ಪರ್ಯಾಯ ಸಂವಿಧಾನದ ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮನುವಾದಿಗಳಿಗೆ ಧಿಕ್ಕಾರ.!

ದಾವಣಗೆರೆ.01.ಫೆ.25: ದೇಶದಲ್ಲಿ ಪರ್ಯಾಯ ಸವಿಧಾನ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರತದ ಏಕತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಪರ್ಯಾಯ ಸಂವಿಧಾನದ ಕರಡನ್ನು ಸಿದ್ಧಪಡಿಸಿ, ಅದನ್ನು ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಮನುವಾದಿಗಳಿಗೆ ಧಿಕ್ಕಾರವಿರಲಿ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಗಡಿ ಕಿಡಿಕಾರಿದರು.

ನಗರದ ಜಾಗತಿಕ ಲಿಂಗಾಯತ ಮಹಾಸಭಾ, ಜಾಗೃತ ಭಾರತ ವಿಚಾರ ವೇದಿಕೆ, ಶರಣ ಸಾಹಿತ್ಯ ಪರಿಷತ್ತು, ತಾಲ್ಲೂಕು ಘಟಕ ಹಾಗೂ ಬಸವಪರ, ದಲಿತಪರ, ಪ್ರಗತಿಪರ ಸಂಘಟನೆಗಳ ವೇದಿಕೆಯ ಪದಾಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಪರ್ಯಾಯ ಸಂವಿಧಾನ ರಚನೆಗೆ ಸಿದ್ದವಾಗಿರುವವರ ವಿರುದ್ಧ ಪ್ರತಿಭಟನೆ ನಡೆಸಿದರು.

ಮೂಲಭೂತವಾದಿಗಳು ಒಂದು ಧರ್ಮವನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಸಂವಿಧಾನ ಬದಲಾವಣೆಗೆ ಮುಂದಾಗಿರುವ ಈ ಕ್ರಮವು ಭಾರತದ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದ್ದು, ಇವರ ಈ ನಡೆಯು ಭಾರತದ ಕಾನೂನಿನ ಉಲ್ಲಂಘನೆ ಮಾತ್ರವಲ್ಲದೆ ದೇಶದ್ರೋಹಿ ಕೃತ್ಯವೂ ಆಗಿರುತ್ತದೆ ಎಂದು ಜಾಗೃತ ಭಾರತ ವಿಚಾರ ವೇದಿಕೆ ಸಂಚಾಲಕ ಡಾ.ಕೆ.ಎ.ಓಬಳೇಶ್ ಆಕ್ರೋಶವ್ಯಕ್ತಪಡಿಸಿದರು.

ಸಂವಿಧಾನ ವಿರೋಧಿ ಕೃತ್ಯವನ್ನು ದಾವಣಗೆರೆ ಜಿಲ್ಲೆಯ ಎಲ್ಲಾ ಪ್ರಗತಿಪರ ಸಂಘಟನೆಗಳು ಅತ್ಯಂತ ಉಗ್ರವಾಗಿ ಖಂಡಿಸುತ್ತಿದ್ದು, ಇದು ಹೀಗೆ ಮುಂದುವರೆದರೆ ಇದರ ವಿರುದ್ಧ ದೇಶವ್ಯಾಪ್ತಿ ಉಗ್ರ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ರುದ್ರೇ ಗೌಡ ಅವರು ಎಚ್ಚರಿಕೆ ನೀಡಿದರು.

ನಂತರ ಎಲ್ಲಾ ಸಂಘಟನೆಯ ಪದಾಧಿಕಾರಿಗಳು ಡಿಸಿ ಕಚೇರಿಗೆ ತೆರಳಿ ಮನವಿಸಲ್ಲಿಸಿದರು.

ಭಾರತ್ ದೇಶದಲ್ಲಿ ಪರ್ಯಾಯ ಸವೀಧಾನ್ ಕೂಗು ಕೇಳಿಬಂದಿದೆ ಈಗಾಗಲೇ ರಾಷ್ಟ್ರಾದ್ಯಂತ ವಿವಿಧ ಭಾಗಗಳಲ್ಲಿ ಸಂಘಟನೆಗಳು ವಿರೋಧ್ ವ್ಯಕ್ತಪಡಿಸಿತಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

2 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

6 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

6 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

6 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

6 hours ago