ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ
ಮಾಡುವುದೇ ಮುಖ್ಯ ಗುರಿ-ಸಚಿವ ಈಶ್ವರ ಖಂಡ್ರೆ.
ಬೀದರ.04.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವರು ಹೇಳಿದರು. ಅವರು ರವಿವಾರ ಭಾಲ್ಕಿಯ ಸಂಸದರ ಕಛೇರಿ ಎದುರುಗಡೆ ನಡೆದ ಭಾಲ್ಕಿ ತಾಲೂಕಿನಲ್ಲಿ ವಿವಿಧ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. 2013-18ರಲ್ಲಿ ತಾವು ಸಚಿವರಾಗಿದ್ದಾಗ ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ 25,000 ಮನೆಗಳ ಹಕ್ಕು ಪತ್ರ…