ಜಿ ವಿ ಗೌಡ  ಕಾಲೇಜಿನ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಸಂಬಂಧಿಸಿದ ಪುಸ್ತಕಗಳ ವಿತರಣೆ.
|

ಜಿ ವಿ ಗೌಡ  ಕಾಲೇಜಿನ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಸಂಬಂಧಿಸಿದ ಪುಸ್ತಕಗಳ ವಿತರಣೆ.

ಚಾಮರಾಜನಗರ.26.ಫೆ.25:- ಹನೂರು ಪಟ್ಟಣದ ಜಿ ವಿ ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿ ಪರ ಕೋರ್ಸ್ ಗಳಾದ ಸಿಇಟಿ, ನೀಟ್, ಜೆಇಇ ,ಮುಂತಾದ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪುಸ್ತಕಗಳನ್ನು  ಮಂಗಳವಾರ ವಿತರಿಸಿದರು. ಗಣಿತ ಉಪನ್ಯಾಸಕ ನಂಜುಂಡಯ್ಯ ರವರು ಮಾತನಾಡಿ ಕರ್ನಾಟಕ ಸರಕಾರ ರಾಜ್ಯಾದ್ಯಂತ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ  ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನೀಡಿ ಅದರಲ್ಲಿ ವೃತ್ತಿ…

ರಾಜ್ಯ ಉನ್ನತ ಶಿಕ್ಷಣ ಇಲಾಖೆಯಲ್ಲಿ 9,935 ಹುದ್ದೆಗಳ ನೇಮಕ: ಯಾವ ಹುದ್ದೆ ಎಷ್ಟಿವೆ ಸಂಪೂರ್ಣ್ ಮಾಹಿತಿ…..
|

ರಾಜ್ಯ ಉನ್ನತ ಶಿಕ್ಷಣ ಇಲಾಖೆಯಲ್ಲಿ 9,935 ಹುದ್ದೆಗಳ ನೇಮಕ: ಯಾವ ಹುದ್ದೆ ಎಷ್ಟಿವೆ ಸಂಪೂರ್ಣ್ ಮಾಹಿತಿ…..

ಕರ್ನಾಟಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಬರೋಬರಿ 9935 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ನಿಯಮಗಳನ್ನು ಸಿದ್ಧಪಡಿಸಿಕೊಂಡಿದ್ದು, ಈ ಕುರಿತು ಇದೀಗ ರಾಜ್ಯಪತ್ರ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಸದ್ಯದಲ್ಲೇ ಈ ಹುದ್ದೆಗಳಿಗೆ ನೇಮಕ ಪ್ರಕ್ರಿಯೆಯ ನೋಟಿಫಿಕೇಶನ್ ಬಿಡುಗಡೆ ಆಗುವ ಎಲ್ಲ ಸಾಧ್ಯತೆಗಳು ಇವೆ. ನೀವು ಸರ್ಕಾರಿ ಉದ್ಯೋಗಾಸಕ್ತರಾಗಿದ್ದಲ್ಲಿ, ಯಾವೆಲ್ಲ ಹುದ್ದೆ ಎಷ್ಟಿವೆ ನೋಡಿ. ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧ, ಕರ್ನಾಟಕ…

ಉಪ್ಪಿನಂಗಡಿ: ಅತಿಥಿ ಉಪನ್ಯಾಸಕರ ಮನವಿ.!
|

ಉಪ್ಪಿನಂಗಡಿ: ಅತಿಥಿ ಉಪನ್ಯಾಸಕರ ಮನವಿ.!

ಉಪ್ಪಿನಂಗಡಿ.26.ಫೆ.25:- ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು ಕಡಿಮ  ಮತ್ತು ಕೇವಲ 6 ತಿಂಗಳು ವೇತನ ಪಡುತ್ತಿದ್ದಾರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ನೀಡುವ ವೇತನವನ್ನು ₹30 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ನಿಯೋಗವು ಶಾಸಕ ಅಶೋಕ್ ರೈ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ‘ರಾಜ್ಯದಾದ್ಯಂತ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 4,659 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದು, ಮಾಸಿಕ…

ಪ್ರಯಾಗರಾಜ್ ಅಪಘಾತ ಪ್ರಕರಣ;ಗಾಯಾಳು ಹಾಗೂ ಮೃತರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ.
|

ಪ್ರಯಾಗರಾಜ್ ಅಪಘಾತ ಪ್ರಕರಣ;
ಗಾಯಾಳು ಹಾಗೂ ಮೃತರ ಕುಟುಂಬಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ.

ಬೀದರ.26.ಫೆಬ್ರುವರಿ.26:-ಪ್ರಯಾಗರಾಜ್‍ಗೆ ಹೋಗಿ ಮರಳಿ ಬರುವಾಗ ಅಪಘಾತ ಸಂಭವಿಸಿ ಮೃತಪಟ್ಟವರ ಕುಟುಂಬಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಅವರು ಸಂಪೂರ್ಣವಾಗಿ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಹೇಳಿದರು. ಹಾಗೆಯೇ ಇಬ್ಬರು ಗಾಯಾಳುಗಳ ಶಸ್ತ್ರಚಿಕಿತ್ಸೆ ನಡೆಸಬೇಕು ಎಂದು ವೈದ್ಯರಿಗೆ ತಿಳಿಸಿದರು. ನಂತರ ಮೃತಪಟ್ಟವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ…

ಸುರೇಶ ಬಿರಾದಾರ ಬಿಜೆಪಿಯಿಂದ ಉಚ್ಛಾಟನೆ.
|

ಸುರೇಶ ಬಿರಾದಾರ ಬಿಜೆಪಿಯಿಂದ ಉಚ್ಛಾಟನೆ.

ಬೀದರ.26.ಫೆ.25:- ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾದ ಸುರೇಶ  ಬಿರಾದಾರ ಅವರು ಬಿಜೆಪಿ ಪಕ್ಷದ  ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡದೇ ಇಂದು ಕಾಂಗ್ರೇಸ್ ಪಕ್ಷಕ್ಕೆ  ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದ್ದ ಕಾರಣ  ಇವರನ್ನು ಪಕ್ಷದಿಂದ  ಉಚ್ಛಾಟಿಸಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PUC Accademic ವೇಳಾಪಟ್ಟಿ ಪ್ರಕಟ: ಜೂ. 2ರಿಂದ ಕಾಲೇಜುಗಳು ಆರಂಭ
|

PUC Accademic ವೇಳಾಪಟ್ಟಿ ಪ್ರಕಟ: ಜೂ. 2ರಿಂದ ಕಾಲೇಜುಗಳು ಆರಂಭ

ಬೆಂಗಳೂರು.26.ಫೆ.25:- ರಾಜ್ಯದಲ್ಲಿ 2025-26ನೇ ಸಾಲಿನ ಪಿಯು PUC ACCADEMIC 2025-26  ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬಂದ ಬೆನ್ನಲ್ಲೇ ಜೂನ್ 2ರಿಂದ ಕಾಲೇಜುಗಳು ಆರಂಭವಾಗಲಿವೆ. ದ್ವಿತೀಯ ಪಿಯು PUC IInd Admission ದಾಖಲಾತಿ ಪ್ರಕ್ರಿಯೆ ಮೇ 22ರಿಂದಲೇ ಪ್ರಾರಂಭವಾಗಲಿದ್ದು, ಜೂನ್ 2ರಿಂದ ತರಗತಿಗಳು ಆರಂಭಗೊಳ್ಳಲಿವೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಮಧ್ಯಂತರ ರಜೆ ಇರಲಿದೆ. PUC Ist and llnd ಪಿ.ಯು ಪ್ರಥಮ ಮತ್ತು ದ್ವಿತೀಯ ಪಿಯುಸಿ…

ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೊಳಿಸಲು ಸಿಎಂಗೆ.ಅಧ್ಯಕ್ಷ ಶಿವಾನಂದ ತಗಡೂರು, ಮನವಿ.!
|

ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆ ಜಾರಿಗೊಳಿಸಲು ಸಿಎಂಗೆ.ಅಧ್ಯಕ್ಷ ಶಿವಾನಂದ ತಗಡೂರು, ಮನವಿ.!

ಬೆಂಗಳೂರು.26.ಫೆ.25: ಫೆ.25 ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿ ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಅವರಿಗೆ.ಅಧ್ಯಕ್ಷ ಶಿವಾನಂದ ತಗಡೂರು, ಮನವಿ.! ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಯೋಜನೆಯನ್ನು ಆಯವ್ಯಯದಲ್ಲಿ ಘೋಷಿಸಿ, ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ. ಮಂಗಳವಾರ ಈ ಸಂಬಂಧ ಪತ್ರ ಬರೆದಿರುವ ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು, ಸದಾ…

ರಾಜ್ಯದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿ.ವಿಗಳು ಮುಚ್ಚುವ ಅಷ್ಟು ಸುಲಭವಲ್ಲ-ಡಾ.ಸಿ.ಎನ್.ಅಶ್ವಥ್ ನಾರಾಯಣ.
|

ರಾಜ್ಯದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿ.ವಿಗಳು ಮುಚ್ಚುವ ಅಷ್ಟು ಸುಲಭವಲ್ಲ-ಡಾ.ಸಿ.ಎನ್.ಅಶ್ವಥ್ ನಾರಾಯಣ.

ಬೆಂಗಳೂರು.26.ಫೆ.25:-ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತು ವಿಶ್ವವಿದ್ಯಾಲಯಗಳನ್ನು ಸರ್ಕಾರ ಮುಚ್ಚಲಿದೆ ಎಂದು ಮೂಲಗಳು ಶುಕ್ರವಾರ ಖಚಿತಪಡಿಸಿವೆ. ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉನ್ನತ ಶಿಕ್ಷಣ ಸಚಿವ, ಖಾಸಗಿ ಸಂಯೋಜಿತ ಕಾಲೇಜುಗಳನ್ನು ಮುಚ್ಚುವುದೇ ದೊಡ್ಡ ಪ್ರಕ್ರಿಯೆಯಾಗಿದ್ದು, ಸರ್ಕಾರ ಅಂದುಕೊಂಡಂತೆ ಸ್ಥಾಪಿಸಿರುವ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ಅಷ್ಟು ಸುಲಭವಲ್ಲ ಎಂದರು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ಜಿಲ್ಲೆಯಲ್ಲಿ…

ರಾಜ್ಯ ಸರ್ಕಾರದಿಂದ ಸ್ವ-ಸಹಾಯ ಗುಂಪುಗಳಿಗೆ 50 ಕಡೆ ‘ಅಕ್ಕ ಕೆಫೆ’, 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ.!
|

ರಾಜ್ಯ ಸರ್ಕಾರದಿಂದ ಸ್ವ-ಸಹಾಯ ಗುಂಪುಗಳಿಗೆ 50 ಕಡೆ ‘ಅಕ್ಕ ಕೆಫೆ’, 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ.!

ರಾಜ್ಯ ಸರ್ಕಾರ  ಸ್ವ-ಸಹಾಯ ಗುಂಪುಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 50 ಕಡೆ ‘ಅಕ್ಕ ಕೆಫೆ’ , 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ ಮಾಡುವುದಾಗಿ ಶಿವರಾತ್ರಿಯ ಶುಭ ಸುಧಿ ಘೋಷಿಸಿದೆ. ರಾಜ್ಯ ಸರ್ಕಾರ ಸ್ವ-ಸಹಾಯ ಈ ಕುರಿತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು. ರಾಜ್ಯಾದ್ಯಂತ 2.80 ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳಿವೆ. ಈ ಗುಂಪುಗಳು ಇಂದು ಎಲ್ಲೆಡೆ ಸ್ವಯಂ ಉದ್ಯೋಗದ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸ್ವ- ಸಹಾಯ ಗುಂಪುಗಳಿಗೆ ಇನ್ನಷ್ಟು ಬಲ…

ಖಾಯಂ/ ಗುತ್ತಿಗೆ / ಹೊರಗುತ್ತಿಗೆ ಇತ್ಯಾದಿ ನೌಕರರಿಗೆ ಸಾಮಾಜಿಕ ಭದ್ರತಾ ಆದೇಶ ರಾಜ್ಯ ಸರ್ಕಾರ
|

ಖಾಯಂ/ ಗುತ್ತಿಗೆ / ಹೊರಗುತ್ತಿಗೆ ಇತ್ಯಾದಿ ನೌಕರರಿಗೆ ಸಾಮಾಜಿಕ ಭದ್ರತಾ ಆದೇಶ ರಾಜ್ಯ ಸರ್ಕಾರ

ಬೆಂಗಳೂರು.25.ಫೆಬ್ರವರಿ 25: ರಾಜ್ಯ ಸರ್ಕಾರದಿಂದ ಖಾಯಂ, ಗುತ್ತಿಗೆ, ಪರೋಕ್ಷವಾಗಿ ನೇಮಕಗೊಂಡಿರುವ ಅಧಿಕಾರಿಗಳು ಹಾಗೂ ನೌಕರರಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರುವ ಅಥವಾ ವಿಸ್ತರಿಸುವ ಬಗ್ಗೆ ಕರ್ನಾಟಕ ಸರ್ಕಾರವು ಮಹತ್ವದ ಅದೇಶ ಹೊರಡಿಸಿದೆ. ಸರ್ಕಾರಿ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು, ಮಂಡಳಿಗಳು, ನಿಗಮಗಳು ಇತ್ಯಾದಿಗಳಲ್ಲಿ ಇರುವ ಒಟ್ಟು ಉದ್ಯೋಗಿಗಳ ಸಂಖ್ಯೆ 11 ಲಕ್ಷಕ್ಕೂ ಹೆಚ್ಚು ಇದ್ದು, ಕರ್ನಾಟಕ ಸರ್ಕಾರವು ಮಾದರಿ ಉದ್ಯೋಗದಾತರಾಗಿ, ಸರ್ಕಾರಿ ಮತ್ತು ಇತರ ಸರ್ಕಾರಿ ಅಂಗ (ಸ್ವಾಯತ್ತ) ಸಂಸ್ಥೆಗಳ ವಿವಿಧ ಉದ್ಯೋಗಿಗಳಿಗೆ (ಖಾಯಂ/ ಗುತ್ತಿಗೆ/ಹೊರಗುತ್ತಿಗೆ ಇತ್ಯಾದಿ)…