ನರೇಗಾ ಯೋಜನೆಯಡಿ ಮೇ ತಿಂಗಳಲ್ಲಿ 1ಲಕ್ಷ ಕೂಲಿಕಾರರಿಗೆ ಕೆಲಸ ನೀಡಲಾಗುವುದು-ಸಿಇಓ ಡಾ. ಗಿರೀಶ ಬದೋಲೆ
|

ನರೇಗಾ ಯೋಜನೆಯಡಿ ಮೇ ತಿಂಗಳಲ್ಲಿ 1ಲಕ್ಷ ಕೂಲಿಕಾರರಿಗೆ ಕೆಲಸ ನೀಡಲಾಗುವುದು-ಸಿಇಓ ಡಾ. ಗಿರೀಶ ಬದೋಲೆ

ಬೀದರ.28.ಏಪ್ರಿಲ್.25:- ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಏಪ್ರಿಲ್, ಮೇ ಮತ್ತು ಜೂನ್ ತಿಂಗಳು ಕೂಲಿಕಾರರು ಕೆಲಸ ನಿರೀಕ್ಷಿಸುವ ತಿಂಗಳುಗಳಾಗಿದ್ದು, ಮೇ ತಿಂಗಳಿನಲ್ಲಿ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಒಂದು ಲಕ್ಷ ಜನ ಕೂಲಿಕಾರರಿಗೆ ಕೆಲಸ ನೀಡಲಾಗುವುದು ಎಂದು ಬೀದರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ಅವರು ಸೂಚಿಸಿದರು.ಅವರು ಶುಕ್ರವಾರದಂದು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಟಿಸಿಗಳು, ಟಿಐಎಂಎಸ್, ಟಿಐಇಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ಜರುಗಿಸಿ ಮಾತನಾಡಿದರು….

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
|

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.28.ಏಪ್ರಿಲ್.25:- 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Via /C.E.T/N.E.E.T  ಮುಖಾಂತರ) ಎಂ.ಬಿ.ಬಿ.ಎಸ್, ಬಿ.ಡಿ.ಎಸ್., ಬಿ.ಆಯುಷ್, ಬ್ಯಾಚುಲರ ಆಫ್ ಆರ್ಕ, ಬಿ.ಇ….

ಪ್ರಥಮ ಬಿವಿಎ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
|

ಪ್ರಥಮ ಬಿವಿಎ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.28.ಏಪ್ರಿಲ್.25:- ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ.) ತರಗತಿಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ …

ಉಚಿತ AI ತರಬೇತಿಗೆ ಅರ್ಜಿ ಆಹ್ವಾನ
|

ಉಚಿತ AI ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರ ವತಿಯಿಂದ ಉಚಿತ್  IISC, IIT ªÀÄvÀÄÛ NIT  ಸಂಸ್ಥೆಗಳ ಮೂಲಕ Artificial Intelligence and Machine Learning  ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್ ಪದವಿಧರರಿಗೆ ಶಿಷ್ಯವೇತನ/ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ: 25-04-2025 ರೊಳಗಾಗಿ ಬೀದರ್ ಜಿಲ್ಲಾ/ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಛೇರಿ ವೇಳೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು…

ಏಳನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
|

ಏಳನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಬೀದರ.28.ಏಪ್ರಿಲ್.25:- ಜಾನುವಾರು ಕಂದಮ್ಮ ದೇಶದ ಸಂಪತ್ತು, ಅದನ್ನು ಉಳಿಸಿ ಬೆಳೆಸಲು ಸಾಂಕ್ರಾಮಿಕ ರೋಗಗಳಲ್ಲಿ ಒಂದಾದ ಕಾಲುಬಾಯಿಜ್ವರ ರೋಗವನ್ನು ತಡೆಗಟ್ಟಲು ತಪ್ಪದೇ ಲಸಿಕೆ ಹಾಕಿಸಬೇಕು ಹಾಗೂ ಜೊತೆಗೆ ಎಲ್‌ಎಸ್‌ಎಲ್ ಲಸಿಕೆಯನ್ನು ಕೊಡಲಾಗುತ್ತಿದ್ದು ಈ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ಬೀದರ ನಗರಸಭೆ ನಾಮನಿರ್ದೇಶಿತ ಸದಸ್ಯರಾದ ಗಣೇಶ ಭೋಸ್ಲೆ ತಿಳಿಸಿದರು. ಅವರು ಶನಿವಾರದಂದು ಶ್ರೀ ಲಕ್ಷಿö್ಮo  ಸತ್ಯನಾರಾಯಣ ಗೋಶಾಲೆ ಬೀದರದಲ್ಲಿ ಹಮ್ಮಿಕೊಂಡಿದ್ದ 7ನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 7ನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮವು ಏ.26 ರಿಂದ…

ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ
|

ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

ಬೀದರ.28.ಏಪ್ರಿಲ್.25:- ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ ದಿನಾಂಕ: 01-01-2024 ರಿಂದ 31-12-2024 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಕುರಿತು ಅತ್ಯುತ್ತಮ ಜಾನಪದ ಕೃತಿಗಳಿಗೆ ಪುಸ್ತಕ ಬಹುಮಾನ ಯೋಜನೆಯಡಿಯಲ್ಲಿ ಆಯ್ಕೆ ಮಾಡಲು ಜಾನಪದ ಕೃತಿಗಳನ್ನು ಆಹ್ವಾನಿಸಲಾಗಿದೆ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರಣ ಆಸಕ್ತ ಲೇಖಕರು/…

ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕಾಯಕ ಮಾಸಾಚರಣೆಯ ಅರಿವು ಮೂಡಿಸಿ-ಡಾ.ಗಿರೀಶ ಬದೋಲೆ
|

ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕಾಯಕ ಮಾಸಾಚರಣೆಯ ಅರಿವು ಮೂಡಿಸಿ-ಡಾ.ಗಿರೀಶ ಬದೋಲೆ

ಬೀದರ.28.ಏಪ್ರಿಲ್.25:- ಮಹಾತ್ಮಾ ಗಾಂಧಿ ನರೆಗಾ ಯೋಜನೆಯಡಿ ಹೆಚ್ಚು ಕೂಲಿ ಕಾರರಿಗೆ ಕೆಲಸ ನೀಡುವ ಉದ್ದೇಶದಿಂದ ಏಪ್ರಿಲ್. 30 ರಿಂದ ಮೇ. 31 ರವರೆಗೆ “ಕಾಯಕ ಮಾಸಾಚಾರಣೆ ಹಮ್ಮಿಕೊಳ್ಳಲಾಗಿರುವುದರಿಂದ ಏಪ್ರಿಲ್.28 ಮತ್ತು 29 ರಂದು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ವಿಶೇಷ ಅಭಿಯಾನ ಕೈಗೊಂಡು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕಾಯಕ ಮಾಸಾಚರಣೆಯ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ಕೆಲಸಕ್ಕೆ ಬರುವಂತೆ ಪ್ರೇರೆಪಿಸಬೇಕೆಂದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ತಿಳಿಸಿದ್ದಾರೆ. ಏಪ್ರೀಲ 30…

ಈ ವರ್ಷ ಕನ್ನಡ, ಉರ್ದು ಮಾಧ್ಯಮದ ೨೫೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಶಾಹೀನ್‌ನಿಂದ ಕ.ಕ. ವಿದ್ಯಾರ್ಥಿ ವೇತನ ಯೋಜನೆ
|

ಈ ವರ್ಷ ಕನ್ನಡ, ಉರ್ದು ಮಾಧ್ಯಮದ ೨೫೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
ಶಾಹೀನ್‌ನಿಂದ ಕ.ಕ. ವಿದ್ಯಾರ್ಥಿ ವೇತನ ಯೋಜನೆ

ಬೀದರ್.28.ಎಪ್ರಿಲ.25:- ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಶಾಹೀನ್ ಕಲ್ಯಾಣ ಕರ್ನಾಟಕ ವಿದ್ಯಾರ್ಥಿ ವೇತನ’ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ. ಈ ವರ್ಷ ಸಮೂಹದ ಕಲ್ಯಾಣ ಕರ್ನಾಟಕ ಭಾಗದ ಒಂಬತ್ತು ಪದವಿಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಒಟ್ಟು ೨೫೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.ಬೀದರ್‌ನ ಮುಖ್ಯ ಶಾಖೆಯಲ್ಲಿ…

ಪ್ರವಾಸೋದ್ಯಮ ಮತ್ತು ಸಂರಕ್ಷಣ್ಮಾತಕ ಕಾಮಗಾರಿ ಸ್ಥಳ ವೀಕ್ಷಣೆ:ಸಚಿವ ಈಶ್ವರ್ ಬಿ.ಖಂಡ್ರೆ
|

ಪ್ರವಾಸೋದ್ಯಮ ಮತ್ತು ಸಂರಕ್ಷಣ್ಮಾತಕ ಕಾಮಗಾರಿ ಸ್ಥಳ ವೀಕ್ಷಣೆ:ಸಚಿವ ಈಶ್ವರ್ ಬಿ.ಖಂಡ್ರೆ

ಬೀದರ .28.ಏಪ್ರಿಲ್.27:- ಇಂದು ಮಧ್ಯಾಹ್ನ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ. ಖಂಡ್ರೆ ಅವರು ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆ.ಕೆ.ಆರ್.ಡಿ.ಬಿ.) ಯೋಜನೆಯಡಿ ಪರಿಸರ ಪ್ರವಾಸೋದ್ಯಮ ಮತ್ತು ಸಂರಕ್ಷಣ್ಮಾತಕ ಕಾಮಗಾರಿಗಳ ಸ್ಥಳ ವೀಕ್ಷಣೆ ಮಾಡಿದರು. ಸ್ಥಳ ವೀಕ್ಷಣೆ ಮಾಡಿದ ನಂತರ ಮಾತನಾಡಿದ ಸಚಿವರು ಹೊನ್ನಿಕೆರಿ ಪರಿಸರ ಪ್ರವಾಸೋದ್ಯಮ ಯೋಜನೆಯು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಥಮವಾಗಿದೆ. ಈ ಪ್ರವಾಸೋದ್ಯಮ ಸಾರ್ವಜನಿಕರಿಗೆ…

ವಕ್ಫ್ ತಿದ್ದುಪಡಿ ಅಧಿನಿಯಮ 2025ರ ವಿರುದ್ಧ ಜ್ಯಾತ್ಯತೀತ ಸಂಘಟನೆಗಳ ವತಿಯಿಂದ ಪ್ರತಿಭಟನೆ
|

ವಕ್ಫ್ ತಿದ್ದುಪಡಿ ಅಧಿನಿಯಮ 2025ರ ವಿರುದ್ಧ ಜ್ಯಾತ್ಯತೀತ ಸಂಘಟನೆಗಳ ವತಿಯಿಂದ ಪ್ರತಿಭಟನೆ

ಬೀದರ್.28.ಏಪ್ರಿಲ್.25:- ವಕ್ಫ್ ತಿದ್ದುಪಡಿ ಅಧಿನಿಯಮ 2025ರ ವಿರುದ್ಧ ನಾಳೆ ದಿನಾಂಕ ಏಪ್ರಿಲ್ 28 ರಂದು  ನಗರದಲ್ಲಿ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಮತ್ತು ಜ್ಯಾತ್ಯತೀತ ಸಂಘಟನೆಗಳ ವತಿಯಿಂದ ಪ್ರತಿಭಟನೆ ೨೭ ಅಪ್ರೆಲ್ ವಕ್ಫ್ ತಿದ್ದುಪಡಿ ಅಧಿನಿಯಮ 2025ರ ವಿರುದ್ಧ ಬೀದರ್ ಜಿಲ್ಲೆಯ ದಲಿತ ಮತ್ತು ಮುಸ್ಲಿಮ್ ಸಂಘಟನೆಗಳು ನಾಳೆ ಬೃಹತ್ ರ‍್ಯಾಲಿ ಮತ್ತು ಪ್ರತಿಭಟನೆಯನ್ನು ಆಯೋಜಿಸಿದೆ. ಪ್ರತಿಭಟನಾ  ರ‍್ಯಾಲಿ ಬೆಳಗ್ಗೆ 10 ಗಂಟೆಗೆ ಬೀದರ್ ಐತಿಹಾಸಿಕ ಜಾಮಾ ಮಸೀದಿಯಿಂದ ಪ್ರಾರಂಭವಾಗಿ ಮಹ್ಮೂದ್ ಗವಾನ್ ಚೌಕದ ಮೂಲಕ ಅಂಬೇಡ್ಕರ್…