458 ಸಹಾಯಕ ‍ಪ್ರಾಧ್ಯಾಪಕರಿಗೆ ಯುಜಿಸಿ ವಿದ್ಯಾರ್ಹತೆ ಇಲ್ಲ ವರದಿ ಬಹಿರಂಗ!

ಬೆಂಗಳೂರು.18.ಜನವರಿ.25.ಕರ್ಣಾಟಕ ಸರ್ಕಾರ ಉನ್ನತ ಶಿಕ್ಷಣ ಇಲಾಖೆ ಅನುದಾನಿತ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿಪಡಿಸಿದ ವಿದ್ಯಾರ್ಹತೆಯ ನಿಯಮಗಳನ್ನು ಮೀರಿ ಉನ್ನತ ಶಿಕ್ಷಣ ಇಲಾಖೆ 459 ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಂಡಿದ್ದು, ಅಂಥವರಿಗೆ ಯುಜಿಸಿ ವೇತನಶ್ರೇಣಿ ನೀಡುತ್ತಿರುವುದಕ್ಕೆ ಮಹಾಲೇಖಪಾಲರ ವರದಿ ಆಕ್ಷೇಪ ವ್ಯಕ್ತಪಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 2007-08ನೇ ಸಾಲಿನಲ್ಲಿ ಹಾಗೂ ಇತರೆ ವರ್ಷಗಳಲ್ಲಿ ಅನುದಾನಿತ ಕಾಲೇಜುಗಳು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ಯುಜಿಸಿ ನಿಯಮಕ್ಕೆ ವಿರುದ್ಧವಾಗಿ ಎಂ.ಫಿಲ್‌ ಪೂರೈಸಿದ್ದ ಅಭ್ಯರ್ಥಿಗಳನ್ನೂ ನೇಮಕ ಮಾಡಿಕೊಂಡಿವೆ.

ಸರ್ಕಾರಿ ಕಾಲೇಜುಗಳಲ್ಲಿ 225 ಮತ್ತು ಅನುದಾನಿತ ಕಾಲೇಜುಗಳಲ್ಲಿ 234 ಅಭ್ಯರ್ಥಿಗಳು ಯುಜಿಸಿ ನಿಗದಿಪಡಿಸಿದ ಅರ್ಹತೆ ಹೊಂದಿಲ್ಲ ಎನ್ನುವುದನ್ನು ಲೆಕ್ಕ ಪರಿಶೋಧನಾ ವರದಿ ಉಲ್ಲೇಖಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ಎನ್‌ಇಟಿ ಇಲ್ಲವೇ ಕೆ-ಸೆಟ್‌ ತೇರ್ಗಡೆಯಾಗಿರಬೇಕು, ಪಿಎಚ್‌.ಡಿ ಪಡೆದಿರಬೇಕು.

’74 ಸರ್ಕಾರಿ ಹಾಗೂ 21 ಅನುದಾನಿತ ಸಂಸ್ಥೆಗಳಲ್ಲಿ ಯುಜಿಸಿ ನಿಗದಿತ ವಿದ್ಯಾರ್ಹತೆ ಇಲ್ಲದ ಸಹಾಯಕ ಪ್ರಾಧ್ಯಾಪಕರು ಕೆಲಸ ಮಾಡುತ್ತಿದ್ದಾರೆ. ಪಟ್ಟಿ ತರಿಸಿಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗುತ್ತದೆ. ನಂತರ ಮುಂದಿನ ಕ್ರಮಕ್ಕೆ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

prajaprabhat

Recent Posts

ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರೇ ಬೀಳಿಸುತ್ತಾರೆ: ಶ್ರೀರಾಮುಲು!

ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…

4 minutes ago

ಚುನಾವಣಾ ಪ್ರಚಾರದಲ್ಲಿ AI ಬಳಕೆಯ ಬಗ್ಗೆ ಚುನಾವಣಾ ಆಯೋಗ ಎಚ್ಚರ : ಶೀಘ್ರವೇ ಮಾರ್ಗಸೂಚಿ ಪ್ರಕಟ.!

ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ  ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…

21 minutes ago

ಕೆನಡಾದಲ್ಲಿ ಗುಂಡಿನ ಚಕಮಕಿ : 21 ವರ್ಷದ ಭಾರತೀಯ ವಿದ್ಯಾರ್ಥಿನಿ ಸಾವು.!

ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…

38 minutes ago

ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…

53 minutes ago

2030 ರ ವೇಳೆಗೆ ಭಾರತದ ರಕ್ಷಣಾ ರಫ್ತು 50,000 ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಹೊಸ ದೆಹಲಿ.19.ಏಪ್ರಿಲ್.25:- ೨೦೩೦ ರ ವೇಳೆಗೆ ಭಾರತದ ರಕ್ಷಣಾ ರಫ್ತು ೫೦,೦೦೦ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ…

4 hours ago

ಪ್ರಿಯಾಂಕ್ ಖರ್ಗೆ ವಿರುದ್ಧ ಮತ್ತೆ ಗುಡುಗಿದ ಮಣಿಕಂಠ ರಾಠೋಡ್

ಕಲಬುರಗಿ .19.ಏಪ್ರಿಲ್.25:- ಕಲಬುರಗಿಯಲ್ಲಿ ಬಿಜೆಪಿ/ ಕಾಂಗ್ರೆಸ್ ಜಟಾಪಟಿ ಮುಂದು ವರೆದಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ…

5 hours ago