ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಭಾರದು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
|

ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಭಾರದು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ

ಕೊಪ್ಪಳ.24.ಜುಲೈ .25: ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಅಂಗಡಿಗಳ ಮಾಲೀಕರು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮತ್ತು ಅನಧಿಕೃತವಾಗಿ ರಸಗೊಬ್ಬರ ದಾಸ್ತಾನು ಮಾಡಬಾರದು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಸಗೊಬ್ಬರ ತೈಯಾರಕ ಕಂಪನಿಯ ಮಾರ್ಕೆಟಿಂಗ್ ಅಧಿಕಾರಿಗಳು, ಕರ್ನಾಟಕ ಮಾರ್ಕೆಟಿಂಗ್ ಫೆಡರೇಶನ್ ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮದ ಅಧಿಕಾರಿಗಳು ಹಾಗೂ ರಸಗೊಬ್ಬರ, ಕೀಟನಾಶಕಗಳ ಮಾರಾಟಗಾರರ ಸಂಘದ ಅಧ್ಯಕ್ಷರಿಗೆ ಕರೆದ ಸಭೆಯಲ್ಲಿ ಮಾತನಾಡಿದರು. ರಸಗೊಬ್ಬರದ ಜೊತೆಗೆ ಜೈವಿಕ ಉತ್ತೇಜಕಗಳು, ಕೀಟನಾಶಕ…

ಹುಲಿಗಿ ಪ್ರಾ.ಆ.ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
|

ಹುಲಿಗಿ ಪ್ರಾ.ಆ.ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಕೊಪ್ಪಳ.24.ಜುಲೈ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಿಗಿ ಇವರ ಸಂಯುಕ್ತಾಶ್ರಯದಲ್ಲಿ ಆಸ್ಪತ್ರೆಯ ಆವರಣದಲ್ಲಿ ಜುಲೈ 22 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರವೀಂದ್ರನಾಥ್ ಎಂ.ಹೆಚ್. ಅವರು ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಜನಸಂಖ್ಯೆ ಹೆಚ್ಚಳಕ್ಕೆ…

ರೇಷ್ಮೆ ಇಲಾಖೆ: ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಕರೆಯಲಾಗಿದೆ
|

ರೇಷ್ಮೆ ಇಲಾಖೆ: ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಕರೆಯಲಾಗಿದೆ

ಕೊಪ್ಪಳ.24.ಜುಲೈ 25: ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ರೇಷ್ಮೆ ಇಲಾಖೆಯ ಸಿಬ್ಬಂದಿಯವರು ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ನೀರಾವರಿ ರೈತರನ್ನು ಸಂಪರ್ಕಿಸಿ ರೇಷ್ಮೆ ಕೃಷಿಯಿಂದಾಗುವ ಅನುಕೂಲಗಳ ಕುರಿತು ಹಾಗೂ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡಿ ರೇಷ್ಮೆ ಕೃಷಿಯ ವಿಸ್ತರಣೆಗೆ ಪ್ರಯತ್ನಿಸುತ್ತಿದ್ದಾರೆ. ರೇಷ್ಮೆ ಇಲಾಖೆಯಲ್ಲಿ ಈ ಕೆಳಕಂಡ ಸರಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರೈತರು…

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಪ್ರವೇಶಕ್ಕೆ ಅರ್ಜಿ ಆಹ್ವಾನ
|

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.24.ಜುಲೈ 25: ತಳಕಲ್, ಕುಕನೂರು ಮತ್ತು ಮುಧೋಳ ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಬಹು ಬೇಡಿಕೆ ಇರುವ ವಿವಿಧ ವೃತ್ತಿಗಳ ಪ್ರವೇಶಕ್ಕೆ ಆಫ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಸ್ಥೆಗಳಲ್ಲಿ ವಿದ್ಯುನ್ಮಾನ ದುರಸ್ತಿಗಾರ, ಜೋಡಣೆಗಾರ, ಮಷಿನಿಷ್ಟ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಟರ್ನರ್, ಕೊಪಾ, ಸಿ.ಎನ್.ಸಿ ಮಷನಿಂಗ್ ಟೆಕ್ನಿಷಿಯನ್, ಮೆಕ್ಯಾನಿಕ್ ಎಲೆಕ್ಟಿçಕಲ್ ವೆಹಿಕಲ್, ವರ್ಚುವಲ್ ಅನಲೈಸಸ್ ಮತ್ತು ಡಿಸೈನರ್, ಇಂಜಿನಿಯರ್ ಡಿಸೈನ್ ಟೆಕ್ನೆಷಿಯನ್, ಮ್ಯಾನುಫೆಕ್ಚರಿಂಗ್  ಪ್ರೊಸೆಸ್  ಕಂಟ್ರೋಲ್ ಮತ್ತು ಆಟೋಮೆಷನ್, ಇಂಡಸ್ಟಿçಯಲ್ ರೋಬೋಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫೆಕ್ಚರಿಂಗ್…

ಕೊಪ್ಪಳ | ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
|

ಕೊಪ್ಪಳ | ಆರ್‌ಸೆಟಿ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ.24.ಜುಲೈ.25: ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ ಅಭ್ಯರ್ಥಿಗಳಿಗೆ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸಂಸ್ಥೆಯಲ್ಲಿ 13 ದಿನಗಳ ಕೃಷಿ ಉದ್ಯಮಿ(ಕುರಿ ಸಾಕಾಣಿಕೆ, ಹೈನುಗಾರಿಕೆ) ತರಬೇತಿ ಹಾಗೂ 06 ದಿನಗಳ ಜನರಲ್ ಇಡಿಪಿ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಬ್ಯಾಂಕಿನಿoದ ಸಾಲ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು. ಅರ್ಜಿದಾರರಿಗೆ ಜುಲೈ 30 ರಂದು ಸಂದರ್ಶನ ನಡೆಯಲಿದ್ದು, ಜುಲೈ…

ಯೂರಿಯಾ ರಸಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಲಾಗಿದೆ: ಜಂಟಿ ಕೃಷಿ ನಿರ್ದೇಶಕರುಕೊಪ್ಪಳ
|

ಯೂರಿಯಾ ರಸಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಲಾಗಿದೆ: ಜಂಟಿ ಕೃಷಿ ನಿರ್ದೇಶಕರು
ಕೊಪ್ಪಳ

ಕೊಪ್ಪಳ.24.ಜುಲೈ 25: ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್ ರಿಂದ ಜುಲೈವರೆಗೆ ಯೂರಿಯಾ ರಸಗೊಬ್ಬರದ ಬೇಡಿಕೆ 31,252 ಮೆಟ್ರಿಕ್ ಟನ್ ಆಗಿದ್ದು, ಈ ವಿರುದ್ಧ 33,459 ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನು ಹೊಂದಲಾಗಿದೆ. ಇದರಲ್ಲಿ 28,757 ಮೆಟ್ರಿಕ್ ಟನ್ ರಸಗೊಬ್ಬರವನ್ನು ವಿತರಣೆ ಮಾಡಲಾಗಿದೆ. ಇನ್ನುಳಿದ 4,702 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ದಾಸ್ತಾನು ಲಭ್ಯವಿದೆ. ಈ ವಾರ  National Fertilizers Limited (NFL), Coromandel International Limited (CIL)  ಹಾಗೂ  Kribhco Fertilizer Limited     ಕಡೆಯಿಂದ ಒಟ್ಟು 3,136.73 ಮೆಟ್ರಿಕ್…

ಎಣ್ಣೆಕಾಳು ಯೋಜನೆಯಡಿ ಯಂತ್ರೋಪಕರಣ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ
|

ಎಣ್ಣೆಕಾಳು ಯೋಜನೆಯಡಿ ಯಂತ್ರೋಪಕರಣ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

ಕೊಪ್ಪಳ.24.ಜುಲೈ 25: 2025-26 ನೇ ಸಾಲಿಗೆ ರಾಷ್ಟಿçÃಯ ಖಾದ್ಯ ತೈಲ ಅಭಿಯಾನದ ಎಣ್ಣೆಕಾಳು ಯೋಜನೆಯಡಿ ಎಣ್ಣೆಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳಿAದ ವಿಸ್ತೃತ ಯೋಜನಾ ವರದಿಯೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.ರಾಷ್ಟಿçÃಯ ಖಾದ್ಯ ತೈಲ ಅಭಿಯಾನದ ಎಣ್ಣೆಕಾಳು ಯೋಜನೆಯಡಿ ಪ್ರಾಥಮಿಕ  ಮತ್ತು  ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ…

ಸಾರ್ವಜನಿಕರು 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದಸದುಪಯೋಗ ಪಡೆದುಕೊಳ್ಳಿ – ನ್ಯಾ. ಮಹಾಂತೇಶ ಎಸ್. ದರಗದ
|

ಸಾರ್ವಜನಿಕರು 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ
ಸದುಪಯೋಗ ಪಡೆದುಕೊಳ್ಳಿ – ನ್ಯಾ. ಮಹಾಂತೇಶ ಎಸ್. ದರಗದ

ಕೊಪ್ಪಳ.24.ಜುಲೈ 25: ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಈಗಾಗಲೇ ಜುಲೈ 1 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಹಮ್ಮಿಕೊಂಡಿರುವ 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು. ಅವರು ಬುಧವಾರ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ರಾಷ್ಟೀಯ ಲೋಕ್ ಅದಾಲತ್, ಮಧ್ಯಸ್ಥಿಕೆಯ ವಿಶೇಷ ಆಂದೋಲನ…

ಕೃಷಿ ಪ್ರಶಸ್ತಿ ಕಾರ್ಯಕ್ರಮ: ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ
|

ಕೃಷಿ ಪ್ರಶಸ್ತಿ ಕಾರ್ಯಕ್ರಮ: ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ಕೊಪ್ಪಳ.24.ಜುಲೈ. 25: ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಮುಂಗಾರು ಹಂಗಾಮಿನ ಬೆಳೆ ಸ್ಪಧೆðಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪ್ರಶಸ್ತಿ ಕಾರ್ಯಕ್ರಮವು ಚಾಲ್ತಿ ಯೋಜನೆಯಾಗಿದ್ದು, ಸರ್ಕಾರಿ ಆದೇಶದನ್ವಯ 2025-26ನೇ ಸಾಲಿನಲ್ಲಿಯೂ ಮುಂದುವರಿಸಲಾಗಿದ್ದು, ಕೃಷಿ ಪ್ರಶಸ್ತಿ ಮಾರ್ಗಸೂಚಿಯ ಕೆಲವು ಮಾನದಂಡಗಳನ್ನು ಪರಿಷ್ಕರಿಸಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. K-Kisan Portal ರಡಿ Citizen Login ಅಥವಾ  RSK Login   ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ /ನಾಗರಿಕ ಸೇವಾ ಕೇಂದ್ರ/ ಸ್ವತಃ ಆಸಕ್ತ…

ಕೃಷಿ ಸಿಂಚಾಯ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ
|

ಕೃಷಿ ಸಿಂಚಾಯ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ.24.ಜುಲೈ 25: ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ತಾಲೂಕಿನ ರೈತ ಭಾಂದವರು ಪ್ರಧಾನಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗಾಗಿ ಅರ್ಜಿ ಸಲ್ಲಿಸಿ, ಯೋಜನೆಯ ಸದಪಯೋಗ ಪಡೆದುಕೊಳ್ಳಬೇಕು. ಅರ್ಜಿ ನಮೂನೆ, ಆಧಾರ ಕಾರ್ಡ, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಷ್ಟ ಪಂಗಡದವರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ನೋಟ್ರಿಯೊಂದಿಗೆ ರೂ. 20 ಛಾಪಕಾಖದ (ಬಾಂಡ್), ಬ್ಯಾಂಕ ಪಾಸ್…