ಒಳಮೀಸಲಾತಿ ಜಾತಿ ಸಮೀಕ್ಷೆ ಕಾಲಾವಧಿ ಜೂ.30 ವರೆಗೆ.
ಬೆಂಗಳೂರು.23.ಜೂನ್.25:- ಒಳಮೀಸಲಾತಿ ಜಾರಿಗಾಗಿ ವೈಜ್ಞಾನಿಕ ದತ್ತಾಂಶ ನೀಡಲು ನ್ಯಾ.ಎಚ್.ಎನ್. ನಾಗಮೋಹನ್ದಾಸ್ ಏಕ ಸದಸ್ಯ ಆಯೋಗದ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಅವಧಿಯನ್ನು ರಾಜ್ಯಾದ್ಯಂತ 30 ಜೂನ್ 2025ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ವರೆಗೂ ರಾಜ್ಯಾದ್ಯಂತ ಪರಿಶಿಷ್ಟ ಜಾತಿಯ ಸಮೀಕ್ಷೆಯಲ್ಲಿ ಶೇ.91ರಷ್ಟು ಪ್ರಗತಿ ಸಾಧಿಸಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಶೇ.50ರಷ್ಟು ಮಾತ್ರ ಪ್ರಗತಿಯಾಗಿದೆ. ಆದ್ದರಿಂದ ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸಲು ಜೂ.23ರಿಂದ 30ರ ವರೆಗೆ ಅವಧಿ…