ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 266 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಅಬಕಾರಿ ಸಚಿ ಆರ್.ಬಿ.ತಿಮ್ಮಾಪೂರ ಹೇಳಿದರು.ವಿಧಾನ ಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ನೂತನ ವಾಹನಗಳ ವಿತರಣೆ ಮತ್ತು ಅನುಕಂಪ ಆಧಾರಿತ ನೌಕರರ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ಒದಗಿಸುವ ಕೆಲಸ ಮಾಡುತ್ತಿರುವ ಅಬಕಾರಿ ಇಲಾಖೆ ಕಾರ್ಯ ಮಹತ್ವದ್ದಾಗಿದೆ. ಕಳೆದ ವರ್ಷ 35,783 ಕೋಟಿ ರೂ. ಸಂಗ್ರಹಿಸಲಾಗಿದೆ. ಈ ವರ್ಷ ಮುಖ್ಯಮಂತ್ರಿ ಅವರು ನೀಡಿರುವ 40 ಸಾವಿರ ಕೋಟಿ ರೂ. ಗುರಿ ಮುಟ್ಟಲು ಅಧಿಕಾರಿಗಳು ಶ್ರಮಿಸಬೇಕು ಎಂದರು.
ಇಲಾಖೆ ವತಿಯಿಂದ ಒಟ್ಟು 1,42, 244 ದಾಳಿ ಮಾಡಲಾಗಿದೆ. 72,411 ಪ್ರಕರಣ ದಾಖಲಿಸಲಾಗಿದೆ. 67,032 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು. ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿದರು.
ಬೆಂಗಳೂರಿನ ಜತೆಗೆ ಎರಡನೇ ದರ್ಜೆ ನಗರಗಳಾದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕಲಬುರಗಿ, ಮೈಸೂರು ಸೇರಿ ಇನ್ನಿತರ ನಗರಗಳ ಬೆಳವಣಿಗೆಗೆ ಕೈಗಾರಿಕೆ ಸೇರಿ ಇನ್ನಿತರ ಪೂರಕ ವಾತಾವರಣ ಕಲ್ಪಿಸಿದರೆ ಅಲ್ಲಿಂದಲೂ ನಿರೀಕ್ಷಿತ ಮಟ್ಟದಲ್ಲಿ ತೆರಿಗೆ ಸಂಗ್ರಹಿಸಬಹುದು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನ ಹರಿಸಬೇಕು.-ಬಸವರಾಜ ರಾಯರಡ್ಡಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ