ವಕ್ಫ್ ತಿದ್ದುಪಡಿ ವಿರೋಧ ಪ್ರತಿಭಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನಸಾಗರ
ಮಂಗಳೂರು.19.ಏಪ್ರಿಲ್.25:- ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಉಲಮಾ ಒಕ್ಕೂಟ ನಗರ ಹೊರವಲಯದ ಅಡ್ಯಾರ್ ಷಾ ಗಾರ್ಡನ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಜನಸಾಗರವಾಗಿ ಪರಿವರ್ತನೆಯಾಯಿತು. ಸಮಾವೇಶ ನಡೆದ ವಿಶಾಲ ಅಂಗಳದಲ್ಲಿ ಸಂಜೆಯ ಬಿಸಿಲು ಲೆಕ್ಕಿಸದೆ ಅಪಾರ ಜನರು ಜಮಾಯಿಸಿದ್ದರು. ಬಿಸಿ ರೋಡ್ ಮತ್ತು ಮಂಗಳೂರು ಕಡೆಯಿಂದ ಬಂದವರು ಕಿಲೊಮೀಟರ್ಗಳಷ್ಟು ದೂರ ವಾಹನ ನಿಲ್ಲಿಸಿ ನಡೆದುಕೊಂಡು ಬಂದರು. ನಾಲ್ಕು ಗಂಟೆಯ ವೇಳೆಗೆ ಸಮಾವೇಶ ಆರಂಭವಾಯಿತು. ನಂತರವೂ ಬಂದವರು…