Day: 24/12/2025

  • |

    ದಿ. ಶುಕ್ಲ ಅವರಿಗೆ ನುಡಿ ನಮನ

    ಕಲಬುರಗಿ: ಹಿಂದಿ ಸಾಹಿತ್ಯ ಕ್ಷೇತ್ರದ ದಿಗ್ಗಜ ಲೇಖಕರು, 2024ರ 59ನೆಯ ಭಾರತೀಯ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ವಿನೋದ ಕುಮಾರ ಶುಕ್ಲ ಅವರು ದಿನಾಂಕ 23.12.2025 ರಂದು ನಿಧನ ಹೊಂದಿದ ಪ್ರಯುಕ್ತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಕಲಬುರಗಿಯ ಹಿಂದಿ ವಿಭಾಗದ ವತಿಯಿಂದ ಇಂದು ಬೆಳಿಗ್ಗೆ ಮಹಾವಿದ್ಯಾಲಯದಲ್ಲಿ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ವಹಿಸಿಕೊಂಡು ವಿನೋದ ಕುಮಾರ ಶುಕ್ಲ…

  • |

    ಅಬಕಾರಿ ಇಲಾಖೆಯಿಂದ ಇ-ಹರಾಜು: ಬಿಡ್ ಆಹ್ವಾನ.

    ಕೊಪ್ಪಳ.24.ಡಿಸೆಂಬರ್ 25: ಅಬಕಾರಿ ಇಲಾಖೆಯಲ್ಲಿ ಭಾರತೀಯ ಮದ್ಯ ಅಥವಾ ವಿದೇಶ ಮದ್ಯ ಅಥವಾ ಎರಡನ್ನೂ ಮಾರಾಟ ಮಾಡಲು ಇ-ಹರಾಜು ನಡೆಸುತ್ತಿದ್ದು, ಬಿಡ್‌ಗಳನ್ನು ಆಹ್ವಾನಿಸಿದೆ. ಅಬಕಾರಿ ಇಲಾಖೆ ಭಾರತೀಯ ಮದ್ಯ ಅಥವಾ ವಿದೇಶ ಮದ್ಯ ಅಥವಾ ಎರಡನ್ನೂ ಮಾರಾಟ ಮಾಡಲು ಯಶಸ್ವಿ ಹೆಚ್-1 ಬಿಡ್ ಗಳಿಗೆ ಸಿ.ಎಲ್-2ಎ ಮತ್ತು ಸಿ.ಎಲ್-9ಎ ನಮೂನೆಗಳಲ್ಲಿ ಖಾಲಿ ಅಥವಾ ಲಭ್ಯವಿರುವ ಅಬಕಾರಿ ಸನ್ನದು ನೀಡಲು ಬಿಡ್‌ದಾರರಿಂದ ಬಿಡ್‌ಗಳನ್ನು ಆಹ್ವಾನಿಸಿದೆ. ಈ ಪ್ರಕ್ರಿಯೆಯು ಇ-ಹರಾಜು ವೆಬ್‌ಸೈಟ್  https://www.msicecommerce.com  ಮೂಲಕ ನಡೆಯಲಿದ್ದು, ಹರಾಜು ನಡೆಯುವ ಮತ್ತು…

  • |

    ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

    ಕೊಪ್ಪಳ.24.ಡಿಸೆಂಬರ್.25: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್‌ಗೌಡ ಜಿ. ರಾಮತ್ನಾಳ್ ಅವರು ಡಿಸೆಂಬರ್ 24 ರಂದು ಕೊಪ್ಪಳದಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಡಿಸೆಂಬರ್ 24 ರಂದು ಬೆಳಿಗ್ಗೆ 8 ಗಂಟೆಗೆ ಹಿರೇಅರಳಿಹಳ್ಳಿಯಿಂದ ಹೊರಟು, ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ರವರೆಗೆ ಕೊಪ್ಪಳ ಜಿಲ್ಲಾ ಪಂಚಾಯತನ ಜಿ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾದ ವಿ.ಆರ್.ಡಬ್ಲ್ಯೂ-ಎಂ.ಆರ್.ಡಬ್ಲ್ಯೂ ಮತ್ತು ಯು.ಆರ್.ಡಬ್ಲ್ಯೂ ನವರಿಗೆ ಆರ್.ಟಿ.ಇ ಪೋಕ್ಸೋ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಕುರಿತಾದ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ…

  • |

    ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

    ಶಕ್ತಿ ಯೋಜನೆಯಡಿ 10 ಕೋಟಿ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣ-ರೆಡ್ಡಿ ಶ್ರೀನಿವಾಸ ಕೊಪ್ಪಳ.24.ಡಿಸೆಂಬರ್ 25: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಈ ತಿಂಗಳ ಡಿಸೆಂಬರ್ ವರೆಗೆ ಹತ್ತು ಕೋಟಿ ಮಹಿಳೆಯರು ಉಚಿವಾಗಿ ಬಸ್ಸಿನಲ್ಲಿ ಪ್ರಯಾಣಿಸಿದ್ದು, ಇದಕ್ಕಾಗಿ ಅಂದಾಜು 375 ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು. ಅವರು ಮಂಗಳವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್…

  • ಬೀದಿ ವ್ಯಾಪಾರಿಗಳಿಗೆ ವಿಶೇಷ ಮೈಕ್ರೋ ಕ್ರೆಡಿಟ್ ಯೋಜನೆ ಸಾಲ ಮೇಳ.

    ರಾಯಚೂರು.24.ಡಿಸೆಂಬರ್ 25: ರಾಯಚೂರು ಮಹಾನಗರ ಪಾಲಿಕೆಯಿಂದ ಲೀಡ್ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅವರ ಸಹಯೋಗದೊಂದಿಗೆ ಪಿಎಂ ಬೀದಿ ಮಾರಾಟಗಾರರ ಸ್ವಾವಲಂಬಿ ನಿಧಿ (ಪಿಎಂ ಸ್ವನಿಧಿ) ಬೀದಿ ವ್ಯಾಪಾರಿಗಳಿಗೆ ವಿಶೇಷ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಾಲ ಮೇಳವು ಡಿಸೆಂಬರ್ 23ರಂದು ಯಶಸ್ವಿಯಾಗಿ ನಡೆಯಿತು.ರಾಯಚೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಲೀಡ್ ಬ್ಯಾಂಕ್ ಹಾಗೂ ಎಸ್‌ಬಿಐ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸರ್ಕಾರದ ಕಲ್ಯಾಣ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೀದಿ ವ್ಯಾಪಾರಿಗಳಿಗೆ ಪ್ರೋತ್ಸಾಹಿಸಿದರು. ಸರ್ಕಾರದ ಮಹತ್ವದ ಯೋಜನೆಯ ಬಗ್ಗೆ ರಾಯಚೂರು…