ಬೀದರ|ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.!

ಬೀದರ|ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.!

ಬೀದರ.01.ಮಾರ್ಚ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ವತಿಯಿಂದ ಮಾರ್ಚ.8 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಸಮುದಾಯ ಭವನ, ಪ್ರತಾಪ ನಗರ, ನೌಬಾದ ಬೀದರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ವಹಿಸಿಕೊಳ್ಳಲಿದ್ದಾರೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ ವಿಶ್ವವಿದ್ಯಾಲಯದ ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್ಸಿ ಫಲಿತಾಂಶ ಘೋಷಣೆ.!
|

ಬೀದರ ವಿಶ್ವವಿದ್ಯಾಲಯದ ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್ಸಿ ಫಲಿತಾಂಶ ಘೋಷಣೆ.!

ಬೀದರ.01.ಮಾರ್ಚ.01: ಬೀದರ ವಿಶ್ವವಿದ್ಯಾಲಯ ಜ್ಞಾನಕಾರಂಜಿ ಹಾಲಹಳ್ಳಿಯ ಮುಖ್ಯ ಆವರಣದಲ್ಲಿ ಇಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಅವರು ಸ್ನಾತಕ ಬಿ.ಬಿ.ಎ., ಬಿ.ಸಿ.ಎ., ಹಾಗೂ ಬಿ.ಎಸ್ಸಿ ಎರಡನೆಯ ಸೆಮೆಸ್ಟರ್ ಪದವಿ ಫಲಿತಾಂಶವನ್ನು ಬಿಡುಗಡೆಗೊಳಿಸಿ ಮಾತನಾಡಿದ ಕುಲಪತಿಗಳು ಎಲ್ಲರ ಸಹಕಾರದೊಂದಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಬಂದಿದೆ. ನೂತನ ವಿಶ್ವವಿದ್ಯಾಲಯವಾಗಿದ್ದರೂ ಸಹ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ ಫಲಿತಾಂಶ ನೀಡುವಲ್ಲಿ ಬೀದರ ವಿಶ್ವವಿದ್ಯಾಲಯ ಯಶಸ್ವಿಯಾಗಿದೆ ಎಂದರು.      ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ ಮಾತನಾಡಿ, ಸಮಯಕ್ಕೆ ಸರಿಯಾಗಿ ಬೀದರ…

ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಹುದ್ದೆಗಳ ಭರ್ತಿಗೆ : ಸರ್ಕಾರ ಆದೇಶ.!
|

ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಹುದ್ದೆಗಳ ಭರ್ತಿಗೆ : ಸರ್ಕಾರ ಆದೇಶ.!

ಬೆಂಗಳೂರು.01.ಫೆ.25:- ರಾಜ್ಯದಲ್ಲಿ ಖಾಲಿಯಿರುವ ಖಾಸಗಿ ಅನುದಾನಿತ  ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ಖಾಲಿಯಿರುವ ಹುದ್ದೆಗಳನ್ನು ಶಿಪ್ರೇವೆ ಭರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ(2)ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(2)ರ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ…

ಮಾರ್ಚ.2 ರಂದು ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ ಕಾರ್ಯಕ್ರಮ.!
| |

ಮಾರ್ಚ.2 ರಂದು ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ ಕಾರ್ಯಕ್ರಮ.!

ಬೀದರ.01.ಮಾ.25:- ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಮಾರ್ಚ.2 ರಂದು ಬೆಳಿಗ್ಗೆ 10 ಗಂಟೆಗೆ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ.ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ…

“ಬಸವತತ್ವ ಮನುಷ್ಯ ಜಗತ್ತು ಇರುವವರೆಗೂನಮಗೆ ದಾರಿ ದೀಪ”
|

“ಬಸವತತ್ವ ಮನುಷ್ಯ ಜಗತ್ತು ಇರುವವರೆಗೂ
ನಮಗೆ ದಾರಿ ದೀಪ”

ಚಿಕ್ಕಮಂಗಳೂರು.01.ಮಾರ್ಚ.25:- ಚಿಕ್ಕಮಗಳೂರಿನ ಶ್ರೀ ಬಸವತತ್ವ ಪೀಠದ ಶ್ರೀ ಮ.ನಿ.ಪ್ರ. ಡಾ. ಬಸವ ಮರುಳಸಿದ್ದ ಸ್ವಾಮಿಗಳ ನೇತೃತ್ವದಲ್ಲಿ ನಡೆದ ಬಸವ ತತ್ವ ಸಮಾವೇಶ, ಶ್ರೀ ಮ. ನಿ. ಪ್ರ. ಚಂದ್ರಶೇಖರ ಮಹಾಸ್ವಾಮಿಗಳವರ 170ನೇ ಜಯಂತಿ, ಶ್ರೀ ಮ. ನಿ. ಪ್ರ. ಜಯಚಂದ್ರಶೇಖರ ಮಹಾಸ್ವಾಮಿಗಳವರ 29ನೇ ಸಂಸ್ಮರಣೆ ಮತ್ತು ಶ್ರೀಮಠದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. 12 ನೇ ಶತಮಾನದಲ್ಲಿ ವೃತ್ತಿ ಆಧಾರಿತ ಸಮುದಾಯಗಳ ಕುಲ ಕಸುಬುಗಳಿಂದ ಮಾತ್ರ ನೈಜ ಸಮಾಜ ನಿರ್ಮಾಣ ಸಾಧ್ಯ ಎಂದು ಜಗತ್ತಿಗೆ ತೋರಿಸಿಕೊಟ್ಟವರು…

ಸಾರ್ವಜನಿಕರ ಗಮನಕ್ಕೆ: ಪ್ರದೀಪ ಗುಂಟಿ.                                   ಪೊಲೀಸ್ ವರೀಷಾಧಿಕಾರಿಗಳು, ಬೀದರ,
|

ಸಾರ್ವಜನಿಕರ ಗಮನಕ್ಕೆ: ಪ್ರದೀಪ ಗುಂಟಿ.                                   ಪೊಲೀಸ್ ವರೀಷಾಧಿಕಾರಿಗಳು, ಬೀದರ,

ಬೀದರ ಜಿಲ್ಲಾ ಪೊಲೀಸ್ ಸಾರ್ವಜನಿಕರ ಗಮನಕ್ಕೆ ಮೈಕ್ರೋ ಫೈನಾನ್ಸಗೆ ಸಂಬಂಧಿಸಿದಂತೆ ತಮ್ಮ ಯಾವುದೇ ದೂರುಗಳಿದ್ದರೆ > ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸುವುದು. ನಮ್ಮ 112 ಸಹಾಯವಾಣಿಗೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 9480803400 ಗೆ ಕರೆ ಮಾಡಿ ದೂರು ನೀಡುವುದು. ಜೀವನ ಅಮೂಲ್ಯವಾದದ್ದು ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆತ್ಮಹತ್ಯೆಯಂತಹ ಅನಾಹುತಗಳಿಗೆ ಯತ್ನಿಸಬಾರದು ಎಂದು ಈ ಮೂಲಕ ಬೀದರ ಪೊಲೀಸ್ ವತಿಯಿಂದ ಕೋರಲಾಗಿದೆ.               ಶ್ರೀ ಪ್ರದೀಪ ಗುಂಟಿ.                                   ಪೊಲೀಸ್ ವರೀಷಾಧಿಕಾರಿಗಳು, ಬೀದರ,

ಸಾರ್ವಜನಿಕರ ಗಮನಕ್ಕೆ: ಪ್ರದೀಪ್ ಗುಂಟಿ,ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ.
|

ಸಾರ್ವಜನಿಕರ ಗಮನಕ್ಕೆ: ಪ್ರದೀಪ್ ಗುಂಟಿ,ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ.

ಬೀದರ.01.ಮಾರ್ಚ್.25:- ಮೈಕ್ರೊ ಫೈನಾನ್ಸ ಕಂಪನಿಗಳು ಸಾಲ ನೀಡಿ, ವಸೂಲಿ ನೆಪದಲ್ಲಿ ಸರ್ಕಾರದ ಮಾರ್ಗಸೂಚಿಗಳ ವಿರುದ್ದವಾಗಿ ಪದೇ ಪದೇ ಕಿರುಕುಳ ನೀಡಿದರೆ, ತಕ್ಷಣವೇ ಪೊಲೀಸ್ ಸಹಾಯವಾಣಿ  ನಮ್ಮ 112 ಗೆ ಕರೆ ಮಾಡಿ ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ. ಪ್ರದೀಪ್ ಗುಂಟಿ, ಐ.ಪಿಎ.ಸ್,ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ.

“ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ.!
|

“ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ.!

ಬೆಂಗಳೂರು.01.ಮಾರ್ಚ್.25:- ಇಂದು ಬೆಂಗಳೂರಿನ ಬಸವ ಸಮಿತಿಯ ಸಭಾಂಗಣದಲ್ಲಿ “ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ಒಂದು ಐತಿಹಾಸಿಕ ಹಾಗು ಹೊಸದೊಂದು ಬೆಳವಣಿಗೆಗೆ ನಾಂದಿ ಹಾಡಿತು. ಪ್ರಪ್ರಥಮ ಬಾರಿಗೆ ಜಾಗತಿಕ ಲಿಂಗಾಯತ ಮಹಾಸಭಾ ಹಾಗು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಸ್ಥೆಗಳು ಒಂದೆ ವೇದಿಕೆಯಲ್ಲಿ ಸಮಾವೇಶಗೊಂಡವು.ಎರಡು ಸಂಸ್ಥೆಗಳು ಸಮುದಾಯದ ಹಿತಕ್ಕಾಗಿ ಸಮರಸದ ವಿಚಾರಗಳನ್ನು ವ್ಯಕ್ತಪಡಿಸಿದವು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷರಾದ ಶರಣ ಶಂಕರ ಬಿದರಿಯವರ ಮಾತುಗಳು ಹೃದಯಕ್ಕೆ ನಾಟಿದವು.ನನ್ನ ಕಣ್ಣಂಚಿನಿಂದ ಸಂತೋಷದ…

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆಕ್ರಮ ವಹಿಸಿ-ಸಚಿವ ಈಶ್ವರ ಖಂಡ್ರೆ
|

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ
ಕ್ರಮ ವಹಿಸಿ-ಸಚಿವ ಈಶ್ವರ ಖಂಡ್ರೆ

ಬೀದರ.01.ಮಾರ್ಚ್.25: ಜಿಲ್ಲೆಯ 867 ಜನವಸತಿ ಪ್ರದೇಶಗಳಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಮುಂಜಾಗೃತಾ ಕ್ರಮ ವಹಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ನೀರಿನ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಸಧ್ಯ ಬೇಸಿಗೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸುವಂತೆ ಸಚಿವ ಖಂಡ್ರೆ ಸೂಚನೆ ನೀಡಿದರು. ಗ್ರಾಮೀಣ ಕುಡಿಯುವ ನೀರು…