ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತಮಾಡುವುದೇ ಮುಖ್ಯ ಗುರಿ-ಸಚಿವ ಈಶ್ವರ ಖಂಡ್ರೆ.
|

ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ
ಮಾಡುವುದೇ ಮುಖ್ಯ ಗುರಿ-ಸಚಿವ ಈಶ್ವರ ಖಂಡ್ರೆ.

ಬೀದರ.04.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವರು ಹೇಳಿದರು. ಅವರು ರವಿವಾರ ಭಾಲ್ಕಿಯ ಸಂಸದರ ಕಛೇರಿ ಎದುರುಗಡೆ ನಡೆದ ಭಾಲ್ಕಿ ತಾಲೂಕಿನಲ್ಲಿ ವಿವಿಧ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. 2013-18ರಲ್ಲಿ ತಾವು ಸಚಿವರಾಗಿದ್ದಾಗ ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ 25,000 ಮನೆಗಳ ಹಕ್ಕು ಪತ್ರ…

ಭಾಲ್ಕಿ: ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
|

ಭಾಲ್ಕಿ: ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೀದರ (ಕರ್ನಾಟಕ ವಾರ್ತೆ) ಜೂನ್.1:- ಹುಮನಾಬಾದ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಐಟಿಐ, ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರ…

ಭಾಲ್ಕಿ: ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
|

ಭಾಲ್ಕಿ: ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೀದರ.04.ಜೂನ್.25:- 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳಿಗೆ (5ರಿಂದ 10ನೇ ತರಗತಿ) (ರಾಜ್ಯ ವಿದ್ಯಾರ್ಥಿನಿಲಯತಂತ್ರಾಶ) ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಇದ್ದಿರುತ್ತದೆ….

ದೇಶದ ಗಮನ ಸೆಳೆದ ಗ್ಯಾರಂಟಿ ಯೋಜನೆ ಯಾವುದೇ ತೊಂದರೆ ಆಗದಂತೆ ಅನುಷ್ಠಾನಗೊಳಿಸಿ-ಮೆಹರೋಜ ಖಾನ್
|

ದೇಶದ ಗಮನ ಸೆಳೆದ ಗ್ಯಾರಂಟಿ ಯೋಜನೆ ಯಾವುದೇ ತೊಂದರೆ ಆಗದಂತೆ ಅನುಷ್ಠಾನಗೊಳಿಸಿ-ಮೆಹರೋಜ ಖಾನ್

ಬೀದರ.04.ಜೂನ್.25:– ಇಡೀ ದೇಶದ ಹಾಗೂ ವಿಶ್ವದ ಗಮನ ಸೆಳೆದಿರುವ ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಡಿ ಯಾವುದೇ ರೀತಿಯ ತೊಂದರೆಯಾಗದoತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬೀದರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ಪ್ರತಿ ವರ್ಷ 52 ಸಾವಿರ ಕೋಟಿ ರೂ. ಖರ್ಚು ಮಾಡಿ ಸ್ವಾವಲಂಬಿ ಬದುಕು ಕೊಟ್ಟ ಗ್ಯಾರಂಟಿ ಯೋಜನೆಗಳು ಇಡಿ ದೇಶದ…

ಇಂದು ಜನಸ್ಪಂದನ ಕಾರ್ಯಕ್ರಮ

ಬೀದರ.04.ಜೂನ್.25:- ಬೀದರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಜಂಟಿಯಾಗಿ ಜೂನ್.4 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಮನಾಬಾದ ತಾಲ್ಲೂಕಿನ ತಹಸೀಲ್ ಕಛೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ. ಕಾರಣ ಸಾರ್ವಜನಿಕರು ಜನಸ್ಪಂದನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ತಮ್ಮ ಅಹವಾಲು ಸಲ್ಲಿಸಬೇಕೆಂದು ಹುಮನಾಬಾದ ತಹಸೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
|

ಬೀದರ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಬೀದರ.04. ಜೂನ್.25:- 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ (ಪಿಯುಸಿ, ಡಿಪ್ಲೋಮಾ, ಐಐಟಿಐ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕಾ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹರು ಅನ್‌ಲೈನ್  https://shp.karnataka.gov.in/mwd     ಮೂಲಕ ದಿನಾಂಕ: 28-06-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ…

ಔರಾದ(ಬಾ): ಪ್ರವೇಶಾತಿ ಅವಧಿ ವಿಸ್ತರಣೆ.
|

ಔರಾದ(ಬಾ): ಪ್ರವೇಶಾತಿ ಅವಧಿ ವಿಸ್ತರಣೆ.

ಬೀದರ.04.ಜೂನ್.25:- 2025-26ನೇ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್ ಔರಾದ (ಬಾ) ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್.30 ರವರೆಗೆ ವಿಸ್ತರಿಸಲಾಗಿದೆಂದು ಔರಾದ(ಬಾ) ಸರಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋರ್ಸುಗಳು ವಿವರ:  1) Civil Engg (60 Seats), 2)  Alternat Energy Technology (30 Seats), 3) Mechnical Engg (60 Seats), 4) Automation and Robotics (30 Seats), 5) Commercial Practice Kannada (30 Seats). ವಿದ್ಯಾರ್ಥಿಗಳು…

ಬೀದರ: ಜೂ.5 ರಂದು ಲೋಕಾಯುಕ್ತ ಅಹವಾಲು ಸಭೆ.
|

ಬೀದರ: ಜೂ.5 ರಂದು ಲೋಕಾಯುಕ್ತ ಅಹವಾಲು ಸಭೆ.

ಬೀದರ.04.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.5 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2 ಗಂಟೆಯಿAದ 4 ಗಂಟೆಯವರೆಗೆ ಹುಮನಾಬಾದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದು ಕೊರತೆ/ಅಹವಾಲು ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರಣ ಸಾರ್ವಜನಿಕರು ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭ ಮಾಡುತ್ತಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುತ್ತಿದ್ದರೆ…

ಮಹಿಳೆ ಕಾಣೆ: ಪತ್ತೆಗಾಗಿ ಮನವಿ
|

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ.04.ಜೂನ್.25:- ಬೀದರನ ಏರ್ ಫೋರ್ಸ ವಸತಿ ಗೃಹ ಚಿದ್ರಿ ನಿವಾಸಿಯಾದ ಪಲ್ಲವಿ ನಾಗಪ್ಪ ತಳವಾರ (ವ:24) ಇವರು ದಿನಾಂಕ: 24-05-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾಳೆ. ಕಾಣೆಯಾದ ಮಹಿಳೆಯು 5 ಅಡಿ ಎತ್ತರ ಇದ್ದು, ಕೆಂಚನೆ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೈಮೇಲೆ ಕೆಂಪು ಬಣ್ಣದ ಚೂಡಿದಾರ ಪೈಜಾಮಾ ಧರಿಸಿದ್ದು, ಹಿಂದಿ, ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾಳೆ. ಈ ಕಾಣೆಯಾದ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಗಾಂಧಿ ಗಂಜ್ ಪೊಲೀಸ್ ಠಾಣೆ ದೂರವಾಣಿ…

ಬೀದರ: ವಿದ್ಯಾರ್ಥಿಗಳ ಬಸ್ ಪಾಸ್‌ಗಾಗಿ ಅರ್ಜಿ ಆಹ್ವಾನ.
|

ಬೀದರ: ವಿದ್ಯಾರ್ಥಿಗಳ ಬಸ್ ಪಾಸ್‌ಗಾಗಿ ಅರ್ಜಿ ಆಹ್ವಾನ.

ಬೀದರ.04.ಜೂನ್.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ ವಿಭಾಗದಿಂದ 2025-26ನೇ ಸಾಲಿನ ವಿದ್ಯಾರ್ಥಿಗಳ ಬಸ್ ಪಾಸ್ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಸೇವಾ ಸಿಂಧು ಪೋರ್ಟಲ್ ಮುಖಾಂತರ ಅಥವಾ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ 30 ರೂ. ಸೇವಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ…