ಅಗ್ನಿವೀರ್ ಸೇನಾ ಭರ್ತಿ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ ಭೇಟಿ
|

ಅಗ್ನಿವೀರ್ ಸೇನಾ ಭರ್ತಿ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ ಭೇಟಿ

ರಾಯಚೂರು.09.ಆಗಸ್ಟ್.25: ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಪ್ರಕ್ರಿಯೆಯು ಆಗಸ್ಟ್ 08ರಿಂದ ಆರಂಭವಾಗಿದ್ದು, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸೇನಾ ಭರ್ತಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಅವರು, ಅಗ್ನಿವೀರ ಸೇನಾ ನೇಮಕಾರಿ ರಾಲಿಯ ಪ್ರಕ್ರಿಯೆ ಬಗ್ಗೆ ಸೇನಾ ಅಧಿಕಾರಿ ಎಆರ್‌ಓ ಮನೋಜ್ ಸೇರಿದಂತೆ ಇನ್ನಿತರ ಸೇನಾ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಆಗಸ್ಟ್ 08ರಿಂದ ಆರಂಭವಾಗಿ ಆಗಸ್ಟ್ 26ರವರೆಗೆ ನಡೆಯಲಿರುವ ಶಾರಿರೀಕ ದೇಹದಾರ್ಡ್ಯ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು…

ಅಗ್ನಿವೀರ್ ಸೇನಾ ಭರ್ತಿಗೆ ಶಾಸಕರಾದಡಾ.ಶಿವರಾಜ ಎಸ್.ಪಾಟೀಲ್ ಅವರಿಂದ ಚಾಲನೆ
|

ಅಗ್ನಿವೀರ್ ಸೇನಾ ಭರ್ತಿಗೆ ಶಾಸಕರಾದ
ಡಾ.ಶಿವರಾಜ ಎಸ್.ಪಾಟೀಲ್ ಅವರಿಂದ ಚಾಲನೆ

ರಾಯಚೂರು.೦9.ಆಗಸ್ಟ್.25:- ಆಗಸ್ಟ್ 08 ರಿಂದ ಆರಂಭವಾಗಿ ಆಗಸ್ಟ್ 26ರವರೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರಾಲಿಗೆ ರಾಯಚೂರ ನಗರ ಶಾಸಕರಾದ ಡಾ.ಎಸ್ ಶಿವರಾಜ ಪಾಟೀಲ್ ಅವರು ಆಗಸ್ಟ್ 8ರಂದು ಬೆಳಗ್ಗೆ ಚಾಲನೆ ನೀಡಿದರು. ಈ ವೇಳೆ ಸೇನಾ ಅಧಿಕಾರಿಗಳು ಮತ್ತು ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಶಾಸಕರು, ಮಹತ್ವದ ಸೇನಾ ಭರ್ತಿಗೆ ನಮ್ಮ ರಾಯಚೂರು ನಗರವನ್ನು ಆಯ್ಕೆ ಮಾಡಿದ್ದು ಹೆಮ್ಮೆಯ ವಿಷಯ. ಸೇನಾ ಭರ್ತಿಯು ಉತ್ತಮವಾಗಿ ಆಯೋಜನೆಗೊಂಡಿತು ಎನ್ನುವ ಸಂದೇಶ ರವಾನೆಯಾಗುವ ಹಾಗೆ ಅಗ್ನಿವೀರ್…

ಕೊಪ್ಪಳ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್: ಬಾಲಕಾರ್ಮಿಕ ದಾಳಿ, ವಿಶೇಷ ತಪಾಸಣೆ
|

ಕೊಪ್ಪಳ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್: ಬಾಲಕಾರ್ಮಿಕ ದಾಳಿ, ವಿಶೇಷ ತಪಾಸಣೆ

ಕೊಪ್ಪಳ.09.ಆಗಸ್ಟ್ .25: ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕೊಪ್ಪಳ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಲು ನಡೆಸಿದ ಬಾಲಕಾರ್ಮಿಕ ದಾಳಿ ಮತ್ತು ವಿಶೇಷ ತಪಾಸಣೆ ಕಾರ್ಯಾಚರಣೆಯ ನಡೆಸಲಾಯಿತು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನವದೆಹಲಿ ಹಾಗೂ ಜಿಲ್ಲಾಧಿಕಾರಿಗಳು ಕೊಪ್ಪಳ ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ” ಅಂಗವಾಗಿ  “PAN-INDIA Rescue & Rehabilitation Campaign 3.0 by NCPCR  ರಕ್ಷಣಾ ಅಭಿಯಾನ…

ಆಗಸ್ಟ್ 12ರಂದು ಲಿಂಗಸುಗೂರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
|

ಆಗಸ್ಟ್ 12ರಂದು ಲಿಂಗಸುಗೂರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ರಾಯಚೂರು.09.ಆಗಸ್ಟ್.25.: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಪುರುಷರು ಹಾಗೂ ಮಹಿಳೆಯರಿಗಾಗಿ ಲಿಂಗಸೂಗೂರು ತಾಲ್ಲೂಕಿನಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ದಸರಾ ಕ್ರೀಡಾಕೂಟವು ಆಗಸ್ಟ್ 12ರ ಬೆಳಿಗ್ಗೆ 9ಗಂಟೆಗೆ ಲಿಂಗಸುಗೂರು ತಾಲೂಕು ಹೊರಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲ್ಲೂಕ ಮಟ್ಟದ ಆಯ್ಕೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ…

ಸೇನಾ ಭರ್ತಿ: ಆಗಸ್ಟ್ 9ರಂದು ಕೊಪ್ಪಳ, ಯಾದಗಿರಿ, ಕಲಬುರಗಿ, ಬೀದರನಿಂದ 860 ಅಭ್ಯರ್ಥಿಗಳು ಭಾಗಿ.
|

ಸೇನಾ ಭರ್ತಿ: ಆಗಸ್ಟ್ 9ರಂದು ಕೊಪ್ಪಳ, ಯಾದಗಿರಿ, ಕಲಬುರಗಿ, ಬೀದರನಿಂದ 860 ಅಭ್ಯರ್ಥಿಗಳು ಭಾಗಿ.

ರಾಯಚೂರ.09.ಆಗಸ್ಟ್.25: ನಗರದ ಕೃಷಿ ವಿವಿ ಆವರಣದಲ್ಲಿ ಆರಂಭಗೊಂಡ ಅಗ್ನಿವೀರ್ ಸೇನಾ ಭರ್ತಿಯಲ್ಲಿ ಆಗಸ್ಟ್ 9ರಂದು ಕೊಪ್ಪಳ ಜಿಲ್ಲೆಯಿಂದ 83 ಅಭ್ಯರ್ಥಿಗಳು, ಯಾದಗಿರಿ ಜಿಲ್ಲೆಯಿಂದ 251 ಅಭ್ಯರ್ಥಿಗಳು, ಕಲಬುರಗಿ ಜಿಲ್ಲೆಯಿಂದ 445 ಮತ್ತು ಬೀದರ್‌ ಜಿಲ್ಲೆಯಿಂದ 81 ಅಭ್ಯರ್ಥಿಗಳು ಸೇರಿ ಒಟ್ಟು 860 ಅಭ್ಯರ್ಥಿಗಳು ಭಾಗವಹಿಸುತ್ತಿದ್ದಾರೆ. ಆಗಸ್ಟ್ 12ರಂದು ಲಿಂಗಸುಗೂರಿನಲ್ಲಿ ತಾಲೂಕು ಮಟ್ಟದ ದಸರಾ

ಕೈಗಾರಿಕಾ, ವಾಣಿಜ್ಯ ಇಲಾಖೆಯಿಂದ ವಿವಿಧ ಸಲಕರಣೆ ವಿತರಣೆಗೆ ಅರ್ಜಿ ಆಹ್ವಾನ
|

ಕೈಗಾರಿಕಾ, ವಾಣಿಜ್ಯ ಇಲಾಖೆಯಿಂದ ವಿವಿಧ ಸಲಕರಣೆ ವಿತರಣೆಗೆ ಅರ್ಜಿ ಆಹ್ವಾನ

ರಾಯಚೂರು.09.ಆಗಸ್ಟ್.25: ಇಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ವೃತ್ತಿನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಣೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ವೃತ್ತಿಯಲ್ಲಿ ತರಬೇತಿ ಹೊಂದಿರುವ ಹಾಗೂ ವೃತ್ತಿಪರ ಮಹಿಳೆಯರಿಗೆ ಉಚಿತವಾಗಿ ಮೋಟಾರ್ ಸಹಿತ ಹೊಲಿಗೆಯಂತ್ರ ವಿತರಣೆಗೆ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಗಾರೆಕೆಲಸ, ಮರಗೆಲಸ, ಕಮ್ಮಾರಿಕೆ, ದೋಭಿ, ಕ್ಷೌರಿಕ ಹಾಗೂ ಕಲ್ಲುಕುಟಿಕ ವೃತ್ತಿನಿರತ ಕುಶಲಕರ್ಮಿಗಳಿಗೆ…

ಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ.
|

ಅಗ್ನಿವೀರ್ ಸೇನಾ ಭರ್ತಿ: ಮೊದಲ‌ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ.

ರಾಯಚೂರು.09.ಆಗಸ್ಟ್ .25:- ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್ 8ರಂದು ಅಗ್ನಿವೀರ್ ಸೇನಾ ನೇಮಕಾತಿ ಭರ್ತಿ ಕಾರ್ಯಕ್ರಮ ಮೊದಲ ದಿನ ಯಶಸ್ವಿಯಾಗಿ ನಡೆದಿದೆ. ಈ ಸೇನಾ ನೇಮಕಾತಿಗೆ, ದೇಶಸೇವೆ ಬಯಸಿದ ಅನೇಕ ವಿವಿಧ ಜಿಲ್ಲೆಗಳ ಯುವಕರು ಉತ್ಸಾಹದಿಂದ ಭಾಗಿಯಾಗಲಿದ್ದು, ಮೊದಲ ದಿನ ಕೊಪ್ಪಳ ಜಿಲ್ಲೆಯಿಂದ ಒಟ್ಟು 587 ಅಭ್ಯರ್ಥಿಗಳು ವರದಿ ಮಾಡಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು. ಶಾರೀರಿಕ ಪರೀಕ್ಷೆ, ಓಟ, ದೈಹಿಕ ಸಾಮರ್ಥ್ಯ ಪರೀಕ್ಷೆ ಸೇರಿದಂತೆ  ಕಠಿಣ ಪರೀಕ್ಷಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ 518 ಯುವಕರು…

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ: ಕೃಷ್ಣ ಶಾಂವತಗೇರಾ
|

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ: ಕೃಷ್ಣ ಶಾಂವತಗೇರಾ

ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು.09.ಆಗಸ್ಟ್.25: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಆ.10ರಂದು ಜಿಲ್ಲೆಯ ಸಿಂಧನೂರಿನ ಶ್ರೀ ಸತ್ಯ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾಂವತಗೇರಾ ಅವರು ಹೇಳಿದರು. ಆಗಸ್ಟ್ 08ರ ಶುಕ್ರವಾರ ದಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ…

ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
|

ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ರಾಯಚೂರು.09.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿವಿಧ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮೈಕ್ರೋ ಕ್ರೆಡಿಟ್ ಹಣಕಾಸು, ಸ್ವಯಂ ಉದ್ಯೋಗ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಖರೀದಿ ಯೋಜನೆಗೆ ಸೆಪ್ಟಂಬರ್ 10ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ ಅರ್ಜಿ…

ಆಗಸ್ಟ್ 28 ರಿಂದ 30 ರವರೆಗೆ ರಾಯಚೂರ ಜಿಲ್ಲೆಯಲ್ಲಿ ಉಪ ಲೋಕಾಯುಕ್ತ ಬಿ.ವೀರಪ್ಪ  ಪ್ರವಾಸ
|

ಆಗಸ್ಟ್ 28 ರಿಂದ 30 ರವರೆಗೆ ರಾಯಚೂರ ಜಿಲ್ಲೆಯಲ್ಲಿ ಉಪ ಲೋಕಾಯುಕ್ತ ಬಿ.ವೀರಪ್ಪ  ಪ್ರವಾಸ

ರಾಯಚೂರು.09.ಆಗಸ್ಟ್.25: ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಆಗಸ್ಟ್ 28 ರಿಂದ 30 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ರಾಯಚೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸತೀಶ್ ಎಸ್ ಚಿಟಗುಬ್ಬಿ ಅವರು ತಿಳಿಸಿದ್ದಾರೆ. ಆಗಸ್ಟ್ 29ರ ಬೆಳಿಗ್ಗೆ 10ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಜಿಲ್ಲಾ ಶಿಬಿರ ಕೈಗೊಳ್ಳಲಿದ್ದು, ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ತಮಗೆ ಕಾನೂನು…