಹೊಸ  ವಿವಿಧ ವಿಶ್ವವಿದ್ಯಾನಿಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿಗಳ ಅಧ್ಯಯನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ, ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಮಾಡಲಿದೆ ಎಂದು ಉಪ್ ಮುಖ್ಯಮಂತ್ರಿಯ ಡಿ.ಕೆ. ಶಿವಕುಮಾರ ಅವರು ತಿಳಿಸಿದರು. ರಾಜ್ಯದ ರಾಜಧಾನಿ ಬೆಂಗಳೂರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಹಿಂದೆ ನೂತನ ವಿಶ್ವವಿದ್ಯಾಲಯದ ಬಗ್ಗೆ ಮಾಡಿದ್ದ ಕಾನೂನಿನಲ್ಲಿ ಪ್ರತಿ ವಿವಿಗೆ ಕೇವಲ 2 ಕೋಟಿ ಹಣ ಮೀಸಲಿಟ್ಟಿದ್ದರು. ಯಾವುದೇ…

ಕಾಲೇಜು ಶಿಕ್ಷಣ ಇಲಾಖೆ: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಜಾನಪದ ಉತ್ಸವ’ ಆಚರಿಸಿ.ಮಹತ್ವದ ಆದೇಶ.!
|

ಕಾಲೇಜು ಶಿಕ್ಷಣ ಇಲಾಖೆ: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಜಾನಪದ ಉತ್ಸವ’ ಆಚರಿಸಿ.ಮಹತ್ವದ ಆದೇಶ.!

ಬೆಂಗಳೂರು.14.ಫೆ.25:- ಕರ್ಣಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯಲ್ಲಿ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಜಾನಪದ ಉತ್ಸವ’ ಆಚರಿಸಿ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಇಂದಿನ ಪಾಶ್ಚಾತ್ಯ ಶೈಲಿಯ ಆಧುನಿಕ ಜೀವನದಲ್ಲಿ ದೇಸೀ ಸಂಸ್ಕೃತಿಯು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ. ಜನಪದ ಸಾಹಿತ್ಯ ಪರಿಸರ, ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯ ಪಾರಂಪರಿಕ ಕರಕುಶಲ…

ಡಾ// ಜಿ ಪರಮೇಶ್ವರ ನಾವು ಬೌದ್ಧ ಧರ್ಮ ಪಾಲನೆ ಮಾಡುತ್ತೇವೆ ! ಅಚ್ಚರಿ ಹೇಳಿಕೆ.!
|

ಡಾ// ಜಿ ಪರಮೇಶ್ವರ ನಾವು ಬೌದ್ಧ ಧರ್ಮ ಪಾಲನೆ ಮಾಡುತ್ತೇವೆ ! ಅಚ್ಚರಿ ಹೇಳಿಕೆ.!

ಕೊಡಗು.14.ಫೆ.25:- ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಪತ್ನಿ ಯೊಂದಿಗೆ ದಲೈಲಾಮ ಅವರನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಇತ್ತೀಚೆಗೆ ಭೇಟಿಯಾದ ಬಗ್ಗೆ ಸ್ಪಷ್ಟನೆ ನೀಡಿದರು. ನಾವು ಬೌದ್ಧ ಧರ್ಮ ಪಾಲನೆ ಮಾಡುತ್ತೇವೆ. ದಲೈಲಾಮ ಆಶೀರ್ವಾದ ಪಡೆದುಕೊಳ್ಳಲು ಬಂದಿದ್ದೇವೆ. ಶಾಂತಿ ನೆಮ್ಮದಿ ಪಡೆದುಕೊಳ್ಳಲು ಬಂದಿದ್ದೇವೆ ಎಂದು ತಿಳಿಸಿದರು. ದಲೈಲಾಮ ಬಂದಾಗ ಹಲವು ಬಾರಿ ಭೇಟಿ ಮಾಡಿದ್ದೇನೆ. ದಲೈಲಾಮ ಆರೋಗ್ಯವಾಗಿದ್ದಾರೆ. ಏಳು ವರ್ಷಗಳ ಬಳಿಕ ಇಲ್ಲಿಗೆ…

ಬೀದರ|ವಚನ ಸಾಹಿತ್ಯದಲ್ಲಿ ಆತ್ಮದ ಹಸಿವು ನೀಗಿಸುವ ಶಕ್ತಿ’
|

ಬೀದರ|ವಚನ ಸಾಹಿತ್ಯದಲ್ಲಿ ಆತ್ಮದ ಹಸಿವು ನೀಗಿಸುವ ಶಕ್ತಿ’

ಬೀದರ.14.ಫೆ.25:- ಇಂದು ಬೀದರ ನಗರದಲ್ಲಿ ಜಿಲ್ಲಾ ರಾಷ್ಟ್ರೀಯ ಬಸವ ದಳ ಮತ್ತು ಲಿಂಗಾಯತ ಸಮಾಜದ ಸಹಯೋಗದಲ್ಲಿ ಬೀದರ್ ನಗರದಲ್ಲಿ  “ಚನ್ನಬಸವಣ್ಣನವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ”12ನೇ ಶತಮಾನದಲ್ಲಿ ಬಸವಾದಿ ಶರಣರು ಕೊಟ್ಟ ವಚನ ಸಾಹಿತ್ಯದಲ್ಲಿ ಆತ್ಮದ ಹಸಿವು ನೀಗಿಸುವ ಶಕ್ತಿ ಇದೆ”ಎಂದು ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು. ಕಲ್ಯಾಣ ಕ್ರಾಂತಿಯ ನಂತರ ಸನಾತನ ಶಕ್ತಿಗಳು ವಚನ ಸಾಹಿತ್ಯವನ್ನು ನಾಶಪಡಿಸಲು ಯುದ್ಧ ಸಾರಿದ್ದರು. ಚನ್ನಬಸವಣ್ಣ, ಮಡಿವಾಳ ಮಾಚಿದೇವ, ಅಕ್ಕನಾಗಮ್ಮನವರ ನೇತೃತ್ವದ ಶರಣರ ಪಡೆ ಅವರ ವಿರುದ್ಧ ಹೋರಾಟ…

ರಾಜ್ಯ ಸರ್ಕಾರದಿಂದ ನೇರವಾಗಿ ನೇಮಕಗೊಂಡ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರ.!
|

ರಾಜ್ಯ ಸರ್ಕಾರದಿಂದ ನೇರವಾಗಿ ನೇಮಕಗೊಂಡ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರ.!

ಬೆಂಗಳೂರು.14.ಫೆ.25:-ರಾಜ್ಯ ಸರ್ಕಾರದಿಂದ ನೇರವಾಗಿ ನೇಮಕಗೊಂಡ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರಿಗೆ ತರುವ ಅಥವಾ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:30.01.2025 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತಿರ್ಮಾನಿಸಿದಂತೆ, ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ, ಈ ಕೆಳಗಿನಂತೆ ಆದೇಶಿಸಲಾಗಿದೆ. 👉 ವಿವಿಧ ಬ್ಯಾಂಕುಗಳು ಒದಗಿಸುವ “ಸಂಬಳ ಪ್ಯಾಕೇಜ್‌ಗಳ* ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿಗಳು / ನೌಕರರಿಗೆ (ಸರ್ಕಾರಿ /ಸರ್ಕಾರಿ ಸಂಸ್ಥೆಗಳು,…

ಹೊಸದಾಗಿ ಅರಭಿಸಿದ 9 ವಿಶ್ವವಿದ್ಯಾಲಯಗಳಿಗ ಮುಚ್ಚುವ, ಸಂಪುಟ ಉಪಸಮಿತಿ ನಿರ್ಧಾರ.!
|

ಹೊಸದಾಗಿ ಅರಭಿಸಿದ 9 ವಿಶ್ವವಿದ್ಯಾಲಯಗಳಿಗ ಮುಚ್ಚುವ, ಸಂಪುಟ ಉಪಸಮಿತಿ ನಿರ್ಧಾರ.!

ಬೆಂಗಳೂರು, 14.ಫೆ.25:- ರಾಜ್ಯದಲ್ಲಿ ಕಳೆದ ಬಿಜೆಪಿ ಅವಧಿಯಲ್ಲಿ 10 ಹೊಸ ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿತ್ತು. ಇದೀಗ ಈ 10 ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.ಡಿಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಈ ಕುರಿತು ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯ ಆರ್ಥಿಕ ಸ್ಥಿತಿಗತಿಯ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿತ್ತು. ಬೀದರ್ ವಿಶ್ವವಿದ್ಯಾಲಯವನ್ನು ಹೊರತುಪಡಿಸಿ ಉಳಿದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಇದೀಗ ಸಂಪುಟ ಉಪಸಮಿತಿ ತೀರ್ಮಾನ ಕೈಗೊಂಡಿದೆ. 👉ಹಾಸನ…