ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ನಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
|

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ನಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ಜಿಲ್ಲಾ ಮ್ಯಾನೇಜರ್, ತಾಲೂಕು ಪ್ರೊಗ್ರಾಂ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಸೇರಿದಂತೆ ನಾನಾ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 30 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ…

ರಾಜ್ಯದಲ್ಲಿ ದಲಿತ ನಾಯಕರನ್ನು ಗುರಿಯಾಗಿಸಿ ಅವರನ್ನು ಅವಮಾನಿಸುತ್ತಿರುವ ಬಿಜೆಪಿಯ ಷಡ್ಯಂತ್ರವನ್ನು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಖಂಡಿಸುತ್ತದೆ.
|

ರಾಜ್ಯದಲ್ಲಿ ದಲಿತ ನಾಯಕರನ್ನು ಗುರಿಯಾಗಿಸಿ ಅವರನ್ನು ಅವಮಾನಿಸುತ್ತಿರುವ ಬಿಜೆಪಿಯ ಷಡ್ಯಂತ್ರವನ್ನು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಖಂಡಿಸುತ್ತದೆ.

ಬೀದರ.28.ಮೇ.25:- ರಾಜ್ಯದಲ್ಲಿ ದಲಿತ ನಾಯಕರನ್ನು ಗುರಿಯಾಗಿಸಿ ಅವರನ್ನು ಅವಮಾನಿಸುತ್ತಿರುವ ಬಿಜೆಪಿಯ ಷಡ್ಯಂತ್ರವನ್ನು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಖಂಡಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎರಡು ವರ್ಷಗಳು ಕಳೆದಿವೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಂಡಗಿನಿಂದ ಹತಾಶೆ ಭಾವನೆಗೆ ಒಳಪಟ್ಟಿದೆ, ರಾಜ್ಯದಲ್ಲಿ ದಲಿತ ಸಮುದಾಯದ ನಾಯಕರನ್ನು ಗುರಿಯಾಗಿಸಿ ಅವರವರ ಮಧ್ಯ ಬೆಂಕಿಯನ್ನು ಹಚ್ಚಿ ನೀಡುತ್ತಾ ಕುಳಿತಿದೆ, ಇಂದಿನ ರಾಜಕೀಯ ವಿದ್ಯುನ್ಮಾನದಲ್ಲಿ ದಲಿತ ನಾಯಕರ ಏಳಿಗೆಯನ್ನು ಸಹಿಸದ ಬಿಜೆಪಿ ಮತ್ತದರ ನಾಯಕರು, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ, ರಾಜ್ಯದಲ್ಲಿ…

ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ಲಿನಿಕಲ್ ಸೌಲಭ್ಯ ಸರ್ಕಾರದಿಂದ ಮಾರ್ಗಸೂಚಿ ಆದೇಶ
|

ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ಲಿನಿಕಲ್ ಸೌಲಭ್ಯ ಸರ್ಕಾರದಿಂದ ಮಾರ್ಗಸೂಚಿ ಆದೇಶ

ಬೆಂಗಳೂರು.28.ಮೇ.25:- ರಾಜ್ಯ ಸರ್ಕಾರ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಕ್ಲಿನಿಕಲ್ ಸೌಲಭ್ಯ’ ನೀಡುವ ಕುರಿತು ಸರ್ಕಾರ ಮಾರ್ಗಸೂಚಿ ಆದೇಶ ಬಿಡುಗಡೆ ಮಾಡಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಸಾಮಾನ್ಯ ಷರತ್ತುಗಳೊಂದಿಗೆ ಈ ಕೆಳಕಂಡ ಮಾರ್ಗಸೂಚಿಯನ್ವಯ ಪರಿಶೀಲಿಸಿ ಖಾಸಗಿ ನರ್ಸಿಂಗ್ ಶಾಲೆ ಹಾಗೂ ನರ್ಸಿಂಗ್ ಕಾಲೇಜು ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ 6 ತಿಂಗಳ ಅವಧಿಗೆ ಕ್ಲಿನಿಕಲ್ ಸೌಲಭ್ಯಗಳನ್ನು ಒದಗಿಸಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಆದೇಶಿಸಲಾಗಿದೆ. ಶೈಕ್ಷಣಿಕ ಸೌಲಭ್ಯಗಳನ್ನು ಹೊಂದಿರುವ ಕಾಲೇಜುಗಳಿಗೆ…

RCB ಕೆಡವಲು ಕಳ್ಳ ದಾರಿ ಹಿಡಿದು ಹೊಡೆಸಿಕೊಂಡ ದಿಗ್ವೇಶ್ ರಾಠಿ.
|

RCB ಕೆಡವಲು ಕಳ್ಳ ದಾರಿ ಹಿಡಿದು ಹೊಡೆಸಿಕೊಂಡ ದಿಗ್ವೇಶ್ ರಾಠಿ.

ಲಕ್ನೋ.28.ಮೇ.25:- ಐಪಿಎಲ್ ನಲ್ಲಿ ದಿಗ್ವೇಶ್ ವರ್ತನೆಗೆ ಲಕ್ನೋ ನಾಯಕ ರಿಷಭ್ ಪಂತ್ ತಲೆ ತಗ್ಗಿಸುವಂತಾಗಿದೆ. ಐಪಿಎಲ್ 2025 ರ ನಿನ್ನೆಯ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಬೌಲರ್ ದಿಗ್ವೇಶ್ ರಾಠಿ ಕಳ್ಳ ದಾರಿ ಹಿಡಿಯಲು ಹೋಗಿ ತಾವೇ ಹೊಡೆಸಿಕೊಂಡಿದ್ದಾರೆ. ಕೊನೆಯ ಎರಡು ಓವರ್ ರೋಚಕವಾಗಿತ್ತು. ಆರ್ ಸಿಬಿ ಗೆಲುವಿನ ರನ್ ಗೂ ಬಾಲ್ ಗೂ 10 ಹೆಜ್ಜೆಯ ದೂರವಿತ್ತು. 17 ನೇ ಓವರ್ ಬಾಲ್ ಮಾಡಲು ಬಂದಿದ್ದು ದಿಗ್ವೇಶ್ ರಾಠಿ….

ISRO ಇಸ್ರೋದಿಂದ 320 ಹುದ್ದೆಗಳಿಗೆ ಅರ್ಜಿ ಆಹ್ವಾನ!
|

ISRO ಇಸ್ರೋದಿಂದ 320 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಕೇಂದ್ರೀಕೃತ ನೇಮಕಾತಿ ಮಂಡಳಿ (ಇಸ್ರೋ-ಐಸಿಆರ್‌ಬಿ) ವಿಜ್ಞಾನಿ / ಎಂಜಿನಿಯರ್ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಸ್ರೋದ ಅಧಿಕೃತ ವೆಬ್‌ಸೈಟ್ isro.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಮೂಲಕ ಸಂಸ್ಥೆಯಲ್ಲಿ 320 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು 2025ರ ಜೂನ್ 16 ಕೊನೆಯ ದಿನ. ಅರ್ಹತಾ ಮಾನದಂಡ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳು ಇಲ್ಲಿವೆ. ಖಾಲಿ ಹುದ್ದೆಗಳ ವಿವರ…

ಅತಿಥಿ ಶಿಕ್ಷಕರ/ಉಪನ್ಯಾಸಕರ ಆಯ್ಕೆ CET ದಿನಾಂಕ ನಿಗದಿಪಡಿಸಲಾಗಿದೆ.
|

ಅತಿಥಿ ಶಿಕ್ಷಕರ/ಉಪನ್ಯಾಸಕರ ಆಯ್ಕೆ CET ದಿನಾಂಕ ನಿಗದಿಪಡಿಸಲಾಗಿದೆ.

ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜು ಮತ್ತು ಮೌಲನಾ ಆಜಾದ್ ಮಾದರಿ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಜೂ.01 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಅಲ್ಲಿಪುರದ ಹೊಸಪೇಟೆ ರಸ್ತೆಯ ಬಿಐಟಿಎಂ ಕಾಲೇಜು ಹತ್ತಿರದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿಪಡಿಸಲಾಗಿದೆ. ಅತಿಥಿ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆಗೆ…

3 ಸಾವಿರ ಲೈನ್ ಮೆನ್ ಗಳ ನೇಮಕಾತಿ ಆದೇಶ.ಕೆ.ಜೆ. ಜಾರ್ಜ್
|

3 ಸಾವಿರ ಲೈನ್ ಮೆನ್ ಗಳ ನೇಮಕಾತಿ ಆದೇಶ.ಕೆ.ಜೆ. ಜಾರ್ಜ್

ಬೆಂಗಳೂರು .28.ಮೇ.25:- ರಾಜ್ಯದಲ್ಲಿ 3000 ಲೈನ್ ಮೆನ್ ಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ರಾಮನಗರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಲೈನ್ ಮೆನ್ ಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ದೈಹಿಕ ತರಬೇತಿ ನಡೆಯುತ್ತಿದೆ. ಜೂನ್ ಅಂತ್ಯದೊಳಗೆ ಎಲ್ಲರಿಗೂ ಸ್ಥಳ ನಿಯುಕ್ತಿ ಮಾಡಿ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ. ಸ್ವಾಧೀನಾನುಭವ ಪತ್ರ ಇಲ್ಲದ…

ಜುಲೈನಿಂದ ಅನರ್ಹರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ‘ಗ್ಯಾರಂಟಿ’ ಬಂದ್
|

ಜುಲೈನಿಂದ ಅನರ್ಹರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ‘ಗ್ಯಾರಂಟಿ’ ಬಂದ್

ಕೊಪ್ಪಳ.28.ಮೇ.25:- ರಾಜ್ಯದಲ್ಲಿ ಗೃಹ ಲಕ್ಷಮಿ ಮತ್ತು ವಿವಿಧ ಭಾಗ್ಯಗಳು ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನೀನೆ ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕುಕನೂರು, ಯಲಬುರ್ಗಾ ತಾಲೂಕಿನ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳಲ್ಲಿ ಅನರ್ಹ ಅನುಭವಿಗಳಿಗೂ ಯೋಜನೆಯ ಲಾಭ ಹೋಗುತ್ತಿದೆ. ಇದನ್ನು ತನಿಖೆ ನಡೆಸಿ ಕಡಿವಾಣ ಹಾಕುವ ಮೂಲಕ ಜುಲೈನಿಂದ ಲಾಭ ಸಿಗದಂತೆ ನೋಡಿಕೊಳ್ಳಲಾಗುವುದು…

ಪ್ರೌಢಶಾಲೆಯಲ್ಲಿ 11,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ
|

ಪ್ರೌಢಶಾಲೆಯಲ್ಲಿ 11,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.28.ಮೇ.25:- 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖ (1) ರನ್ವಯ 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ…

ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರಿಗೆ ಆರ್ಥಿಕ ಭದ್ರತೆ,ಸಚಿವ ಸಂತೋಷ್‌ ಲಾಡ್‌
|

ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರಿಗೆ ಆರ್ಥಿಕ ಭದ್ರತೆ,ಸಚಿವ ಸಂತೋಷ್‌ ಲಾಡ್‌

ಬೆಂಗಳೂರು.28.ಮೇ.25:- ರಾಜ್ಯದ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರ ಸಬಲೀಕರಣಕ್ಕಾಗಿ ಕಳೆದೆರಡು ವರ್ಷಗಳಲ್ಲಿ ಕಾರ್ಮಿಕ ಇಲಾಖೆಯು ಹಲವು ಹೊಸ ಕ್ರಮಗಳ ಜತೆಗೆ ಕಾನೂನುಗಳನ್ನು ರೂಪಿಸಿದ್ದು, ಪ್ರಮುಖವಾಗಿ ಗಿಗ್‌ ಕಾರ್ಮಿಕರಿಗೆ, ಮೋಟಾರು ಸಾರಿಗೆ ಕಾರ್ಮಿಕರಿಗೆ ಹಾಗೂ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರಿಗಾಗಿ ಹೊಸ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ತಮ್ಮ ಕಾರ್ಮಿಕ ಇಲಾಖೆ ಕೈಗೊಂಡಿರುವ ಹೊಸ ಕ್ರಮಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ…