ಮಹಿಳೆಯರಿಂದ ಮಹಿಳೆಯರಿಗಾಗಿ ಜಿಲ್ಲಾಡಳಿತದಿಂದ ವಿಶೇಷ ಮಹಿಳಾ ದಿನಾಚರಣೆ
|

ಮಹಿಳೆಯರಿಂದ ಮಹಿಳೆಯರಿಗಾಗಿ ಜಿಲ್ಲಾಡಳಿತದಿಂದ ವಿಶೇಷ ಮಹಿಳಾ ದಿನಾಚರಣೆ

ಬೀದರ.11.ಮಾರ್ಚ.25: – ಮಹಿಳೆ ಜಗತ್ತಿನ ಅದ್ಭುತ ಶಕ್ತಿಯಾಗಿದ್ದು, ಸರಕಾರಿ ಸೇವೆ ಮಾಡುವ ಮಹಿಳೆಯರು ಕುಟುಂಬ ಹಾಗೂ ಕಚೇರಿ ಎರಡನ್ನು ಸರಿದೂಗಿಸಿಕೊಂಡು ಹೊಗುತ್ತಾರೆಂದು ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ಅಭಿಪ್ರಾಯಪಟ್ಟರು. ಇಂದು ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಲಾದ ವಿಶೇಷ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡುತ್ತಾ, ವೇದಿಕೆಯಲ್ಲಿ ಎಲ್ಲರೂ ಮಹಿಳೆಯರೇ ಸ್ಥಾನವನ್ನು ಅಲಂಕರಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಮುಂಬರುವ ಎಲ್ಲ ದಿನಮಾನಗಳಲ್ಲಿ ಎಲ್ಲ ಕಾರ್ಯಕ್ರಮಗಳಲ್ಲಿ ಶೇ.50 ರಷ್ಟು ಮಹಿಳೆಯರು ವೇದಿಕೆಯಲ್ಲಿ ಉಪಸ್ಥಿತರಿರಬೇಕೆಂದರು. ಕೆಲಸ ಮಾಡುವ ಮಹಿಳೆಯರು ಕಚೇರಿಗೆ ಬರುವ ಮುನ್ನ ಮನೆಯಲ್ಲಿಯ ಎಲ್ಲ ಕೆಲಸ…

SC/ST ಉಪಯೋಜನೆಯಡಿಪತ್ರಕರ್ತರಿಗೆ Kit ನೀಡಲು ಅರ್ಜಿ ಆಹ್ವಾನ.
|

SC/ST ಉಪಯೋಜನೆಯಡಿ
ಪತ್ರಕರ್ತರಿಗೆ Kit ನೀಡಲು ಅರ್ಜಿ ಆಹ್ವಾನ.

ಬೆಂಗಳೂರು.11.ಮಾರ್ಚ.25:- ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ  Mo-Jo-Kit    ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ…

ಮಾ.12 ರಿಂದ 23 ರವರೆಗೆ ಬೆಳಿಗ್ಗೆ 5 ರಿಂದಮಧ್ಯಾಹ್ನ 12 ರವರೆಗೆ ವಿದ್ಯುತ್ ಸರಬರಾಜು ಮಾಡಲು ಕ್ರಮ
|

ಮಾ.12 ರಿಂದ 23 ರವರೆಗೆ ಬೆಳಿಗ್ಗೆ 5 ರಿಂದ
ಮಧ್ಯಾಹ್ನ 12 ರವರೆಗೆ ವಿದ್ಯುತ್ ಸರಬರಾಜು ಮಾಡಲು ಕ್ರಮ

ಬೀದರ.11.ಮಾರ್ಚ.25:- 110/33/11ಕೆವಿ ಜನವಾಡಾ ಉಪ-ಕೇಂದ್ರದಿoದ ಸರಬರಾಜು ಆಗುವ 11ಕೆವಿ ಮರಖಲ್ ಐಪಿ ಫೀಡರನ ಮೇಲೆ ಖeಛಿoಟಿಜuಛಿಣoಡಿiಟಿg ಕೆಲಸ ಇರುವುದರಿಂದ 11ಕೆವಿ ಮರಖಲ್ ಐಪಿ ಫೀಡರ್‌ದಿಂದ ಮರಖಲ್‌ದಿಂದ ಬೇನಕನಳ್ಳಿ ರೋಡ್‌ವರೆಗೆ. ದಿನಾಂಕ: 12-03-2025 ರಿಂದ 23-03-2025 ರವರೆಗೆ ಬೆಳಿಗ್ಗೆ 5:00 ಗಂಟೆಯಿAದ ಮಧ್ಯಾಹ್ನ 12:00 ಗಂಟೆವರೆಗೆ ಮಾತ್ರ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಆದ್ದರಿಂದ ಮರಖಲ್, ಬೇನಕನಳ್ಳಿ, ಕನ್ನಳ್ಳಿ ಊರಿನ ಫೀಡರಗಳ ಮೇಲೆ ಬರುವ ಎಲ್ಲಾ ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಬೀದರ ವಿಭಾಗದ ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವವಿದ್ಯಾಲಯ ಹೊಸತು ಬಿಡಿ, ಹಳೇ ವಿಶ್ವವಿದ್ಯಾನಿಲಯಗಳಿಗೂ ದುಃಸ್ಥಿತಿ!
|

ವಿಶ್ವವಿದ್ಯಾಲಯ ಹೊಸತು ಬಿಡಿ, ಹಳೇ ವಿಶ್ವವಿದ್ಯಾನಿಲಯಗಳಿಗೂ ದುಃಸ್ಥಿತಿ!

ಬೆಂಗಳೂರು.11.ಮಾರ್ಚ.25:- ರಾಜ್ಯ ಉನ್ನತ ಶಿಕ್ಷಣ ಇಲಾಖೆಯೆಲ್ಲಿ ಆರಂಭಗೊಂಡಿರುವ ಹತ್ತು ಹೊಸ ವಿಶ್ವವಿದ್ಯಾನಿಲಯಗಳನ್ನು ಪೈಕಿ ಒಂಬತ್ತು ವಿಶ್ವವಿದ್ಯಾಲಯಗಳು ಮುಚ್ಚಬೇಕೇ ಬೇಡವೇ ಎಂಬ ಚರ್ಚೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಆದರೆ ಇರುವ ಹಳೆಯ ವಿಶ್ವವಿದ್ಯಾಲಯಗಳ ಆರ್ಥಿಕ ಮತ್ತು ಆಡಳಿತಾತ್ಮಕ ಸ್ಥಿತಿಗತಿ ಚಿಂತಾಜನಕವಾಗಿದ್ದು, ಬಾಗಿಲು ಮುಚ್ಚುವ ಸ್ಥಿತಿ ನಿರ್ಮಾಣವಾಗಿ ರುವುದು ಇದಕ್ಕಿಂತ ಆಘಾತಕಾರಿ ವಿಷಯ. ರಾಜ್ಯದ 32 ವಿಶ್ವವಿದ್ಯಾಲಯಗಳಲ್ಲಿ ಬಹುತೇಕ ಕಡೆ ಸಿಬಂದಿ ಇಲ್ಲ, ಅನುದಾನ ಇಲ್ಲ, ಕುಲಪತಿಯೂ ಇಲ್ಲ!ರಾಜ್ಯದಲ್ಲಿರುವ 32 ವಿಶ್ವವಿದ್ಯಾಲಯಗಳ ಪೈಕಿ ಬಹುತೇಕ ವಿಶ್ವವಿದ್ಯಾಲಯಗಳಲ್ಲಿ ಉಚಯಂ ಬೋಧಕರು ಮತ್ತು…

ಮಾಜಿ ಸೈನಿಕರರಿಗೆ ಗುತ್ತಿಗೆ ಆಧಾರಮೇಲೇ ನೇಮಕಾತಿಗೆ ಅರ್ಜಿ ಆಹ್ವಾನ
|

ಮಾಜಿ ಸೈನಿಕರರಿಗೆ ಗುತ್ತಿಗೆ ಆಧಾರಮೇಲೇ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. (National cadet corps) ನಿರ್ದೇಶನಾಲಯವು ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ರಾಯಚೂರು, ಮತ್ತು ಶಿವಮೊಗ್ಗದ ಎನ್.ಸಿ.ಸಿ. ಬೆಟಾಲಿಯನ್‍ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಜಿ ಸೈನಿಕರನ್ನು ಎನ್‍ಸಿಸಿ ಬೆಟಾಲಿಯನ್‍ಗಳಿಗೆ ಹೆಚ್ಚುವರಿ ಸಿಬ್ಬಂದಿಗಳಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಭೂ ಸೇನೆಯಿಂದ ಆಕ್ಟೋಬರ್ 2022ರ ನಂತರ ನಿವೃತ್ತರಾಗಿರುವ ಜೆ.ಸಿ.ಒ (ಸುಬೇದಾರ್ ಮತ್ತು ನಾಯಬ್ ಸುಬೇದರ್) ಹಾಗೂ ಹವಾಲ್ದಾರ್ ರ್ಯಾಂಕ್‍ನ (ಎಮ್‍ಎಸಿಪಿ…

ಕಲ್ಯಾಣ ಕರ್ನಾಟಕ: ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರು ಸೇರಿ 12 ಸಾವಿರ ಹುದ್ದೆಗಳ ನೇಮಕಾತಿಗೆ ಸೂಚನೆ.!
|

ಕಲ್ಯಾಣ ಕರ್ನಾಟಕ: ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರು ಸೇರಿ 12 ಸಾವಿರ ಹುದ್ದೆಗಳ ನೇಮಕಾತಿಗೆ ಸೂಚನೆ.!

ಬೆಂಗಳೂರು.11.ಮಾರ್ಚ.25: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಸಚಿವ ಸಂಪುಟ ಉಪಸಮಿತಿಯ ವರದಿಗಳ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಅನುಚ್ಚೇದ 371 (ಜೆ) ಅಡಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಕಲ್ಪಿಸಿರುವ ಮೀಸಲಾತಿ ನಿಯಮಗಳ ಸಮರ್ಪಕ ಜಾರಿ ಮತ್ತು ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಈ ವಿಷಯದಲ್ಲಿ ಅನಾದರ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ…

ಸಂಕಲ್ಪದೊಂದಿಗೆ ನಮ್ಮ ಸ್ಪರ್ಧಾ ಸಂಕಲ್ಪ ಅಕಾಡೆಮಿ ಬೀದರ
|

ಸಂಕಲ್ಪದೊಂದಿಗೆ ನಮ್ಮ ಸ್ಪರ್ಧಾ ಸಂಕಲ್ಪ ಅಕಾಡೆಮಿ ಬೀದರ

ಉತ್ತಮ ಕಲಿಕೆ ವಾತಾವರಣದೊಂದಿಗೆ ಉತ್ತಮ ಭವಿಷ್ಯ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ನಮ್ಮ ಸ್ಪರ್ಧಾ ಸಂಕಲ್ಪ ಅಕಾಡೆಮಿ ಬೀದರ ನಗರದಲ್ಲಿ ಹಲವು ವರ್ಷಗಳಿಂದ ಕಾರ್ಯ ಮಾಡುತ್ತ ಬರುತ್ತಿದೆ. 6ನೇ ವರ್ಷದಲ್ಲಿ ಕಾಲಿಡುತ್ತಿರುವ ಸ್ಪರ್ಧಾ ಸಂಕಲ್ಪ ಅಕಾಡೆಮಿಯಲ್ಲಿ ನೂರಾರು ವಿದ್ಯಾರ್ಥಿಗಳು ಸರ್ಕಾರಿ ನೌಕರಿಯನ್ನು ಪಡೆದುಕೊಂಡಿದ್ದಾರೆ.ನವೋದಯ, ಸೈನಿಕ್, ಮೂರಾರ್ಜಿ ,ಆದರ್ಶ ಇನ್ನಿತರ ಶಾಲೆಗಳಿಗೆ ಉಚಿತ ಪ್ರವೇಶ ಪಡೆದುಕೊಂಡು ಉಜ್ವಲ ಬದುಕು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೆಲ್ಲ ನೀವಿಟ್ಟಿರುವ ಅಕಾಡೆಮಿ ಮೇಲೆ ವಿಶ್ವಾಸ, ಭರವಸೆ, ನಾವು ಸದಾ ಉಳಿಸಿಕೊಂಡು ಹೋಗುತ್ತೇವೆ. ಯೋಗ,ಧ್ಯಾನ,ಕ್ರೀಡೆ ಹಾಗೂ ಪ್ರಾರ್ಥನೆ ಮೂಲಕ…

ಪ್ರೌಢಶಾಲೆ ಶಿಕ್ಷಕರಿಗೆ ಪಿಯು P U  ಉಪನ್ಯಾಸಕರ ಹುದ್ದೆಗೆ ಬಡ್ತಿ. ಸಚಿವ ಮಧು ಬಂಗಾರಪ್ಪ
|

ಪ್ರೌಢಶಾಲೆ ಶಿಕ್ಷಕರಿಗೆ ಪಿಯು P U  ಉಪನ್ಯಾಸಕರ ಹುದ್ದೆಗೆ ಬಡ್ತಿ. ಸಚಿವ ಮಧು ಬಂಗಾರಪ್ಪ

ಬೆಂಗಳೂರು.11.ಮಾರ್ಚ.25:- ರಾಜ್ಯದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಪದೋನ್ನತಿ(promotion) ನೀಡುವ ಕುರಿತಾಗಿ ಜೇಷ್ಠತಾ ಪಟ್ಟಿಯನ್ನು ಒಂದು ತಿಂಗಳಲ್ಲಿ ಸಿದ್ಧಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಶಿಲ್ ನಮೋಶಿಯವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಜೇಷ್ಠತಾ ಪಟ್ಟಿ ತಡವಾಗಿರುವುದು ನಿಜ. ಬಡ್ತಿ ನೀಡುವ ಕುರಿತಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆಯ ಹಂತದಲ್ಲಿ 4 ವಿಭಾಗಗಳ ಪ್ರೌಢಶಾಲಾ ಶಿಕ್ಷಕರ…

371 (ಜೆ) ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತ ಸಂಪುಟ ಉಪ ಸಮಿತಿ ಸಭೆ.!
|

371 (ಜೆ) ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತ ಸಂಪುಟ ಉಪ ಸಮಿತಿ ಸಭೆ.!

ಬೆಂಗಳೂರು.11.ಮಾರ್ಚ.25:- ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಸಚಿವ ಸಂಪುಟ ಉಪಸಮಿತಿಯ ವರದಿಗಳ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹುದ್ದೆಗಳ ನೇಮಕಾತಿ, ಮುಂಬಡ್ತಿ, ಜೇಷ್ಠತೆ ಮುಂತಾದ ಪ್ರಕ್ರಿಯೆಗಳು ಮಂದಗತಿಯಲ್ಲಿ ನಡೆಯುತ್ತಿರುವುದನ್ನು ತೀವ್ರವಾಗಿ ಆಕ್ಷೇಪಿಸಿ, 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತ ಸಂಪುಟ ಉಪ ಸಮಿತಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಭೆ ಸೇರಿ ಸರ್ಕಾರದ ಐದು…