ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ವಿಷ್ಣುವರ್ಧನ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೋಟಗಾರಿಕೆ ವಿಶ್ವವಿದ್ಯಾನಿಲಯ ಉದ್ಯಾನಗಿರಿ ಆವರಣದ ಮುಖ್ಯ ಪ್ರೇಕ್ಷಾಗೃಹದಲ್ಲಿ ನಡೆಯುವ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ವಹಿಸುವರು. ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಉಪಸ್ಥಿತಿರುವರು. ಹೈದರಾಬಾದ್ನ ಅರೆ-ಶುಷ್ಕ ಉಷ್ಣವಲಯದ ಅಂತರರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆ ಮಹಾನಿರ್ದೇಶಕ ಹಿಮಾಂಶು ಪಾಠಕ್…