ಗುಲಬರ್ಗಾ ವಿಶ್ವವಿದ್ಯಾಲಯ | 126 ಹೊರಗುತ್ತಿಗೆ ನೌಕರರಿಗೆ ಕತ್ತರಿ
|

ಗುಲಬರ್ಗಾ ವಿಶ್ವವಿದ್ಯಾಲಯ | 126 ಹೊರಗುತ್ತಿಗೆ ನೌಕರರಿಗೆ ಕತ್ತರಿ

ಅವಿಭಾಜಿತ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ದಶಕಗಳ ಹಿಂದೆಯೇ ಪ್ರಭಾವ ಬಳಸಿಕೊಂಡು, ಇಲ್ಲದ ಹುದ್ದೆಗಳನ್ನು ಸೃಷ್ಟಿಸಿ ಹೊರಗುತ್ತಿಗೆ ಆಧಾರದಲ್ಲಿ ನುಸುಳಿ ಬಂದು ಆರ್ಥಿಕ ಹೊರೆಯಾದ ಹಾಗೂ ಹೆಚ್ಚುವರಿಯಾದ 126 ಹೊರಗುತ್ತಿಗೆ ನೌಕರರ ಕಡಿತಕ್ಕೆ ವಿಶ್ವವಿದ್ಯಾಲಯ ಮುಂದಾಗಿದೆ. ಗರಿಷ್ಠ ಬಳಕೆಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲವನ್ನು ಕಡಿತ ಮಾಡಿ, ವಿಶ್ವವಿದ್ಯಾಲಯದ ಆಡಳಿತ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಅಗತ್ಯ ಇರುವಷ್ಟು ಮಾನವ ಸಂಪನ್ಮೂಲವನ್ನು ಉಳಿಸಿಕೊಳ್ಳಬೇಕು. ಹೆಚ್ಚುವರಿಯಾಗಿರುವ ಹೊರಗುತ್ತಿಗೆಯ ನೌಕರರನ್ನು ಕಡಿತ ಮಾಡಿ, ಪರಿಷ್ಕೃತ ಪಟ್ಟಿಯನ್ನು ನೀಡಿದರೆ ಮಾತ್ರವೇ ಸಿಬ್ಬಂದಿಯ ವೇತನ ಮಂಜೂರು ಮಾಡುತ್ತೇವೆ. ಇಲ್ಲದಿದ್ದರೆ…

ಭಾರತ ಎಂದಿಗೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಒಪ್ಪಿಕೊಂಡಿಲ್ಲ, ಎಂದಿಗೂ ಸ್ವೀಕರಿಸುವುದಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ
| |

ಭಾರತ ಎಂದಿಗೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಒಪ್ಪಿಕೊಂಡಿಲ್ಲ, ಎಂದಿಗೂ ಸ್ವೀಕರಿಸುವುದಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ

ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಭಾರತವು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಎಂದಿಗೂ ಸ್ವೀಕರಿಸುವುದಿಲ್ಲ ಮತ್ತು ಅದನ್ನು ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೃಢವಾಗಿ ತಿಳಿಸಿದ್ದಾರೆ. ಶ್ರೀ ಮೋದಿ ಅವರು ಅಧ್ಯಕ್ಷ ಟ್ರಂಪ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಇತ್ತೀಚಿನ ಆಪರೇಷನ್ ಸಿಂಧೂರ್ ಬಗ್ಗೆ ಚರ್ಚಿಸಿದರು ಮತ್ತು ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಇತ್ತೀಚಿನ ಮಿಲಿಟರಿ ಕ್ರಮವನ್ನು ನಿಲ್ಲಿಸಲು ಅಮೆರಿಕದಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ…

ಆಂಧ್ರಪ್ರದೇಶ: ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ 3 ಉನ್ನತ ಮಾವೋವಾದಿ ನಾಯಕರು ಹತ್ಯೆ

ಆಂಧ್ರಪ್ರದೇಶ: ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ 3 ಉನ್ನತ ಮಾವೋವಾದಿ ನಾಯಕರು ಹತ್ಯೆ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಕೊಂಡಮೊಡಲು ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿ ಮತ್ತು ಶಸ್ತ್ರಸಜ್ಜಿತ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಪ್ರಮುಖ ಮಾವೋವಾದಿ ನಾಯಕರು ಸಾವನ್ನಪ್ಪಿದ್ದಾರೆ. ಮೃತರನ್ನು ವಿಶೇಷ ವಲಯ ಮಾವೋವಾದಿ ಸಮಿತಿ ಸದಸ್ಯೆ ಮತ್ತು ಮೃತ ಮಾವೋವಾದಿ ನಾಯಕ ಚಲಪತಿ ರಾವ್ ಅವರ ಪತ್ನಿ ಅರುಣಾ, ಕೇಂದ್ರ ಮಾವೋವಾದಿ ಸಮಿತಿ ಸದಸ್ಯ ಗಜರ್ಲಾ ರವಿ ಅಲಿಯಾಸ್ ಉದಯ್ ಮತ್ತು ಎಒಬಿ ವಿಶೇಷ ವಲಯ ಮಾವೋವಾದಿ ಸಮಿತಿಯ ಎಸಿಎಂ ಅಂಜು ಎಂದು ಗುರುತಿಸಲಾಗಿದೆ….

ಸಚಿವ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತ.
|

ಸಚಿವ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತ.

ಕೊಪ್ಪಳ.18.ಜೂನ್.25:-  ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಕ್ಯಾಬಿನೆಟ್ ಸಚಿವರಾದ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ವಾಹನದಲ್ಲಿದ್ದ ಎಎಸ್‌ಐಗೆ ಗಂಭೀರ ಗಾಯಗಳಾಗಿವೆ. ಕೊಪ್ಪಳ ಜಿಲ್ಲೆಯಲ್ಲಿ ಈ ಘಡನೆ ನಡೆದಿದ್ದು, ಸಚಿವರು ಕನಕಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಚಿವ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ವಾಹನದಲ್ಲಿದ್ದ ಎಎಸ್‌ಐಗೆ ಗಂಭೀರ ಗಾಯಗಳಾಗಿವೆ. ಕೊಪ್ಪಳ ಜಿಲ್ಲೆಯಲ್ಲಿ ಈ ಘಡನೆ ನಡೆದಿದ್ದು, ಸಚಿವರು ಕನಕಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಚಿವ ಶಿವರಾಜ್ ತಂಗಡಗಿ ಅವರು ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ…

ಮಾದರಿ ಗ್ರಾಮಪಂಚಾಯತಿ ಸದಸ್ಯ ಗುರುಲಿಂಗಯ್ಯ.
|

ಮಾದರಿ ಗ್ರಾಮಪಂಚಾಯತಿ ಸದಸ್ಯ ಗುರುಲಿಂಗಯ್ಯ.

ಚಾಮರಾಜನಗರ.18.ಜೂನ್.25:- ಯಳಂದೂರು: ಸರಕಾರಿ ಶಾಲೆ ಮತ್ತು ಅಂಗನವಾಡಿಗಳಲ್ಲಿ ಕಡು ಬಡವರ ಮಕ್ಕಳಿರುವುದರಿಂದ ಪಂಚಾಯತಿಯ ಅನುದಾನವನ್ನು ಸದ್ಬಳಿಕೆ ಮಾಡಿಕೊಂಡು ಚೇರ್, ಆಟಿಕೆ ಸಾಮಾನುಗಳು ಹಾಗೂ ಸುಸಜ್ಜಿತ ಆಟದ ಮೈದಾನವನ್ನು ಮಾಡಿ ಹಾಗೂ ಗ್ರಾಮದ ಪ್ರಮುಖ ಸರ್ಕಲ್ ಗಳಿಗೆ ಹೈಮಾಸ್ಟ್ ದೀಪವನ್ನು ಅಳವಡಿಸಿರುವ ಯುವ ನಾಯಕ ಕೆಸ್ತೂರು ಗ್ರಾಮಪಂಚಾಯತಿ ಸದಸ್ಯ ಗುರುಲಿಂಗಯ್ಯ ಮಾದರಿ ಗ್ರಾಮಪಂಚಾಯತಿ ಸದಸ್ಯರಾಗಿದ್ದಾರೆ. ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಗ್ರಾಮಪಂಚಾಯತಿ ಸದಸ್ಯ ಗುರುಲಿಂಗಯ್ಯ ರವರು ನಾಲ್ಕನೇ ವಾರ್ಡ್‌ ನ ಸದಸ್ಯರಾಗಿದ್ದಾರೆ ತುಂಬಾ ಸರಳವಾದ ಜೀವನವನ್ನು ಮಾಡುತ್ತಿದ್ದಾರೆ ಇವರ…

ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.!
|

ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು.18.ಜೂನ್.25:- ರಾಜ್ಯ ಸರ್ಕಾರ ಸಮುದಾಯದ ವಿದ್ಯಾರ್ಥಿಗಳಿಗೆ ಶುಭ ಸುಧಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೋತ್ಸಾಹಧನ ವಿವರ: PUC 2nd ದ್ವಿತೀಯ ಪಿಯುಸಿ ರೂ.20 ಸಾವಿರ, Degree ಪದವಿ ರೂ.25 ಸಾವಿರ, ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್ PG ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30.ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ. ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು…

ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಎಲಾಖೆ ಆದೇಶ
|

ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಎಲಾಖೆ ಆದೇಶ

ಬೆಂಗಳೂರು.18.ಜೂನ್.25:- ರಾಜ್ಯ ಸರ್ಕಾರ 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಸಾಮಾನ್ಯ ಅಧಿಕಾರಿಗಳ ವರ್ಗಾವಣೆಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನೊಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು…

ಕಮಲನಗರ | ಬಸ್ ಪಲ್ಟಿ; 8 ಮಂದಿ ಗಾಯ
|

ಕಮಲನಗರ | ಬಸ್ ಪಲ್ಟಿ; 8 ಮಂದಿ ಗಾಯ

ಕಮಲನಗರ.18.ಜೂನ್.25:- ಕಮಲನಗರ ತಾಲ್ಲೂಕಿನ ಕೋಟಗ್ಯಾಳ-ಡೋಣಗಾಂವ(ಎಂ) ಕ್ರಾಸ್ ಮಧ್ಯ ರಸ್ತೆಯಲ್ಲಿ ಸಾರಿಗೆ ಬಸ್‌ನ ಸ್ಟೇರಿಂಗ್ ಜಾಮ್‍ ಆಗಿ ರಸ್ತೆ ಬದಿಯಲ್ಲಿ ಮಂಗಳವಾರ ಪಲ್ಟಿಯಾಗಿದೆ. ಎಂಟು ಜನರಿಗೆ ಗಾಯಗೊಂಡಿದ್ದಾರೆ. ಔರಾದ್‌ ಸಾರಿಗೆ ಘಟಕಕ್ಕೆ ಸೇರಿದ ಈ ಬಸ್ ಉದಗೀರ್- ಔರಾದ್ ವಾಯಾ ಕಮಲನಗರ ಮಾರ್ಗವಾಗಿ ಔರಾದ್‌ ಪಟ್ಟಣಕ್ಕೆ ತೆರಳುತ್ತಿತ್ತು. ಗಂಭೀರ ಗಾಯಗೊಂಡ ಪ್ರಯಾಣಿಕರನ್ನು ಕಮಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿರುವುದು ಈ ವೇಳೆ ಕೋಟಗ್ಯಾಳ-ಡೋಣಗಾಂವ(ಎಂ) ಕ್ರಾಸ್ ಮಧ್ಯದ ಮುಖ್ಯರಸ್ತೆಯಲ್ಲಿ ಸ್ಟೇರಿಂಗ್ ಜಾಮ್ ಆಗಿ ಬಸ್ ರಸ್ತೆ ಪಕ್ಕದ…

‘ಮಳೆಹಾನಿ’ ಸಂತ್ರಸ್ತರಿಗೆ ಪರಿಹಾರ ಹಣ ಮಂಜೂರು ಮಾಡಿ ಸರ್ಕಾರದಿಂದ  ಆದೇಶ.!
|

‘ಮಳೆಹಾನಿ’ ಸಂತ್ರಸ್ತರಿಗೆ ಪರಿಹಾರ ಹಣ ಮಂಜೂರು ಮಾಡಿ ಸರ್ಕಾರದಿಂದ  ಆದೇಶ.!

ಬೆಂಗಳೂರು.18.ಜೂನ್.25:- ರಾಜ್ಯದಲ್ಲಿ 2025-26 ನೇ ಸಾಲಿನಲ್ಲಿ ದಿನಾಂಕ: 01.04.2025 ರಿಂದ 31.05.2025 ರ ಅವಧಿಯಲ್ಲಿ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರವನ್ನು ಪಾವತಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಅತಿವೃಷ್ಟಿ / ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ | ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ…

ರಾಜ್ಯ ಸರ್ಕಾರ ’16 IAS ಅಧಿಕಾರಿ’ ವರ್ಗಾವಣೆ ಆದೇಶ.
|

ರಾಜ್ಯ ಸರ್ಕಾರ ’16 IAS ಅಧಿಕಾರಿ’ ವರ್ಗಾವಣೆ ಆದೇಶ.

ಬೆಂಗಳೂರು.18.ಜೂನ.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದಂತ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಕರ್ನಾಟಕ ಲೋಕಸೇವಾ ಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಡಾ. ವಿಶಾಲ್ ಆರ್, ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದಂತ…