ಕಾಲ್ತುಳಿತ ದುರಂತ ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲು ಆದೇಶ.
ಬೆಂಗಳೂರು.05.ಜೂನ್.25:-ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಆಟಗಾರರ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಮನ್ವಯದ ಕೊರತೆ, ಅಸಮರ್ಪಕ ವ್ಯವಸ್ಥೆ ಹಾಗೂ ಸ್ಪಷ್ಟತೆಯ ಕೊರತೆ ಸೇರಿದಂತೆ ಹಲವು ಅಂಶಗಳು ಕಾರಣವಾಗಿವೆ ಎನ್ನಲಾಗುತ್ತಿದೆ. ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಗಾಯಗೊಂಡವರ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು, ‘ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ, ರ್ಯಾಲಿ ನಡೆಯುವ ಬಗ್ಗೆ ಹೆಚ್ಚಿನ ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ. ಅದೇರೀತಿ, ಆಯೋಜಕರು ಹಾಗೂ ನಮ್ಮ (ಸ್ಥಳದಲ್ಲಿ…