ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ
|

ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ

ಹೊಸ ದೆಹಲಿ.10.ಮೇ.25:- ಭಾರತ ಮತ್ತು ಪಾಕಿಸ್ತಾನ ಇಂದು ಕದನ ವಿರಾಮ ಘೋಷಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ನವದೆಹಲಿಯಲ್ಲಿ ಈ ಘೋಷಣೆ ಮಾಡಿದ್ದಾರೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು ಮಧ್ಯಾಹ್ನ ಕದನ ವಿರಾಮಕ್ಕೆ ಕರೆ ನೀಡಿದರು, ನಂತರ ಚರ್ಚೆಗಳು ನಡೆದವು ಮತ್ತು ತಿಳುವಳಿಕೆಯನ್ನು ತಲುಪಲಾಯಿತು ಎಂದು ಅವರು ಹೇಳಿದರು. ಮಾತುಕತೆಯ ಸಮಯದಲ್ಲಿ, ಎರಡೂ ಕಡೆಯವರು ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ…

ದೆಹಲಿ ವಿಮಾನ ನಿಲ್ದಾಣದಲ್ಲಿ 60 ವಿಮಾನಗಳ ರದ್ದ
|

ದೆಹಲಿ ವಿಮಾನ ನಿಲ್ದಾಣದಲ್ಲಿ 60 ವಿಮಾನಗಳ ರದ್ದ

ಹೊಸ ದೆಹಲಿ.10.ಮೇ.25:- ದೆಹಲಿ ವಿಮಾನ ನಿಲ್ದಾಣದಲ್ಲಿ ಇಂದು ಒಟ್ಟು 60 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದರಲ್ಲಿ 30 ದೇಶೀಯ ಆಗಮನ ಮತ್ತು 30 ದೇಶೀಯ ನಿರ್ಗಮನ ಸೇರಿವೆ. ನವೀಕರಿಸಿದ ವಿಮಾನ ಮಾಹಿತಿ ಮತ್ತು ಪರ್ಯಾಯ ಪ್ರಯಾಣ ವ್ಯವಸ್ಥೆಗಳಿಗಾಗಿ ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸಲು ಸೂಚಿಸಲಾಗಿದೆ.

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ
|

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

ಹೊಸ ದೆಹಲಿ.10.ಮೇ.25:- ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಸೇನಾ ಸಂಘರ್ಷ ತೀವ್ರಗೊಂಡಿದೆ. ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಶನಿವಾರ ತೀವ್ರ ಗುಂಡಿನ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಜೌರಿಯ ಅವರು  ಮೃತಪಟ್ಟಿದ್ದು ಹಾಗೂ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಜೌರಿ ನಗರದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಪಾಕ್‌ನ ಶೆಲ್ ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಮತ್ತಿಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ…

ಪಾಕ್ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ
|

ಪಾಕ್ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

ಹೊಸ ದೆಹಲಿ.10.ಮೇ.25:- ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಈ ದಾಳಿಯಲ್ಲಿ ಆಂಧ್ರಪ್ರದೇಶದ ಸೈನಿಕ ಮುರಳಿ ನಾಯಕ್ ಈಗಾಗಲೇ ಹುತಾತ್ಮರಾಗಿದ್ದಾರೆ.ಜಮ್ಮುವಿನಲ್ಲಿ ಪಾಕಿಸ್ತಾನದ ಗುಂಡಿನ ದಾಳಿಗೆ ಯೋಧ ಸಚಿನ್ ಯಾದವರಾವ್ ವನಂಜೆ (30) ಹುತಾತ್ಮರಾದರು. ಸಚಿನ್ ಯಾದವರಾವ್ ವನಂಜೆಯವರ ಊರು ಮಹಾರಾಷ್ಟ್ರ-ತೆಲಂಗಾಣ ಗಡಿಯಲ್ಲಿರುವ ನಾಂದೇಡ್ ಜಿಲ್ಲೆಯ ತಮ್ಲೂರು. ಸಚಿನ್ ಯಾದವ್ ರಾವ್ ವನಂಜೆ ಅವರ ಪಾರ್ಥಿವ ಶರೀರವನ್ನು ಇಂದು ಅವರ ಹುಟ್ಟೂರಿಗೆ ತರುವ ಸಾಧ್ಯತೆಯಿದೆ. ಆತನೊಂದಿಗೆ ಕೆಲವು ಜನ ಸಹ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 25…

ಹನಿಮೂನ್‌ನ ಸಂತೋಷದ ಕ್ಷಣಗಳ ನಡುವೆಯೂ ತನ್ನ ಕರ್ತವ್ಯಕ್ಕೆ ಆದ್ಯತೆ. ಸಿದ್ದಾಪುರ ಯೋಧ,
|

ಹನಿಮೂನ್‌ನ ಸಂತೋಷದ ಕ್ಷಣಗಳ ನಡುವೆಯೂ ತನ್ನ ಕರ್ತವ್ಯಕ್ಕೆ ಆದ್ಯತೆ. ಸಿದ್ದಾಪುರ ಯೋಧ,

ಹೊಸ ದೆಹಲಿ. 10.ಮೇ.25:- ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಈ ಸಂದರ್ಭದಲ್ಲಿ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಯೋಧ ಜಯಂತ್ ತಮ್ಮ ಹನಿಮೂನ್‌ನನ್ನು ರದ್ದುಗೊಳಿಸಿ ದೇಶ ಸೇವೆಗಾಗಿ ಛತ್ತೀಸಗಢದ ತಮ್ಮ ಬೆಟಾಲಿಯನ್‌ಗೆ ತೆರಳಿದ್ದಾರೆ.ಹನಿಮೂನ್‌ನ ಸಂತೋಷದ ಕ್ಷಣಗಳ ನಡುವೆಯೂ ಜಯಂತ್ ತನ್ನ ಕರ್ತವ್ಯಕ್ಕೆ ಮೊದಲ ಆದ್ಯತೆ ನೀಡಿದರು. ‘ದೇಶಕ್ಕಿಂತ ದೊಡ್ಡದು ಯಾವುದೂ ಇಲ್ಲ. ಸಿದ್ದಾಪುರ ಯೋಧ, ಮೇ. 1, 2025 ರಂದು ಮದುವೆಯಾದ ಜಯಂತ್ ಮತ್ತು ಆತನ ಪತ್ನಿ ಊಟಿಯಲ್ಲಿ ಹನಿಮೂನ್ ಆಚರಿಸುತ್ತಿದ್ದಾಗ, ಕೇಂದ್ರೀಯ ಮೀಸಲು…

ಅತಿಥಿ ಶಿಕ್ಷಕರು, ಉಪನ್ಯಾಸಕರು ( 59 ) ಹುದ್ದೆಗಳಿಗೆ ಅರ್ಜಿ ಆಹ್ವಾನ
|

ಅತಿಥಿ ಶಿಕ್ಷಕರು, ಉಪನ್ಯಾಸಕರು ( 59 ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.10.ಮೇ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಾದರಿ ಶಾಲೆ, ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಒಟ್ಟು  59  ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. 1.ಕನ್ನಡ ಉಪನ್ಯಾಸಕರ ಹುದ್ದೆ-3, 2.ಕನ್ನಡ ಅತಿಥಿ ಶಿಕ್ಷಕರ ಹುದ್ದೆ-7, 3.ಇಂಗ್ಲೀಷ್ ಉಪನ್ಯಾಸಕರ ಹುದ್ದೆ-4 4.ಇಂಗ್ಲೀಷ್ ಶಿಕ್ಷಕರ ಹುದ್ದೆ-3, 5.ಉರ್ದು ಉಪನ್ಯಾಸಕರ ಹುದ್ದೆ-3, 6.ಗಣಿತ ಶಿಕ್ಷಕರ ಹುದ್ದೆ-8, 7.ಗಣಿತ ಉಪನ್ಯಾಸಕರ ಹುದ್ದೆ-4, 8.ಸಾಮಾನ್ಯ ವಿಜ್ಞಾನ ಶಿಕ್ಷಕರು-3, 9.ಭೌತಶಾಸ್ತ್ರ ಉಪನ್ಯಾಸಕರ ಹುದ್ದೆ-3, 10.ಸಮಾಜ ವಿಜ್ಞಾನ ಶಿಕ್ಷಕರು-6, 11.ರಸಾಯನಶಾಸ್ತ್ರ ಉಪನ್ಯಾಸಕರ ಹುದ್ದೆ-3, 12.ಉರ್ದು ಶಿಕ್ಷಕರು-2, 13.ಜೀವಶಾಸ್ತ್ರ…

ಆಯ್ಕೆಯಾದ ಅತಿಥಿ ಉಪನ್ಯಾಸಕರಿಗೆ  ವರದಿ ಮಾಡಿಕೊಳ್ಳಲು ಅವಕಾಶ: ಡಿಸಿಇ
|

ಆಯ್ಕೆಯಾದ ಅತಿಥಿ ಉಪನ್ಯಾಸಕರಿಗೆ  ವರದಿ ಮಾಡಿಕೊಳ್ಳಲು ಅವಕಾಶ: ಡಿಸಿಇ

ಬೆಂಗಳೂರು.10.ಮೇ.25:- ಅಭ್ಯರ್ಥಿಗಳು ಆನ್‌ಲೈನ್‌ ಕೌನ್ಸಿಲಿಂಗ್‌ನಲ್ಲಿ ಆಯ್ಕೆ ಮಾಡಿಕೊಂಡ ಕಾಲೇಜುಗ ಕೌನ್ಸಿಲಿಂಗ್ ಮೂಲಕ ಆಯ್ಕೆಯಾದ ಅಭ್ಯರ್ಥಿಗಳ ವಿಷಯವಾರು ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಆಯ್ಕೆಯಾದ ಅತಿಥಿ ಉಪನ್ಯಾಸಕರಿಗೆ ಆಯ್ಕೆಪಟ್ಟಿಯನ್ನು ಪ್ರಕಟಿಸಿದ ದಿನಾಂಕದಿಂದ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಲು 03 ಕೆಲಸದ ದಿನಗಳವರೆಗೆ ಮಾತ್ರ ಅವಕಾಶವಿರುತ್ತದೆ. ಪ್ರಾಂಶುಪಾಲರು, ಆಯ್ಕೆಯಾದ ಅತಿಥಿ ಉಪನ್ಯಾಸಕರ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ ಅತಿಥಿ ಉಪನ್ಯಾಸಕರನ್ನು ಕರ್ತವ್ಯಕ್ಕೆ ಹಾಜರುಪಡಿಸಿಕೊಳ್ಳುವುದು ಹಾಗೂ ಕರ್ತವ್ಯಕ್ಕೆ ಹಾಜರಾದ ಅತಿಥಿ ಉಪನ್ಯಾಸಕರ ಮಾಹಿತಿಯನ್ನು ಕಡ್ಡಾಯವಾಗಿ E.M.IS.ನಲ್ಲಿ upload ಮಾಡುವುದು. 1. ಕಾಲೇಜುಗಳು ಅಪ್‌ಲೋಡ್ ಮಾಡಿದ ಕೆಲಸದ ಹೊರೆಯ…

ಬಾರಾಮುಲ್ಲಾದಿಂದ ಭುಜ್ ವರೆಗೆ ಪಾಕಿಸ್ತಾನದ ಡ್ರೋನ್ ದಾಳಿ
|

ಬಾರಾಮುಲ್ಲಾದಿಂದ ಭುಜ್ ವರೆಗೆ ಪಾಕಿಸ್ತಾನದ ಡ್ರೋನ್ ದಾಳಿ

ಹೊಸ ದೆಹಲಿ.09.ಮೇ.25:- ಬಾರಾಮುಲ್ಲಾದಿಂದ ಭುಜ್ ವರೆಗೆ ಪಾಕಿಸ್ತಾನದ ಡ್ರೋನ್ ದಾಳಿ, 26 ಸ್ಥಳಗಳ ಮೇಲೆ ದಾಳಿ, ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ದಾಳಿ ಪಾಕಿಸ್ತಾನಿ ಸೇನೆ ಶುಕ್ರವಾರ ಆವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲೂಧಿಯಾನ, ಆದಂಪುರ, ಬಟಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲೈ ಮತ್ತು ಭುಜ್‌ಗಳನ್ನು ಡ್ರೋನ್ ಮತ್ತು ಕ್ಷಿಪಣಿಗಳನ್ನು ಬಳಸಿ ಗುರಿಯಾಗಿಸಲು ಪ್ರಯತ್ನಿಸಿತು. ಆದರೆ, ಭಾರತೀಯ ಸೇನೆ ಪಾಕಿಸ್ತಾನದ ಎಲ್ಲಾ ದಾಳಿಗಳನ್ನು ವಿಫಲಗೊಳಿಸಿತು. ಪಾಕಿಸ್ತಾನಕ್ಕೆ ಸೇನೆ ತಕ್ಕ ಉತ್ತರ…

ಅಂಗವಿಕಲರಿಗೆ ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿ ರಾಜ್ಯ ಸಚಿವ ಸಂಪುಟ ಅನುಮೋದನೆ.
|

ಅಂಗವಿಕಲರಿಗೆ ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿ ರಾಜ್ಯ ಸಚಿವ ಸಂಪುಟ ಅನುಮೋದನೆ.

ಬೆಂಗಳೂರು.10.ಮೇ.25:- ರಾಜ್ಯದ ಸರ್ಕಾರ್ ಅಂಗವಿಕಲರಿಗೆ ಗ್ರೂಪ್-ಬಿ, ಎ ಹುದ್ದೆಗಳ ಮುಂಬಡ್ತಿಯಲ್ಲಿ ಶೇ.4 ರಷ್ಟು ಮೀಸಲಾತಿಗೆ ಕಾನೂನಿನಲ್ಲಿ ಅವಕಾಶ ನೀಡಿದೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರಲ್ಲಿ ಪರಿಭಾಷಿಸಲಾಗಿರುವ ಎದ್ದುಕಾಣುವ ಅಂಗವೈಕಲ್ಯವುಳ್ಳ ಅಧಿಕಾರಿಗಳಿಗೆ ಗುಂಪು-ಬಿ ಮತ್ತು ಗುಂಪು-ಎ (ಕಿರಿಯ ಶ್ರೇಣಿ) ಹುದ್ದೆಗಳಲ್ಲಿ ಮುಂಬಡ್ತಿಯಲ್ಲಿ ಶೇ.4 ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ನಿರ್ಣಯಿಸಿದೆ…

ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಮೇ 15ರಿಂದ ಸಂಪುಟ್ ನಿರ್ಧರ್
|

ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಮೇ 15ರಿಂದ ಸಂಪುಟ್ ನಿರ್ಧರ್

ರಾಜ್ಯ ಸರ್ಕಾರ ರಾಜ್ಯದಂತ್ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಮೇ 15 ರಿಂದ ಒಂದು ತಿಂಗಳ ಕಾಲ ಕೈಗೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಒಪ್ಪಿಗೆ ನೀಡಲಾಗಿದೆ. ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು, ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ವರ್ಗಾವಣೆ ಪ್ರಕ್ರಿಯೆ ನಡೆಸಲು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ….