ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಭೆ:
|

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಭೆ:

ಸಂಘಟನೆ ಬಲಪಡಿಸುವಿಕೆ, ಪತ್ರಿಕಾ ದಿನಾಚರಣೆ, ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಬೀದರ್,ಜೂ.೧೧:- ಬುಧವಾರ ಬೀದರ್ ಜಿಲ್ಲಾ ಘಟಕದ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಪತ್ರಿಕಾ ಭವನದಲ್ಲಿ ಇಂದು ನಡೆದು ಸದಸ್ಯತ್ವ ನವೀಕರಣ ಮತ್ತು ಸಂಘಟನೆ ಬಗ್ಗೆ ಚರ್ಚಿಸಲಾಯಿತು. ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಇದುವರೆಗೆ ಕೈಗೊಂಡಿರುವ ಕೆಲಸ ಕಾರ್ಯಗಳ ಬಗ್ಗೆ ಸಭೆಯಲ್ಲಿ ಸಂಘದ ಅಧ್ಯಕ್ಷ ವಿಜಯಕುಮಾರ ಪಾಟೀಲ ಅವರು ಸುದೀರ್ಘವಾಗಿ ವಿವರಿಸಿದರು. ಕೆಕೆಆರ್‌ಡಿಬಿಯಿಂದ ಪತ್ರಿಕೆಗಳಿಗೆ ಜಾಹೀರಾತು ಪಡೆಯಲು ಮಾಡಿರುವ ಪ್ರಯತ್ನ ಸ್ಥಳೀಯ…

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
|

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ12.ಜೂನ್.25:-ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟಗೇರಿ ನಿವಾಸಿ ಶರಣಬಸವ ಅಂದಪ್ಪ ಮೆಣಸಿನಕಾಯಿ ಎಂಬ 47 ವರ್ಷದ ವ್ಯಕ್ತಿಯು ಜೂನ್ 07 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಕುರಿತು ಅಳವಂಡಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.55/2025 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ:ವ್ಯಕ್ತಿಯು 5.30 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದಾಗ ತಿಳಿ ಗುಲಾಬಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ…

ಗಂಗಾವತಿ ನ್ಯಾಯಾಲಯದಿಂದ ಆರೋಪಿಗೆ ಶಿಕ್ಷೆ
|

ಗಂಗಾವತಿ ನ್ಯಾಯಾಲಯದಿಂದ ಆರೋಪಿಗೆ ಶಿಕ್ಷೆ

ಕೊಪ್ಪಳ.12.ಜೂನ್25:- ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ ಆರೋಪಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರಾವಾನ್ವಿತ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದ ಫಿರ್ಯಾದುದಾರರು ಹಾಗೂ ಆರೋಪಿಯು ಸ್ನೇಹಿತಾರಾಗಿದ್ದು, ಕಳೆದ ಮೊಹರಂ ಹಬ್ಬದ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಫಿರ್ಯಾದುದಾರರು ಆರೋಪಿಗೆ ಉಳಿದ ಸ್ನೇಹಿತರ ಮುಂದೆ ಅವಮಾನ ಮಾಡಿದರು ಎಂಬ ದ್ವೇಷದಿಂದ ದಿನಾಂಕ: 27-10-2022 ರಂದು ಮಧ್ಯಾಹ್ನ 1…

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
|

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಜನ ಜಾಗೃತಿ ಮೂಡಿಸಬೇಕಿದೆ- ಜಿಲ್ಲಾಧಿಕಾರಿ ನಲಿನ್ ಅತುಲ್ ಕೊಪ್ಪಳ.12.ಜೂನ್.25:- ಮಕ್ಕಳೇ ದೇಶದ ಭವಿಷ್ಯದ ಪ್ರಜೆಗಳಾಗಿರುವುದರಿಂದ ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸಮಾಜವನ್ನು ರೂಪಿಸಬೇಕು. ಸಮಾಜದ ಅನಿಷ್ಟ ಪದ್ದತಿಯಾದ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಈ ಕುರಿತು ಜನರಿಗೆ ತಿಳಿ ಹೇಳಬೇಕಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು. ಗುರುವಾರದಂದು ಜಿಲ್ಲಾ ಪಂಚಾಯತ್‌ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು…

ಜೂನ್ 14  ರಂದು ವಿದ್ಯುತ್ ವ್ಯತ್ಯಯ
|

ಜೂನ್ 14  ರಂದು ವಿದ್ಯುತ್ ವ್ಯತ್ಯಯ

ಕೊಪ್ಪಳ.12.ಜೂನ್.25:- ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ 110 ಕೆ.ವಿ ಕೊಪ್ಪಳ ಸ್ಟೇಷನ್ ಹಾಗೂ 33 ಕೆ.ವಿ ಕಿನ್ನಾಳ ಸ್ಟೇಷನ್‌ನ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ, ಜೂನ್ 14 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 04 ಗಂಟೆಯವರೆಗೆ ಸ್ಟೇಷನ್‌ಗಳ ವ್ಯಾಪ್ತಿಗೆ ಒಳಪಡುವ ಮಾರ್ಗಗಳಲ್ಲಿ ಹಾಗೂ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು. 110 ಕೆ.ವಿ ಕೊಪ್ಪಳ ಸ್ಟೇಷನ್ ಹಾಗೂ 33 ಕೆವಿ ಕಿನ್ನಾಳ ಸ್ಟೇಷನ್‌ಗೆ ಒಳಪಡುವ ಎಫ್-3ಎಸ್.ಜಿಕಾಲೇಜ್, ಎಫ್-8 ಭಾಗ್ಯನಗರ, ಎಫ್-9 ಬನ್ನಿಕಟ್ಟಿ, ಎಫ್-10…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ
|

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ

ಕೊಪ್ಪಳ.12.ಜೂನ.25:-ಕೊಪ್ಪಳ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 09 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 09 ಅಂಗನವಾಡಿ ಕಾರ್ಯಕರ್ತೆ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ದಿನಾಂಕ: 23-09-2024 ರಿಂದ 23-10-2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲು ಕ್ರಮ ವಹಿಸಲಾಗುತ್ತಿದ್ದು,…

ಜೂ.17 ರಂದು ಗಂಗಾವತಿಯಲ್ಲಿ ತಾಲ್ಲೂಕು ಮಟ್ಟದ ಕೆಡಿಪಿ ಸಭೆ
|

ಜೂ.17 ರಂದು ಗಂಗಾವತಿಯಲ್ಲಿ ತಾಲ್ಲೂಕು ಮಟ್ಟದ ಕೆಡಿಪಿ ಸಭೆ

ಕೊಪ್ಪಳ.12.ಜೂನ್.25: – ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕುಗಳ 2025-26ನೇ ಸಾಲಿನ ತಾಲೂಕಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಸಭೆಯನ್ನು ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ತಾಲ್ಲೂಕು ಪಂಚಾಯತಿಯ ಮಂಥನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ವಹಿಸಿಕೊಳ್ಳುವರು. ಆದ್ದರಿಂದ ತಾಲೂಕಾ ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಏಪ್ರಿಲ್-2025 ರಿಂದ ಮೇ-2025 ರ ಅಂತ್ಯದವರೆಗೆ…

ಫ್ಯಾಶನ್ ಡಿಸೈನರ್ ತರಬೇತಿಗೆ ಅರ್ಜಿ ಆಹ್ವಾನ
|

ಫ್ಯಾಶನ್ ಡಿಸೈನರ್ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ.12.ಜೂನ್.25:-ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಕೊಪ್ಪಳ ಇವರ ವತಿಯಿಂದ 2024-25 ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಗಳನ್ನು ನೀಡಲು ಗಂಗಾವತಿಯ ಮೆಟ್ರೋ ಸೋಷಿಯಲ್ ಎಜುಕೇಷನ್ ಟ್ರಸ್ಟ್ ಸಂಸ್ಥೆಯಿoದ ಅಸಿಸ್ಟೆಂಟ್ ಫ್ಯಾಶನ್ ಡಿಸೈನರ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ 10ನೇ ತರಗತಿ ಮುಗಿಸಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಆಸಕ್ತ ಮತ್ತು ಅರ್ಹ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಆಧಾರ್…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
|

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು.ಗ್ರಾ.ಜಿ.12.ಜೂನ್.25:- ಚಾಮರಾಜೇಂದ್ರ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಜೂನ್ 16 ಸಂಜೆ 5.30 ಗಂಟೆಯೊಳಗೆ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದ್ದು, ಜೂನ್ 26 ರಂದು 11.00 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ www.mysore.nic.in ಮತ್ತು www.cavmysore.karnataka.gov.in ವೆಬ್ಸೈಟ್ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಿಗಧಿಪಡಿಸಿದ ಗೌರವ ಸಂಭಾವನೆಯನ್ನು ಅತಿಥಿ ಉಪನ್ಯಾಸಕರಿಗೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ…

ಕೌಶಲ್ಯಾಭಿವೃದ್ದಿ ತರಬೇತಿಗೆ ಹಾಗೂ ಸ್ಟೈಪೆಂಡ್’ಗೇ ಅರ್ಜಿ ಆಹ್ವಾನ
|

ಕೌಶಲ್ಯಾಭಿವೃದ್ದಿ ತರಬೇತಿಗೆ ಹಾಗೂ ಸ್ಟೈಪೆಂಡ್’ಗೇ ಅರ್ಜಿ ಆಹ್ವಾನ

ಬೆಂಗಳೂರು ಗ್ರಾ.ಜಿ.12.ಜೂನ್.25:- 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು  ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು…