ಡಿಜಿಟಲ್ ವಂಚನೆಯಿಂದ ಜಾಗೃತಗೊಳ್ಳಬೇಕಾಗಿದೆ-ಪ್ರೊ.ಬಿ.ಎಸ್.ಬಿರಾದಾರ.!
ಬೀದರ.14ಫೆಬ್ರುವರಿ.25:-ಇಂದಿನ ಡಿಜಿಟಲ್ ಯುಗದ ವ್ಯವಹಾರದಲ್ಲಿ ಆನ್ಲೈನ್ ವಂಚನೆ ಹಾಗೂ ಮೋಸಗಳು ನಿರಂತರವಾಗಿ ನಡೆಯುತ್ತಿವೆ. ಇಂತಹ ವಂಚನೆಯಿಂದ ಎಲ್ಲರೂ ಎಚ್ಚರವಹಿಸಿ, ಜನಸಾಮಾನ್ಯರು ಜಾಗೃತಗೊಳ್ಳಬೇಕಾದ ಅವಶ್ಯಕತೆಯಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ನುಡಿದರು. ಅವರು ಇಂದು ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಡಿಜಿಟಲ್ ತಂತ್ತಜ್ಞಾನ ಹಾಗೂ ಸೈಬರ್ ಸೆಕ್ಯೂರಿಟಿ ಅರಿವು’ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಪ್ರತಿದಿನ ಎಲ್ಲೋ ಒಂದು ಕಡೆ ಸೈಬರ್ ಅಪರಾಧಗಳು ಜರುಗುತ್ತಲೇ ಇವೆ. ವಂಚಕರು…