15.ಜನವರಿ.25:- ರಾಜ್ಯ ಸರ್ಕಾರ ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 15 ರಿಂದ 20 ವರ್ಷ ಸೇವಾ ಅನುಭವ ಇದೆ ಇದ್ವರಿಗೆ ಸೇವಾ ಭದ್ರತೆ ನೀಡುವ ಬದಲಾಗಿ ಸರ್ಕಾರ ಅತಿಥಿ ಉಪನ್ಯಾಸಕರ ಮೇಲೆ ಅನ್ಯಾಯ ಮಾಡುತ್ತಿದೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆ ಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್ಇಟಿ)/ ರಾಜ್ಯ ಅರ್ಹತಾ ಪರೀಕ್ಷೆ (ಎಸ್ಇಟಿ) /ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) /ಪಿಎಚ್ಡಿ ಪರೀಕ್ಷೆಗಳನ್ನು ಒತ್ತಾಯಿಸದೆ ಸ್ನಾತಕೋತ್ತರ ಪದವೀಧರರನ್ನು ಮಾತ್ರ ಪರಿಗಣಿಸುವ ಆಗಸ್ಟ್ 24, 2024 ರ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದರು.
ಅರ್ಜಿ ಪರಿಶೀಲಿಸಿದ ನ್ಯಾಯಾಲಯ, ಯುಜಿಸಿ ನಿಯಮಾವಳಿಗಳು, 2018 ರಲ್ಲಿ ಸೂಚಿಸಿದಂತೆ ಕನಿಷ್ಠ ವಿದ್ಯಾರ್ಹತೆಗಳನ್ನು ಹೊಂದಿರದ ಯಾವುದೇ ಅಭ್ಯರ್ಥಿಯನ್ನು ಇಲಾಖೆಗಳು ಆಯ್ಕೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.
ಯುಜಿಸಿ ನಿಯಮಾವಳಿ ಪ್ರಕಾರ ನೇಮಕಾತಿ ಮಾಡಿದರೆ 5000ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಬಹಳಷ್ಟು ವಿವಿಧ ಸಂಘಟನೆಯ ಮುಖಾಂತರ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು ಅದರೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
ಈ 5000ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪರಿವಾರ ಹಾಗೂ ಮಕ್ಕಳ ಭವಿಷ್ಯ ಬಗ್ಗೆ ಸರ್ಕಾರ ಪರಿಹಾರ ಒದಗಿಸಬೇಕು. ಯಾವ ಕಾರಣಕ್ಕೋ ಅವರ ಮೇಲೇ ಅನ್ಯಾಯ್ ಆಗ್ಬಾರ್ದು ಸತತವಾಗಿ ಎರಡು ದಶಕಗಳಿಂದ ಸೇವೆ ಮಾಡುತ್ತಿದ್ದರೆ ಅವರಿಗೆ ಬೇರೇ ಯಾವುದೇ ಹುದ್ದೆಗೆ ಅವಕಾಶ್ಈರೋದಿಲ್ಲ ಅವರ್ ವಯಸು ಪ್ರಕಾರ ಹೊಸ ನೇಮಕಾತಿಗೆ ಅವಕಾಶ ಇಲ್ಲ. ಇದೆ ಕಾರಣಕೆ ಸರ್ಕಾರ ಅವರ್ಮೇಲೆ ಅನುಕಂಪ ತೋರಿಸಬೇಕು.
One Comment
ಹೌದು