ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ-ಸುರೇಖಾ ಕೆ.ಎ.ಎಸ್
ಬೀದರ.28.ಜೂನ್.25:- ನಾಡಿನ ರಾಜಧಾನಿ ಬೆಂಗಳೂರಿನ ಶಿಲ್ಪಿ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಕೆಂಪೇಗೌಡರವರoತಹ ಧೀಮಂತ ವ್ಯಕ್ತಿಗಳ, ಸಮರ್ಥ ಆಡಳಿತಗಾರರ ಅವಶ್ಯಕತೆಯಿದೆ ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್. ನುಡಿದರು. ಅವರು ಶುಕ್ರವಾರ ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಜನ್ಮ ದಿನದ ಪ್ರಯುಕ್ತ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಮಾತನಾಡಿದರು. ಬೆಂಗಳೂರಿನ ರಚನಾ ವಿನ್ಯಾಸವನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಖ್ಯಾತಿ ಕೆಂಪೇಗೌಡರಿಗೆ ಸಲ್ಲುತ್ತದೆ. ನಾಡ ರಕ್ಷಣೆಗಾಗಿಯೇ ಕಂಕಣಬದ್ಧರಾಗಿದ್ದ ಕುಟುಂಬದ ಕುಡಿಯಾಗಿದ್ದ ಕೆಂಪೇಗೌಡರಿಗೆ ವೀರ-ಶೂರ,…