ಶಿಷ್ಯವೇತನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ
|

ಶಿಷ್ಯವೇತನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.27.ಜೂನ್.25:-  IISC, IIT Artificial Intelligence and Machine Learning  ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್ ಪದವೀಧರರಿಗೆ ಶಿಷ್ಯವೇತoನ/ ತರಬೇತಿ ನೀಡುವ ಸಂಬoಧ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಳಿರಾಮ ಕುಶಾಲರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹರು ಅರ್ಜಿಯನ್ನು ದಿನಾಂಕ: 04-07-2025 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ/ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಕಛೇರಿ ವೇಳೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಬೀದರ…

ಒತ್ತಡ ಬದುಕು ನಿವಾರಣೆಗೆ ಯೋಗ ಸಹಕಾರಿ-ನ್ಯಾ.ವಿಜಯಕುಮಾರ ಎಂ.ಆನoದಶೆಟ್ಟಿ
|

ಒತ್ತಡ ಬದುಕು ನಿವಾರಣೆಗೆ ಯೋಗ ಸಹಕಾರಿ-ನ್ಯಾ.ವಿಜಯಕುಮಾರ ಎಂ.ಆನoದಶೆಟ್ಟಿ

ಬೀದರ.27.ಜೂನ್.25:- ಒತ್ತಡ ಬದುಕು ನಿವಾರಣೆಗೆ ಯೋಗ ಸಹಕಾರಿಯಾಗಿರುವುದರಿಂದ ಎಲ್ಲರೂ ದಿನನಿತ್ಯ ಯೋಗ ಮಾಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಜಯಕುಮಾರ ಎಂ ಆನಂದಶೆಟ್ಟಿ ಹೇಳಿದರು. ಅವರು ಇತ್ತೀಚಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನ್ಯಾಯಾಲಯ ಆವರಣ ಬೀದರದಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರಾಷ್ರ‍್ಟೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಗವನ್ನು…

ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯಾಗಲೂ ಎಲ್ಲರೂ ಕೈಜೋಡಿಸಿ-ಎಸ್‌ಪಿ ಪ್ರದೀಪ ಗುಂಟಿ
|

ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯಾಗಲೂ ಎಲ್ಲರೂ ಕೈಜೋಡಿಸಿ-ಎಸ್‌ಪಿ ಪ್ರದೀಪ ಗುಂಟಿ

ಬೀದರ.27.ಜೂನ್.25:- ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ತಿಳಿಸಿದರು. ಅವರು ಮಂಗಳವಾರ ಬೀದರ ಪೊಲೀಸ್ ಉಪವಿಭಾಗದ ವತಿಯಿಂದ ಕರ್ನಾಟಕ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮಾದಕ ದ್ರವ್ಯ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಇದರಿಂದಾಗಿ ವ್ಯಕ್ತಿ ತಾನು ಏನು ಮಾಡುತ್ತಿದ್ದಾನೆ ಎಂಬುವುದರ…

ಲೈಂಗಿಕ್ ಕಿರುಕುಳ ಶೀ-ಬಾಕ್ಸ್ ಬಗ್ಗೆ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಲೈಂಗಿಕ್ ಕಿರುಕುಳ ಶೀ-ಬಾಕ್ಸ್ ಬಗ್ಗೆ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.27.ಜೂನ್.25:- ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯ ನಿಬಂದನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೆ ತರುವುದಕ್ಕೋಸ್ಕರ SHe Box Portal  ನ್ನು ಪ್ರಾರಂಭಿಸಲಾಗಿರುತ್ತದೆ. ಸದರಿ ಪೋರ್ಟಲ್, ಎಲ್ಲಾ ಸಾರ್ವಜನಿಕ, ಸರಕಾರಿ/ಖಾಸಗಿ, ಸಾರ್ವಜನಿಕ , ಸಂಘಟಿತ ಅಥವಾ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಮಹಿಳಾ ಉದ್ಯೋಗಿಯು ತನ್ನ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಲು ಹಾಗೂ ಅದರ ಸ್ಥಿತಿಯನ್ನು ಪತ್ತೆ ಹಚ್ಚಲು ಮಾರ್ಗವನ್ನು ಒದಗಿಸುತ್ತದೆ. ಈ ಪೋರ್ಟಲ್‍ನ  ಲಿಂಕ್…

ಪ್ರವೇಶಾತಿ ಅವಧಿ ವಿಸ್ತರಣೆ
|

ಪ್ರವೇಶಾತಿ ಅವಧಿ ವಿಸ್ತರಣೆ

ಬೀದರ.27.ಜೂನ್.25- ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು ಬಿ.ಯೋಕ್ ಕೋರ್ಸುಗಳಿಗೆ ಪ್ರವೇಶಾತಿ ಪಡೆಯುವ ಅವಧಿಯನ್ನು ಜುಲೈ.4 ರವರೆಗೆ ದಂಡ ರಹಿತ ಹಾಗೂ ಜುಲೈ.15 ರವರೆಗೆ ದಂಡ ಸಹಿತ ವಿಸ್ತರಿಸಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ದಿನಾಂಕ. 25-06-2025 ರವರೆಗೆ ದಂಡ ರಹಿತ ಪ್ರವೆಶಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಕುಲಪತಿಗಳ ಅನುಮೋದನೆ ಮೇರೆಗೆ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ
|

ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು.26.ಜೂನ್.25:- 2025-26ನೇ ಸಾಲಿನ ಆಯವ್ಯಯ ಘೋಷಣೆ ಸಂಖ್ಯೆ: 140- ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 3 ಲಕ್ಷಕ್ಕೂ ಅಧಿಕ ಸಿಬ್ಬಂದಿ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಅನುಮೋದನೆ ಹಾಗೂ ಸಿಬ್ಬಂದಿಗಳಿಂದ ಮಾಸಿಕ 100 ರೂಗಳ ವಂತಿಕೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ(1)ರ ಪ್ರಕಾರ ವಿಷಯದಲ್ಲಿ…

ಬಿಎಸ್‌ಎಸ್.ಕೆ. ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾರ:
|

ಬಿಎಸ್‌ಎಸ್.ಕೆ. ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾರ:

ಬೀದರ್ ಸಕ್ಕರೆ ಕಾರ್ಖಾನೆ ಅವ್ಯವಹಾರ ತನಿಖೆಗೆಈಶ್ವರ ಖಂಡ್ರೆ, ರಹೀಂಖಾನ್ ಒತ್ತಾಯ ಬೀದರ.27.ಜೂನ್.25:- ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್‌ಗಳ ಸುಮಾರು 430 ಕೋಟಿ ರೂ.ಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಚಿವರುಗಳಾದ ಈಶ್ವರ ಬಿ. ಖಂಡ್ರೆ ಮತ್ತು ರಹೀಂ ಖಾನ್ ಒತ್ತಾಯಿಸಿದ್ದಾರೆ. ವಿಧಾನಸೌಧದ ಸಮಿತಿ ಸಭಾಂಗಣದಲ್ಲಿAದು ನಡೆದ ಹಳ್ಳಿಖೇಡ್‌ನ ಬೀದರ್…

ಮಾದಕ ವಸ್ತು ಮಾರಾಟಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ-ಎಸ್‌ಪಿ ಪ್ರದೀಪ್ ಗುಂಟಿ
|

ಮಾದಕ ವಸ್ತು ಮಾರಾಟಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ-ಎಸ್‌ಪಿ ಪ್ರದೀಪ್ ಗುಂಟಿ

ಬೀದರ.27.ಜೂನ್.25:- ಮಾದಕ ವ್ಯಾಸನಿಗಳ ಹಾಗೂ ಮಾದಕ ವಸ್ತುಗಳ ಮಾರಾಟ ಗಾರರ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ನೀಡಿ, ಅಂಥವರನ್ನು ಜೈಲಿಗೆ ಕಳಿಸುವ ಕೆಲಸವನ್ನು ನಾವು ಮಾಡುತ್ತೇವೆಂದು ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದರು. ಅವರು ಗುರುವಾರ ನಗರದ ಅಂಬೇಡ್ಕರ್ ವೃತ್ತದ ಬಳಿ ಪೊಲೀಸ್ ಇಲಾಖೆಯಿಂದ ಆಯೋಜಿದ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನಾಚರಣೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರು ಸಾಮಾಜಿಕ ಜವಾಬ್ದಾರಿ…