ಬೀದರ.20.ಜೂನ್.25:- ಅರಣ್ಯ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಜೂನ್.21 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರತ್ತಾರೆ.
ಜೂನ್.21 ರಂದು ಬೆಳಿಗ್ಗೆ 7 ಗಂಟೆಗೆ ಬೀದರ ಕೋಟೆಯಲ್ಲಿ ಹಮ್ಮಿಕೊಂಡಿರುವ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ “ಯೋಗ ಸಂಗಮ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯವರೆಗೆ ಬೀದರನ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ರಾತ್ರಿ 7 ಗಂಟೆಗೆ ಬೀದರದಿಂದ ಭಾಲ್ಕಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.