ಹಿಂದಿ ವಿಷಯ ಶಿಕ್ಷಕರಿಗೆ ಅನ್ಯಾಯವಾಗಲು ಬಿಡುವದಿಲ್ಲ: ಶಶೀಲ್ ಜಿ ನಮೋಶಿ.!

ಕಲಬುರಗಿ:24.ಜನೆವರಿ.25:- ಕಲಬುರಗಿ ಉಪನಿರ್ದೇಶಕರ ಕಾರ್ಯಾಲಯ ಕಲ್ಬುರ್ಗಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕ ಕಲ್ಬುರ್ಗಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಜಿಲ್ಲಾ ಘಟಕ ಕಲ್ಬುರ್ಗಿ ಹಾಗೂ ಎನ್.ಪಿ.ಎಸ್. ಪದವಿ ಪೂರ್ವ ಕಾಲೇಜು ಕಲಬುರ್ಗಿ ಇವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ 10 ನೇ ಫಲಿತಾಂಶ ಸುಧಾರಣೆಗಾಗಿ ಹಿಂದಿ ಭಾಷಾ ಅಧ್ಯಾಯಗಳಿಗೆ ಒಂದು ದಿನದ ಜಿಲ್ಲಾಮಟ್ಟದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಶ್ರೀ ಶಶೀಲ್ ಜಿ. ನಮೋಶಿ ಅವರು ಉದ್ಘಾಟಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮೋಹನ್ ಹಂಚಾಟೆ ಸಹನಿರ್ದೇಶಕರು ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿ ಕಲ್ಬುರ್ಗಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಶಂಕ್ರಮ್ಮ ಢವಳಗಿ ಸಹಾಯಕ ಶಿಕ್ಷಣಾಧಿಕಾರಿಗಳು ಉಪ ನಿರ್ದೇಶಕರ ಕಾರ್ಯಾಲಯ ಕಲ್ಬುರ್ಗಿ ಉಪಸ್ಥಿತರಿದ್ದರು.

ಅತಿಥಿಗಳಾಗಿ ಶ್ರೀವಿಜಯಕುಮಾರ್ ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಲ್ಬುರ್ಗಿ ದಕ್ಷಿಣ, ಈ ನಾಗೇಂದ್ರಪ್ಪ ಅವರಾದಿ ಹಿಂದಿ ವಿಷಯ ಪರಿವೀಕ್ಷಕರು ಅಪರ ಆಯುಕ್ತರು ಕಾರ್ಯಾಲಯ ಕಲ್ಬುರ್ಗಿ, ಮಹೇಶ್ ಹೂಗಾರ ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾ ಘಟಕ ಕಲಬುರ್ಗಿ ಪ್ರಧಾನ ಕಾರ್ಯದರ್ಶಿಗಳು ಜಮೀಲ್ ಇಮ್ರಾನ್, ಚನ್ನಬಸಪ್ಪ ಬಿರಾದರ ಜಿಲ್ಲಾಧ್ಯಕ್ಷರು ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಜಿಲ್ಲಾ ಘಟಕ ಕಲ್ಬುರ್ಗಿ ವೇದಿಕೆ ಮೇಲೆ ಆಸೀನರಾಗಿದ್ದರು.

ಶ್ರೀ ಶಶೀಲ್ ಜಿ ನಮೋಶಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ NSQF ಯೋಜನೆಯ ಬಗ್ಗೆ ಕುಲಂಕುಷವಾಗಿ ಮಾತನಾಡಿ ಹಿಂದಿ ಶಿಕ್ಷಕರಿಗೆ ನ್ಯಾಯ ದೊರಕಿಸಿಕೊಡಲು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಶ್ರೀ ಮೋಹನ್ ಹಂಚಾಟೆ ನಮ್ಮ ಅಧ್ಯಕ್ಷೀಯ ನುಡಿಗಳನ್ನು ಹೇಳುತ್ತ ಹಿಂದಿ ವಿಷಯದಲ್ಲಿ ಜಿಲ್ಲೆಯ ಎಲ್ಲಾ ಶಾಲೆಯ ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ಹಾಗೂ ಉತ್ತಮ ಫಲಿತಾಂಶ ಸಾಧಿಸಲು ಶಿಕ್ಷಕರಿಗೆ ಕಿವಿ ಮಾತು ಹೇಳಿದರು.

ಕಲ್ಬುರ್ಗಿ ಪಟ್ಟಣದ ಎನ್. ವಿ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಯಾನಂದ್ ಶಾಸ್ತ್ರಿ ಅವರು ರಾಷ್ಟ್ರದ ಕಥೆಯಲ್ಲಿ ಹಿಂದಿ ಭಾಷೆಯ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಗಾರದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಇರ್ಷಾದ್ ಅಹ್ಮದ್ ಅವರು ಫಲಿತಾಂಶ ಸುಧಾರಣೆಗಾಗಿ ಶಿಕ್ಷಕರಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಹಿಂದಿ ಭಾಷೆಯಲ್ಲಿ ಸುಲಭವಾಗಿ ಉತ್ತೀರ್ಣಗೊಳಿಸುವ ತಂತ್ರಗಳನ್ನು ಹೇಳಿಕೊಟ್ಟರು.


ಕದ್ರಿ ಕಾರ್ಯಾಗಾರದಲ್ಲಿ ಹಿಂದಿ ಭಾಷೆಯ ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಸನ್ಮಾನಿಸಲಾಯಿತು. ನವಿತಾ ನಿರೂಪಿಸಿದರು. ರಾಜಕುಮಾರ್ ಪ್ರಾರ್ಥಿಸಿದರೂ ರವಿ ಜಾಧವ ಸ್ವಾಗತಿಸಿದರು. ಅಶೋಕ್ ಮೇದಾ, ಅಬ್ದುಲ್ ರಸೂಲ್, ಸಾಯಬಣ್ಣ ಲಂಗೋಟಿ, ರವಿ ಚವ್ಹಾಣ, ನಿತ್ಯಾನಂದ, ಜೆ ಎಚ್ ಪಟೇಲ್, ಮೌನೇಶ್, ಗುಲಾಮ್ ನಬಿ, ನಿಜಲಿಂಗಪ್ಪ ಮಾನವಿ, ರಾಮು ಚವ್ಹಾಣ, ವಿನೋದ, ಸಂಜೀವ್ ಮಾಲೆ, ಸಂಜೀವ್ ಸೊನ ಕಾಂಬಳೆ, ಅಹಮದ್ ಕಿಣ್ಣಿ, ಮಲ್ಲಿಕಾರ್ಜುನ, ಹರೀಶ್ ಕುಮಾರ, ಬಾಷಾ ಪಟೇಲ್ ಚನ್ನಮ್ಮ ಪಾಟೀಲ್, ಸುರೇಖಾ, ಮಂಜುಳಾ ಠಾಕೂರ್, ವಿಜಯಲಕ್ಷ್ಮಿ , ಮೆಹಬೂಬ್ ವಾಲಿಕಾರ್, ರಾಜು ಸುಂಬಡ, ಭೀಮಸಿಂಗ ರಾಠೋಡ, ಶಿವಾನಂದ ಮತ್ತು ಜಿಲ್ಲೆಯ ಎಲ್ಲಾ ತಾಲೂಕಿನ ಹಿಂದಿ ಶಿಕ್ಷಕ ಶಿಕ್ಷಕಿಯರು ಕಾರ್ಯಾಗಾರದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.

ಕರ್ಣಾಟಕ ರಾಜ್ಯದಲ್ಲಿ ಸದ್ಯ ಹಿಂದಿ ವಿಷಯಕ್ಕೆ ಪ್ರತೊಬ್  ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 3rd ಭಾಷಾ ವಿಷಯ ಅಭ್ಯಾಸ ಅನಿವಾರ್ಯ ಮಾಡಲೇಬೇಕು ಭಾಷಾ ದ್ಯಾನ್ ಇರಲೇಬೇಕು

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

4 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

6 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

8 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

8 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

8 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

8 hours ago