ನರೇಗಾ ಯೋಜನೆಯಡಿ ಮೇ ತಿಂಗಳಲ್ಲಿ 1ಲಕ್ಷ ಕೂಲಿಕಾರರಿಗೆ ಕೆಲಸ ನೀಡಲಾಗುವುದು-ಸಿಇಓ ಡಾ. ಗಿರೀಶ ಬದೋಲೆ
ಬೀದರ.28.ಏಪ್ರಿಲ್.25:- ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಏಪ್ರಿಲ್, ಮೇ ಮತ್ತು ಜೂನ್ ತಿಂಗಳು ಕೂಲಿಕಾರರು ಕೆಲಸ ನಿರೀಕ್ಷಿಸುವ ತಿಂಗಳುಗಳಾಗಿದ್ದು, ಮೇ ತಿಂಗಳಿನಲ್ಲಿ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಒಂದು ಲಕ್ಷ ಜನ ಕೂಲಿಕಾರರಿಗೆ ಕೆಲಸ ನೀಡಲಾಗುವುದು ಎಂದು ಬೀದರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ಅವರು ಸೂಚಿಸಿದರು.ಅವರು ಶುಕ್ರವಾರದಂದು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರುಗಳು, ಟಿಸಿಗಳು, ಟಿಐಎಂಎಸ್, ಟಿಐಇಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ಜರುಗಿಸಿ ಮಾತನಾಡಿದರು….