ವಕ್ಫ್ ತಿದ್ದುಪಡಿ ವಿರೋಧ ಪ್ರತಿಭಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನಸಾಗರ
|

ವಕ್ಫ್ ತಿದ್ದುಪಡಿ ವಿರೋಧ ಪ್ರತಿಭಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನಸಾಗರ

ಮಂಗಳೂರು.19.ಏಪ್ರಿಲ್.25:- ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ವಕ್ಫ್‌ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಉಲಮಾ ಒಕ್ಕೂಟ ನಗರ ಹೊರವಲಯದ ಅಡ್ಯಾರ್ ಷಾ ಗಾರ್ಡನ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಜನಸಾಗರವಾಗಿ ಪರಿವರ್ತನೆಯಾಯಿತು. ಸಮಾವೇಶ ನಡೆದ ವಿಶಾಲ ಅಂಗಳದಲ್ಲಿ ಸಂಜೆಯ ಬಿಸಿಲು ಲೆಕ್ಕಿಸದೆ ಅಪಾರ ಜನರು ಜಮಾಯಿಸಿದ್ದರು. ಬಿಸಿ ರೋಡ್ ಮತ್ತು ಮಂಗಳೂರು ಕಡೆಯಿಂದ ಬಂದವರು ಕಿಲೊಮೀಟರ್‌ಗಳಷ್ಟು ದೂರ ವಾಹನ ನಿಲ್ಲಿಸಿ ನಡೆದುಕೊಂಡು ಬಂದರು. ನಾಲ್ಕು ಗಂಟೆಯ ವೇಳೆಗೆ ಸಮಾವೇಶ ಆರಂಭವಾಯಿತು. ನಂತರವೂ ಬಂದವರು…

ಏ.22 ರಂದು ‘ವಿಶ್ವ ಭೂ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.
|

ಏ.22 ರಂದು ‘ವಿಶ್ವ ಭೂ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.

ಬೆಂಗಳೂರು.19.ಏಪ್ರಿಲ್.25:- ರಾಜ್ಯಾಧ್ಯಂತ 22.04.2025ರಂದು ವಿಶ್ವ ಭೂ ದಿನ ಆಚರಿಸುವ ಕುರಿತು. (World Earth day Celebration) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪ್ರತಿ ವರ್ಷವು ವಿಶ್ವದಾದ್ಯಂತ ಏಪ್ರಿಲ್ -22 ರಂದು ಪರಿಸರ ಸಂರಕ್ಷಣೆಗಾಗಿ ” ವಿಶ್ವ ಭೂ ದಿನ’ವನ್ನು ಆಚರಿಸಲಾಗುತ್ತಿದೆ. ಭೂಮಿ ಮನುಷ್ಯ ಮಾತ್ರವಲ್ಲದೆ, ಎಷ್ಟೋ ಜೀವ ಸಂಕುಲೆಗಳು, ಸೂಕ್ಷಾಣುಗಳು, ಸಸ್ಯಗಳನ್ನು ತನ್ನ ಒಡಲಿನಲ್ಲಿ ತುಂಬಿಕೊಂಡು ಸಲಹುತ್ತಿದೆ. ಆದರೆ ಈ ಭೂಮಿಯಲ್ಲಿ ಇರುವ ಜೀವಿಗಳಲ್ಲಿ ಮನುಷ್ಯನಿಂದ ಭೂಮಿಗೆ ಕಂಟಕವಾಗಿದೆ. ಭೂಮಿಯ ಮೇಲೆ…

ರೈತನ ಮೇಲೆ ಖಾಸಗಿ ಬ್ಯಾಂಕ್ ಸಿಬ್ಬಂದಿಗಳಿಂದ ಹಲ್ಲೆ, ಆರೋಪ
|

ರೈತನ ಮೇಲೆ ಖಾಸಗಿ ಬ್ಯಾಂಕ್ ಸಿಬ್ಬಂದಿಗಳಿಂದ ಹಲ್ಲೆ, ಆರೋಪ

ಹುಲಸೂರ.19.ಏಪ್ರಿಲ್.25:- ಹುಲಸೂರ: ಸಮೀಪದ ಭಾಲ್ಕಿ ತಾಲೂಕಿನ ಕೇಸರಜವಳಗಾ ಗ್ರಾಮದಲ್ಲಿರುವ ಭಾಲ್ಕಿಯ ಖಾಸಗಿ ಬ್ಯಾಂಕ್ ನ ಸಿಬ್ಬಂದಿಗಳು ಸಾಲದ ಕಂತಿನ ಹಣ ವಸೂಲಿಗೆ ಬಂದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ರೈತರೊಬ್ಬರ ಮೇಲೆ ಎ.17ರ ಗುರುವಾರ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಭಾಲ್ಕಿ ತಾಲೂಕಿನ ಕೇಸರಜವಳಗಾ ಗ್ರಾಮದ ರೈತ ರಾಜಕುಮಾರ್ ನಾಗಪ್ಪ ಮಟ್ಟೆ ಭಾಲ್ಕಿಯಲ್ಲಿರುವ ಬ್ಯಾಂಕ್‌ನಲ್ಲಿ 39 ಸಾವಿರ ರೂ. ಸಾಲ ಪಡೆದಿದ್ದರು. ರಾಜಕುಮಾ‌ರ್ ಇಲ್ಲಿಯವರೆಗೆ ಪ್ರತಿ ವಾರ 835 ರೂ. ಕಂತಿನಂತೆ 36 ರಿಂದ 37 ಸಾವಿರ…

ಬೀದರನ ಗಾಂಧಿ ಗಂಜ – ಹೊಸ ಮಾದರಿ ಮಾರುಕಟ್ಟೆಯ ಅಗತ್ಯತೆ*
|

ಬೀದರನ ಗಾಂಧಿ ಗಂಜ – ಹೊಸ ಮಾದರಿ ಮಾರುಕಟ್ಟೆಯ ಅಗತ್ಯತೆ*

ಬೀದರ.19.ಏಪ್ರಿಲ್.25:- ಬೀದರದ APMC ಯಾರ್ಡ್, ಎಲ್ಲರಿಗೂ ಗೊತ್ತಿರುವಂತೆ, ನಾವು “ಗಾಂಧಿ ಗಂಜ” ಎಂದು ಕರೆಯುತ್ತೇವೆ. ಇದು ಬೀದರದ ಪ್ರಮುಖ ಕೃಷಿ ಮಾರುಕಟ್ಟೆ ಹಾಗೂ ಬೀದರನ ವಾಣಿಜ್ಯ ಚಟುವಟಿಕೆಗಳಿಗೆ ಬೆನ್ನೆಲುಬಾಗಿದ್ದು, ಸುಮಾರು 30 ಎಕರೆ ಭೂಮಿಯಲ್ಲಿ ಸ್ಥಾಪಿತವಾಗಿದೆ. ಈ ಮಾರುಕಟ್ಟೆಗೆ ಇಂದಿಗೆ ಸುಮಾರು 70 ವರ್ಷಗಳ ಇತಿಹಾಸವಿದೆ. ಆದಾಗಿನ ಅವಧಿಯಲ್ಲಿ ಇದ್ದ ಕೃಷಿ ಉತ್ಪನ್ನಗಳ ಆವಕ ಮತ್ತು ವ್ಯಾಪಾರಸ್ಥರ ಸಂಖ್ಯೆಯು, ಇಂದಿನ ಹೆಚ್ಚಿನ ವ್ಯಾಪಾರ ಚಟುವಟಿಕೆಗಳಿಗೆ ಹೋಲಿಕೆಯಾಗುವಂತಿಲ್ಲ. ಈ ದಿನಗಳಲ್ಲಿ ಮಾರುಕಟ್ಟೆಯ ವ್ಯಾಪ್ತಿ ಹೆಚ್ಚಾಗಿರುವುದರಿಂದ, ಸುಗ್ಗಿ ಕಾಲದಲ್ಲಿ ದೈನಂದಿನ…