06 ಡಿಸೆಂಬರ್24 ಔರಾದ್ ಬಿ ಇಂದು 21ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಸಹಕರಿಸಿ ಮಾಜಿ ಸಚಿವ ಪ್ರಭು ಚವ್ಹಾಣ್ !
ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಬೋಂತಿ ತಾಂಡಾದ ಗೃಹ ಕಛೇರಿಯಲ್ಲಿಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಔರಾದ(ಬಾ) ವತಿಯಿಂದ ಆಯೋಜಿಸಿದ 21ನೇ ರಾಷ್ಟ್ರೀಯ ಜಾನುವಾರು ಗಣತಿ ಸಮೀಕ್ಷೆ ಅಭಿಯಾನ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿ ಪ್ರತಿ ಐದು ವರ್ಷಕ್ಕೊಮ್ಮೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದಿಂದ ಜಾನುವಾರು ಸಮೀಕ್ಷೆ ನಡೆಸಲಾಗುತ್ತೆ. ಸಾಕು ಜಾನುವಾರುಗಳು, ಪೌಲ್ಟ್ರಿ, ಬಿಡಾಡಿ ಜಾನುವಾರುಗಳ ಗಣತಿ ಮಾಡಲಿದ್ದಾರೆ. ಗಣತಿಯಲ್ಲಿ ಜಾನುವಾರುಗಳ ಜಾತಿಗಳು, ತಳಿ, ವಯಸ್ಸು, ಲಿಂಗ ಮತ್ತು ಮಾಲೀಕತ್ವದ ಸ್ಥಿತಿಗತಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು. ಹೈನುಗಾರಿಕೆ ಹಾಗೂ ಕೃಷಿ ಕ್ಷೇತ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಆಧುನಿಕ ತಂತ್ರಜ್ಞಾನದ ಮೂಲಕ ನಿಖರವಾಗಿ ಜಾನುವಾರು ಗಣತಿ ಮಾಡಲಾಗುವುದು. ಈ ಸಮೀಕ್ಷಾ ವರದಿ ಪಶುಸಂಗೋಪನೆ ಅಭಿವೃದ್ಧಿ, ಮೇವಿನ ಲಭ್ಯತೆ, ಆರೋಗ್ಯ, ಔಷಧೋಪಚಾರ, ಉತ್ಪಾದಕತೆ ಹೆಚ್ಚಿಸಲು, ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
Source: https://prajaprabhat.com
One Comment